ಗಿನ್ನಿಸ್ ದಾಖಲೆಗೆ ಸಜ್ಜಾಗುತ್ತಿದ್ದಾರೆ ಮೈಸೂರಿನ 1.5 ಲಕ್ಷ ಯೋಗಪಟುಗಳು
ಮೈಸೂರು, ಮೇ 28 : ಇದೇ ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ, ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಈ ಬಾರಿ 1.5 ಲಕ್ಷದಷ್ಟು ಯೋಗಪಟುಗಳು ಯೋಗವನ್ನು ಪ್ರದರ್ಶಿಸಿ ಮತ್ತೊಮ್ಮೆ ವಿಶ್ವ ದಾಖಲೆ ಬರೆಯಲು ತಯಾರಾಗುತ್ತಿದ್ದಾರೆ. ಇದಕ್ಕಾಗಿ ಮೈಸೂರಿನ ವಿವಿಧೆಡೆ ಪ್ರತಿ ಭಾನುವಾರದಂದು ಯೋಗಪಟುಗಳು ಪೂರ್ವಾಭ್ಯಾಸವನ್ನೂ ನಡೆಸುತ್ತಿದ್ದಾರೆ.
ನಗರದ ಸೌಗಂಧಿಕಾ ಉದ್ಯಾನವನ, ಕುವೆಂಪುನಗರದ ವಿಶ್ವಮಾನವ ಉದ್ಯಾನವನ ಸೇರಿದಂತೆ ಹಲವೆಡೆ ಬೆಳಗ್ಗೆ 6.30 ರಿಂದ 7.15ರವರೆಗೆ ಪೂರ್ವಾಭ್ಯಾಸದಲ್ಲಿ ಸಾವಿರಾರು ಯೋಗಪಟುಗಳು ಭಾಗಿಯಾಗುತ್ತಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದಂದು ಗಿನ್ನಿಸ್ ದಾಖಲೆ ಸೇರಲು ಪೂರ್ವ ತಯಾರಿ ನಡೆಸುತ್ತಿದ್ದಾರೆ. ದಾಖಲೆಗೆ ಪೂರಕವಾಗಿ 45 ನಿಮಿಷಗಳ ಅಭ್ಯಾಸದಲ್ಲಿ ಯೋಗಪಟುಗಳಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮ, ಸಂಕಲ್ಪ, ಧ್ಯಾನ, ಶಾಂತಿ ಮಂತ್ರವನ್ನು ತಿಳಿಸಿಕೊಡಲಾಗುತ್ತಿದೆ.

ಮೈಸೂರು ಯೋಗ ಫೆಡರೇಶನ್ ಅಡಿಯಲ್ಲಿ ವಿವಿಧ ಯೋಗ ತಂಡಗಳು ಒಗ್ಗಟ್ಟಿನ ಮಂತ್ರ ಜಪಿಸಿದ್ದು, ಈ ಬಾರಿ ಯೋಗದಲ್ಲಿ ವಿಶ್ವದಾಖಲೆ ಬರೆಯಲು ಶ್ರಮ ಹಾಕುತ್ತಿದ್ದಾರೆ. ಜೆಎಸ್ಎಸ್ ಸಂಸ್ಥೆಯ ಶ್ರೀಹರಿ ನೇತೃತ್ವದಲ್ಲಿ ವಿವಿಧ ಯೋಗ ಸಂಘಟನೆಗಳ ಪ್ರಮುಖರು ಹಾಗೂ ಯೋಗ ಸಂಸ್ಥೆಗಳು ವಿಶ್ವದಾಖಲೆಗೆ ಒಗ್ಗಟ್ಟಿನಿಂದ ಕೈಜೋಡಿಸಿವೆ. ಮೈಸೂರು ಯೋಗ ಒಕ್ಕೂಟದ ಆಶ್ರಯದಲ್ಲಿ ಕಳೆದ 2017ರಲ್ಲಿ ಸಾಮೂಹಿಕ ಯೋಗ ಪ್ರದರ್ಶಿಸಿ ವಿಶ್ವದಾಖಲೆಗೆ ಸೇರಿದ್ದರು. ಆದರೆ ಕಳೆದ ವರ್ಷ ಮತ್ತೊಮ್ಮೆ ದಾಖಲೆ ಮಾಡುವ ಪ್ರಯತ್ನ ಕೈಗೂಡಲಿಲ್ಲ. ಹೀಗಾಗಿ 2017ರಲ್ಲಿ ಮಾಡಿರುವ ದಾಖಲೆ ಮತ್ತು ಕಳೆದ ವರ್ಷ ರಾಜಸ್ಥಾನದಲ್ಲಿ ಬಾಬಾ ರಾಮದೇವ್ ಪತಂಜಲಿ ಯೋಗ ಸಂಸ್ಥೆ ನಡೆಸಿದ್ದ ದಾಖಲೆಯನ್ನು ಈ ಬಾರಿ ಮುರಿಯುವ ಉತ್ಸಾಹದಲ್ಲಿದ್ದಾರೆ ಮೈಸೂರಿನ ಯೋಗಪಟುಗಳು. ಇನ್ನು ಈ ನಿಟ್ಟಿನಲ್ಲಿ 1.5 ಲಕ್ಷ ಯೋಗಪಟುಗಳನ್ನು ಸೇರಿಸಲು ಈಗಾಗಲೇ ಸಿದ್ಧತೆ ನಡೆದಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications