ಗಿನ್ನಿಸ್ ದಾಖಲೆಗೆ ಸಜ್ಜಾಗುತ್ತಿದ್ದಾರೆ ಮೈಸೂರಿನ 1.5 ಲಕ್ಷ ಯೋಗಪಟುಗಳು
ಮೈಸೂರು, ಮೇ 28 : ಇದೇ ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ, ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಈ ಬಾರಿ 1.5 ಲಕ್ಷದಷ್ಟು ಯೋಗಪಟುಗಳು ಯೋಗವನ್ನು ಪ್ರದರ್ಶಿಸಿ ಮತ್ತೊಮ್ಮೆ ವಿಶ್ವ ದಾಖಲೆ ಬರೆಯಲು ತಯಾರಾಗುತ್ತಿದ್ದಾರೆ. ಇದಕ್ಕಾಗಿ ಮೈಸೂರಿನ ವಿವಿಧೆಡೆ ಪ್ರತಿ ಭಾನುವಾರದಂದು ಯೋಗಪಟುಗಳು ಪೂರ್ವಾಭ್ಯಾಸವನ್ನೂ ನಡೆಸುತ್ತಿದ್ದಾರೆ.
ನಗರದ ಸೌಗಂಧಿಕಾ ಉದ್ಯಾನವನ, ಕುವೆಂಪುನಗರದ ವಿಶ್ವಮಾನವ ಉದ್ಯಾನವನ ಸೇರಿದಂತೆ ಹಲವೆಡೆ ಬೆಳಗ್ಗೆ 6.30 ರಿಂದ 7.15ರವರೆಗೆ ಪೂರ್ವಾಭ್ಯಾಸದಲ್ಲಿ ಸಾವಿರಾರು ಯೋಗಪಟುಗಳು ಭಾಗಿಯಾಗುತ್ತಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದಂದು ಗಿನ್ನಿಸ್ ದಾಖಲೆ ಸೇರಲು ಪೂರ್ವ ತಯಾರಿ ನಡೆಸುತ್ತಿದ್ದಾರೆ. ದಾಖಲೆಗೆ ಪೂರಕವಾಗಿ 45 ನಿಮಿಷಗಳ ಅಭ್ಯಾಸದಲ್ಲಿ ಯೋಗಪಟುಗಳಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮ, ಸಂಕಲ್ಪ, ಧ್ಯಾನ, ಶಾಂತಿ ಮಂತ್ರವನ್ನು ತಿಳಿಸಿಕೊಡಲಾಗುತ್ತಿದೆ.

ಮೈಸೂರು ಯೋಗ ಫೆಡರೇಶನ್ ಅಡಿಯಲ್ಲಿ ವಿವಿಧ ಯೋಗ ತಂಡಗಳು ಒಗ್ಗಟ್ಟಿನ ಮಂತ್ರ ಜಪಿಸಿದ್ದು, ಈ ಬಾರಿ ಯೋಗದಲ್ಲಿ ವಿಶ್ವದಾಖಲೆ ಬರೆಯಲು ಶ್ರಮ ಹಾಕುತ್ತಿದ್ದಾರೆ. ಜೆಎಸ್ಎಸ್ ಸಂಸ್ಥೆಯ ಶ್ರೀಹರಿ ನೇತೃತ್ವದಲ್ಲಿ ವಿವಿಧ ಯೋಗ ಸಂಘಟನೆಗಳ ಪ್ರಮುಖರು ಹಾಗೂ ಯೋಗ ಸಂಸ್ಥೆಗಳು ವಿಶ್ವದಾಖಲೆಗೆ ಒಗ್ಗಟ್ಟಿನಿಂದ ಕೈಜೋಡಿಸಿವೆ. ಮೈಸೂರು ಯೋಗ ಒಕ್ಕೂಟದ ಆಶ್ರಯದಲ್ಲಿ ಕಳೆದ 2017ರಲ್ಲಿ ಸಾಮೂಹಿಕ ಯೋಗ ಪ್ರದರ್ಶಿಸಿ ವಿಶ್ವದಾಖಲೆಗೆ ಸೇರಿದ್ದರು. ಆದರೆ ಕಳೆದ ವರ್ಷ ಮತ್ತೊಮ್ಮೆ ದಾಖಲೆ ಮಾಡುವ ಪ್ರಯತ್ನ ಕೈಗೂಡಲಿಲ್ಲ. ಹೀಗಾಗಿ 2017ರಲ್ಲಿ ಮಾಡಿರುವ ದಾಖಲೆ ಮತ್ತು ಕಳೆದ ವರ್ಷ ರಾಜಸ್ಥಾನದಲ್ಲಿ ಬಾಬಾ ರಾಮದೇವ್ ಪತಂಜಲಿ ಯೋಗ ಸಂಸ್ಥೆ ನಡೆಸಿದ್ದ ದಾಖಲೆಯನ್ನು ಈ ಬಾರಿ ಮುರಿಯುವ ಉತ್ಸಾಹದಲ್ಲಿದ್ದಾರೆ ಮೈಸೂರಿನ ಯೋಗಪಟುಗಳು. ಇನ್ನು ಈ ನಿಟ್ಟಿನಲ್ಲಿ 1.5 ಲಕ್ಷ ಯೋಗಪಟುಗಳನ್ನು ಸೇರಿಸಲು ಈಗಾಗಲೇ ಸಿದ್ಧತೆ ನಡೆದಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications