ನಂಜನಗೂಡಿನಲ್ಲಿ ಕಾಡಾನೆ ತುಳಿತದಿಂದ ಆದಿವಾಸಿ ಯುವಕ ಸಾವು

ಮೈಸೂರು, ಅಕ್ಟೋಬರ್ 21; ಕಾಡಾನೆಯೊಂದು ನಡೆಸಿದ ದಾಳಿಯಿಂದಾಗಿ ಆದಿವಾಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ನಂಜನಗೂಡು ಜಿಲ್ಲೆಯಲ್ಲಿನ ವೆಂಕಟಗಿರಿ ಆದಿವಾಸಿ ಕಾಲೋನಿಯ ಕೆಂಪ ಮತ್ತು ಚಿಕ್ಕಮ್ಮ ಎಂಬುವರ ಪುತ್ರ ಗಣೇಶ (25) ಎಂದು ಗುರುತಿಸಲಾಗಿದೆ.

ನಂಜನಗೂಡು ಸಮೀಪದ ಡೋರನಕಟ್ಟೆ ಕಾಲೋನಿಯ ಸಮೀಪ ಈ ಘಟನೆ ನಡೆದಿದೆ. ಈತ ನಿನ್ನೆ ಬಂಕಹಳ್ಳಿ ಗ್ರಾಮದಿಂದ ಕೆಲಸವನ್ನು ಮುಗಿಸಿಕೊಂಡು ತನ್ನ ಮನೆಗೆ ಹಿಂದಿರುಗುತ್ತಿದ್ದ. ಈ ಸಂದರ್ಭದಲ್ಲಿ ವೆಂಕಟಗಿರಿ ಕಾಲೋನಿ ಮತ್ತು ಡೋರನಕಟ್ಟೆ ಕಾಲೋನಿಯ ಮಧ್ಯೆ ಕಾಡಾನೆಯ ತುಳಿತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಏಕಾಏಕಿ ಕಾಡಾನೆಯು ಎದುರಾಗಿದ್ದು, ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ದಾಳಿಗೆ ಸಿಲುಕಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Mysuru: Young Boy Dies By An Elephant Attack At Nanjanagud

ಸ್ಥಳಕ್ಕೆ ಹೆಡಿಯಾಲ ಅರಣ್ಯ ಇಲಾಖೆಯ ಎಸಿಎಫ್ ರವಿಕುಮಾರ್, ಆರ್.ಎಫ್.ಒ ಮಂಜುನಾಥ್ ಅವರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿದ ನಂತರ ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸುವುದಾಗಿ ಅರಣ್ಯ ಅಧಿಕಾರಿಗಳು ಮೃತನ ಕುಟುಂಬದವರಿಗೆ ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+