ಹುಣಸೂರಿನಲ್ಲಿ ವಿಶ್ವನಾಥ್ ಸೋಲಿಗೆ ಜಿಟಿಡಿ ಬೊಟ್ಟು ಮಾಡಿದ್ದು ಇವರತ್ತ
ಮೈಸೂರು, ಡಿಸೆಂಬರ್ 11: ಹುಣಸೂರು ಉಪ ಚುನಾವಣೆಯಲ್ಲಿ ಎಚ್ ವಿಶ್ವನಾಥ್ ಸೋಲಿಗೆ ಸಿ.ಪಿ. ಯೋಗೇಶ್ವರ್ ಕಾರಣ ಎನ್ನುವ ಮೂಲಕ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನ ಜಯಪುರದಲ್ಲಿ ಇಂದು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಯೋಗೇಶ್ವರ್ ಸಮುದಾಯದ ನಾಯಕರನ್ನು ಟೀಕಿಸಿದ್ದರಿಂದ ಒಕ್ಕಲಿಗರು ವಿಶ್ವನಾಥ್ ವಿರುದ್ಧ ತಿರುಗಿ ಬಿದ್ದರು. ಇದೇ ಅವರ ಸೋಲಿಗೆ ಕಾರಣವಾಗಿದೆ" ಎಂದು ಹೇಳಿದ್ದಾರೆ.

ಒಕ್ಕಲಿಗರು ತಿರುಗಿಬಿದ್ದದ್ದೇ ಸೋಲಿಗೆ ಕಾರಣ
ಯೋಗೇಶ್ವರ್, ಪ್ರಚಾರದ ಸಂದರ್ಭ "ಅವನ್ಯಾರು ದೇವೇಗೌಡ, ಕುಮಾರಸ್ವಾಮಿ, ಜಿ.ಟಿ.ದೇವೇಗೌಡ ಅಂತೆಲ್ಲ ಮಾತನಾಡಿದ್ರು. ದುಡ್ಡು, ಸೀರೆ, ಕುಕ್ಕರ್ ಹಂಚಿ ಗೆಲ್ಲುತ್ತೇವೆ ಎಂಬ ಹುಂಬತನ ಇತ್ತು. 5 ಕೋಟಿ ಆಮಿಷ ತೋರಿ ಒಕ್ಕಲಿಗರನ್ನು ಓಲೈಸುವ ಪ್ರಯತ್ನ ಮಾಡಿದರು. ಈ ಎಲ್ಲಾ ಅಂಶಗಳು ಸೇರಿ ಹುಣಸೂರಿನಲ್ಲಿ ವಿಶ್ವನಾಥ್ ಸೋಲಿಗೆ ಕಾರಣವಾಯಿತು" ಎಂದು ಹೇಳಿದರು.

ವಿಶ್ವನಾಥ್ ಗೆ ತಿರುಗೇಟು ನೀಡಿದ ಜಿಟಿಡಿ
ಜಿ.ಟಿ.ದೇವೇಗೌಡ ಪಕ್ಷದ್ರೋಹಿ ಎಂಬ ಹೇಳಿಕೆ ವಿಚಾರಕ್ಕೆ ವಿಶ್ವನಾಥ್ಗೆ ತಿರುಗೇಟು ನೀಡಿದ ಅವರು, "ಹುಣಸೂರಿನಲ್ಲಿ ವಿಶ್ವನಾಥ್ ಬೆಂಬಲಿಸುತ್ತೇನೆ ಅಂತ ನಾನು ಎಲ್ಲಿಯೂ ಹೇಳಿರಲಿಲ್ಲ. ಇಡೀ ಚುನಾವಣೆಯಲ್ಲಿ ನಾನು ಭಾಗವಹಿಸಲ್ಲ ಅಂತ ಮೊದಲೇ ಹೇಳಿದ್ದೆ. ಅಂದ ಮೇಲೆ ಪಕ್ಷದ್ರೋಹಿ ಹೇಗಾಗುತ್ತೆ? ನಾನು ಈಗಲೂ ತಟಸ್ಥನಾಗಿಯೇ ಇದ್ದೇನೆ" ಎಂದು ತಿಳಿಸಿದರು.

ಮಗನನ್ನು ಸಮರ್ಥಿಸಿಕೊಂಡ ದೇವೇಗೌಡರು
"ನನ್ನ ಮಗ ಸ್ವತಂತ್ರನಿದ್ದಾನೆ. ಅವನು ಸ್ವತಂತ್ರ ನಿರ್ಧಾರ ಕೈಗೊಂಡಿದ್ದಾನೆ. ಯೋಗೀಶ್ವರ್ ಟೀಕೆ ನಂತರ ನನ್ನ ಮಗ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟು ನಿರ್ಧಾರ ಕೈಗೊಂಡಿದ್ದಾನೆ" ಎನ್ನುವ ಮೂಲಕ ಕಾಂಗ್ರೆಸ್ ಬೆಂಬಲ ವಿಚಾರದಲ್ಲಿ ಮಗನನ್ನು ಸಮರ್ಥಿಸಿಕೊಂಡರು.

ವಿಶ್ವನಾಥ್ ಜನರನ್ನು ಅರ್ಥ ಮಾಡಿಕೊಳ್ಳುವಲ್ಲಿ ಸೋತರು
"ವಿಶ್ವನಾಥ್ ಹುಣಸೂರು ಕ್ಷೇತ್ರ ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾದರು. ಅವರು ಎಲ್ಲಿಂದಲೋ ಬಂದವರು. ದೇವೇಗೌಡರು, ನಾನು ಒಟ್ಟಿಗೆ ಸೇರಿ ಗೆಲ್ಲಿಸಿಕೊಂಡಿದ್ವಿ. ಆದರೆ ಅದನ್ನು ಉಳಿಸಿಕೊಳ್ಳಲು ವಿಶ್ವನಾಥ್ ಕೈಯಲ್ಲಿ ಆಗಲಿಲ್ಲ. ಹಳ್ಳಿ ಹಳ್ಳಿಯಲ್ಲಿ ಜನ ಆಕ್ರೋಶ ಹೊರಹಾಕಿದರು. ಗ್ರಾಮಗಳ ಒಳಗೆ ಬಿಟ್ಟುಕೊಳ್ಳಲಿಲ್ಲ" ಎಂದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications