ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಣ್ಣೆ ಪಾರ್ಟಿಲಿ ಪ್ರೀತಿ ವಿಚಾರ: ಸ್ನೇಹಿತರು ಮಾಡಿದ್ದೇನು?

|
Google Oneindia Kannada News

ಮೈಸೂರು, ಮೇ 5: ಸೋಮವಾರವಷ್ಟೆ ರಾಜ್ಯ ಸರ್ಕಾರ ಎಲ್ಲ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಿದೆ. ಲಕ್ಷಾಂತರ ಮದ್ಯ ಪ್ರಿಯರು 45 ದಿನಗಳಿಂದ ತಡೆಹಿಡಿದಿದ್ದ ಬಾಯಿ ಚಪಲವನ್ನು ಪೂರ್ಣಗೊಳಿಸಲು ಉದ್ದನೆಯ ಸಾಲುಗಳಲ್ಲಿ ನಿಂತು ಮದ್ಯ ಖರೀದಿಸಿ ರಾತ್ರಿ ಜೋರು ಪಾರ್ಟಿ ಮಾಡಿದ್ದಾರೆ.

ಆದರೆ ಈ ಮದ್ಯದ ಪಾರ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ ನಡೆದಿದ್ದು, ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ.

ಮದ್ಯ ಪಾರ್ಟಿ ನಡೆಸುತಿದ್ದ ಮಧು, ಕಿರಣ್ ಮತ್ತು ಸತೀಶ್ ನಡುವೆ ಗಲಾಟೆ ನಡೆದಿದೆ. ಸತೀಶ್ ಪ್ರೀತಿಸುತಿದ್ದ ಎನ್ನಲಾದ ಹುಡುಗಿಯ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಇದರಿಂದ ಆಕ್ರೋಶಿತರಾದ ಮಧು ಮತ್ತು ಕಿರಣ್ ಸತೀಶನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿ ಆಗಿದ್ದಾರೆ. ಯುವತಿಯ ಪ್ರೀತಿಯ ವಿಚಾರಕ್ಕಾಗಿಯೇ ಕೊಲೆ ನಡೆಸಿರಬೇಕೆಂಬ ಶಂಕೆ ವ್ಯಕ್ತವಾಗಿದೆ.

Young Man Murder By His Friends In Mysuru

ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಕೊಲೆ ನಡೆಸಿದ ವ್ಯಕ್ತಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Riots between friends for trivial reasons at a liquor party in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X