ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಕಿ ಹಚ್ಚಿ ಯುವತಿಯ ಹತ್ಯೆ: ಮಹಿಳಾ ಸಂಘಟನೆ ಪ್ರತಿಭಟನೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 9: ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕಲ್ಲೂರು ಎಂಬಲ್ಲಿ ಭಾನುವಾರ (ನ.8) ಯುವತಿಯೊಬ್ಬಳಿಗೆ ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ತೀವ್ರವಾಗಿ ಖಂಡಿಸಿದೆ.

ಸೋಮವಾರದಂದು ಮೈಸೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಸಂಘಟನೆ ಪ್ರತಿಭಟನೆ ನಡೆಸಿದ್ದು, ಪಿರಿಯಾಪಟ್ಟಣದ ಕಲ್ಲೂರು ರಸ್ತೆಯಲ್ಲಿ ಉರಿಯುತ್ತಿರುವ ಸ್ಥಿತಿಯಲ್ಲಿ ಯುವತಿ ಪತ್ತೆಯಾಗಿದ್ದು ಖಂಡನೀಯವೆಂದರು.

 ದುರ್ನಾತ ತಾಳಲಾರದೆ ಕಾರ್ಖಾನೆಗೆ ಬೀಗ ಹಾಕಿದ ಕೂರ್ಗಳ್ಳಿ ಗ್ರಾಮಸ್ಥರು ದುರ್ನಾತ ತಾಳಲಾರದೆ ಕಾರ್ಖಾನೆಗೆ ಬೀಗ ಹಾಕಿದ ಕೂರ್ಗಳ್ಳಿ ಗ್ರಾಮಸ್ಥರು

ಕೊಲೆ ಮಾಡಿ ನಂತರ ಗುರುತು ಸಿಗಬಾರದೆಂದು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿರುವ ಶಂಕೆಯಿದೆ. ದೇಶದಲ್ಲಿ ಮಹಿಳೆಯರ ಮೇಲಿನ ಇಂತಹ ದೌರ್ಜನ್ಯ, ಕೊಲೆ ದಿನೇ ದಿನೇ ಹೆಚ್ಚುತ್ತಿದ್ದು, ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

Young Woman Killed: Womens Organization Protest In Mysuru

ನಿತ್ಯವೂ ಮಾಧ್ಯಮಗಳಲ್ಲಿ ಪ್ರಸಾರವಾಗುವ ಅಶ್ಲೀಲತೆ ಹಾಗೂ ಮಾದಕ ವಸ್ತುಗಳೇ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗಿದೆ. ಸರ್ಕಾರ ಕೂಡಲೇ ಕೂಡಲೇ ಇದೆಲ್ಲವನ್ನು ನಿಷೇಧಿಸಬೇಕು. ಈ ಕೃತ್ಯದ ಕುರಿತು ಆರೋಪಿಗಳನ್ನು ಬಂಧಿಸಲು ವಿಶೇಷ ಪೊಲೀಸ್‌ ತಂಡ ರಚಿಸಿ ಕೂಡಲೇ ಬಂಧಿಸಿ ನ್ಯಾಯಾಂಗಕ್ಕೆ ಒಪ್ಪಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

English summary
The All India Women's Cultural Organization has strongly condemned the incident in which a young woman was burnt to death in Kallur in Piriyapatna taluk of Mysuru district on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X