ಯೋಗ ಪ್ರದರ್ಶನ:ಮತ್ತೊಂದು ವಿಶ್ವ ದಾಖಲೆಗೆ ಸಿದ್ಧವಾಗುತ್ತಿದೆ ಮೈಸೂರು
ಮೈಸೂರು, ಮೇ 15 : ಮುಂದಿನ ತಿಂಗಳು ಜೂನ್ 21ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆಯಂದು ಮತ್ತೊಂದು ವಿಶ್ವದಾಖಲೆಗೆ ಮುನ್ನುಡಿಯಿಡಲು ಅನೇಕ ಸಂಘ- ಸಂಸ್ಥೆಗಳು ಮುಂದಾಗಿವೆ. ಇದಕ್ಕೆ ಪೂರಕವೆಂಬಂತೆ ಕಳೆದ ಕೆಲವು ದಿನಗಳಿಂದಲೂ ಮೈಸೂರು ಯೋಗ ಒಕ್ಕೂಟದ ವತಿಯಿಂದ ನಗರದಲ್ಲಿ ತಾಲೀಮು ಸಹ ನಡೆಯುತ್ತಿದೆ.
ಕಳೆದ ವರ್ಷ 55,506 ಮಂದಿ ಸೇರಿ ಒಟ್ಟಾಗಿ ಯೋಗ ಕಾರ್ಯಕ್ರಮವನ್ನು ನಡೆಸಿದ್ದರು. ಈ ವರ್ಷ ಅದೇ ರೇಸ್ ಕೋರ್ಸ್ ಆವರಣದಲ್ಲಿ ಒಂದೂವರೆ ಲಕ್ಷ ಮಂದಿಯನ್ನು ಸೇರಿಸಿ ಗಿನ್ನಿಸ್ ದಾಖಲೆ ನಿರ್ಮಿಸುವ ಉದ್ದೇಶವಿದೆ. ಜಿಲ್ಲಾಡಳಿತ ಹಾಗೂ ಸುತ್ತೂರು ಮಠ ಯೋಗ ದಿನದ ಉಸ್ತುವಾರಿ ವಹಿಸಿಕೊಳ್ಳಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಅಲ್ಲದೇ 1,100 ಯೋಗ ಶಿಕ್ಷಕರನ್ನು ನಿಯೋಜಿಸಲಾಗಿದ್ದು, ಮನೆಗಳು, ಖಾಸಗಿ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳಿಗೆ ಭೇಟಿ ಮಾಡಿ ಯೋಗಾಸಕ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರುವಂತೆ ಸಿದ್ಧತೆ ನಡೆಸಿದೆ.

ಮೈಸೂರಿನ ವಿವಿಧ ಕಡೆಗಳಲ್ಲಿಯೂ ಯೋಗ ಪಟುಗಳ ಪೂರ್ವಾಭ್ಯಾಸಗಳು ನಡೆಯುತ್ತಿದ್ದು, ಮುಂದಿನ ಐದು ಭಾನುವಾರಗಳೂ ಈ ಪೂರ್ವಾಭ್ಯಾಸಗಳು ನಡೆದು, ಅಂತಾರಾಷ್ಟ್ರೀಯ ಯೋಗ ದಿನಕ್ಕೂ ಮುನ್ನ ಮೈಸೂರು ಅರಮನೆ ಮತ್ತು ರೇಸ್ ಕೋರ್ಸ್ ಮೈದಾನದಲ್ಲಿ ಅಂತಿಮ ಪೂರ್ವಾಭ್ಯಾಸ ನಡೆಸಲು ಯೋಜನೆ ರೂಪಿಸಲಾಗಿದೆ.
ಈಗಾಗಲೇ 1, 100 ಯೋಗ ಶಿಕ್ಷಕರನ್ನು ನಿಯೋಜಿಸಲಾಗಿದ್ದು, ಅವರು ಶಾಲಾ-ಕಾಲೇಜು, ಸಂಘ ಸಂಸ್ಥೆಗಳು, ದೊಡ್ಡ ದೊಡ್ಡ ಕಂಪೆನಿಗಳಿಗೆ ಹೋಗಿ ಯೋಗ ದಿನದಂದು ಯೋಗ ಪ್ರದರ್ಶನದಲ್ಲಿ ಭಾಗವಹಿಸುವಂತೆ ಮಾಡಲಾಗುವುದು. ಈ ಬಾರಿ 1.50 ಲಕ್ಷದಷ್ಟು ಯೋಗಪಟುಗಳು ಭಾಗವಹಿಸಿ, ವಿಶ್ವ ದಾಖಲೆ ಮಾಡುವ ಪ್ರಯತ್ನ ನಡೆಯುತ್ತಿದೆ.
ಈ ಬಾರಿ ವ್ಯಾಪಕ ಪ್ರಚಾರ ನೀಡಿ ಯೋಗಪಟುಗಳನ್ನು ಒಂದೆಡೆ ಕಲೆ ಹಾಕಿ ದಾಖಲೆ ನಿರ್ಮಿಸಲು ಪ್ರತಿ ಮನೆ, ಖಾಸಗಿ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳಿಗೆ ಭೇಟಿ ನೀಡಲು 1,100 ಯೋಗ ತರಬೇತುದಾರರನ್ನು ನಿಯೋಜಿಸಲಾಗಿದೆ.
2015 ಮತ್ತು 2016ರಲ್ಲಿ 10,000 ಯೋಗ ಪಟುಗಳು ಭಾಗವಹಿಸಿದ್ದರು. 2017ರಲ್ಲಿ 55,506 ಯೋಗಪಟುಗಳು ಭಾಗವಹಿಸಿ ವಿಶ್ವ ದಾಖಲೆ ಮಾಡಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಡಿ.ರಂದೀಪ್ ನೇತೃತ್ವದ ಜಿಲ್ಲಾಡಳಿತದ ಸಹಯೋಗದಿಂದ ಈ ಕಾರ್ಯ ಯಶಸ್ವಿಯಾಗಿ ನಡೆಸಲಾಗಿತ್ತು.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications