ಮೈಸೂರು ದಸರಾಗೆ ಕಳೆ... ನಾಳೆಯಿಂದ ಯುವಸಂಭ್ರಮ
ಮೈಸೂರು, ಸೆಪ್ಟೆಂಬರ್ 16: ನಾಡಹಬ್ಬ ದಸರಾಗೆ ಮೈಸೂರು ನಿಧಾನವಾಗಿ ತೆರೆದುಕೊಳ್ಳುತ್ತಿದೆ. ಈಗಾಗಲೇ ಹಲವು ಸಿದ್ಧತಾ ಕಾರ್ಯಗಳು ನಡೆಯುತ್ತಿದ್ದು, ಯುವ ಸಂಭ್ರಮದ ಮೂಲಕ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ.
ಈ ಬಾರಿಯ ದಸರಾ ಮಹೋತ್ಸವದ ಪ್ರಯುಕ್ತ ಯುವ ಸಂಭ್ರಮವು ಸೆ.17ರಿಂದ 26ರವರೆಗೆ ಒಟ್ಟು ಹತ್ತು ದಿನಗಳ ಕಾಲ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಸರ್ವ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ದಸರಾ ಯುವ ಸಂಭ್ರಮದ ಕುರಿತು ಮಾಹಿತಿ ನೀಡಿರುವ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ದಸರಾ ಉಪವಿಶೇಷಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ನೆರವೇರಿಸಲಿದ್ದು, ನಟ ಗೋಲ್ಡನ್ ಸ್ಟಾರ್ ಗಣೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವುದಾಗಿ ತಿಳಿಸಿದರು.
ಯುವ ಸಂಭ್ರಮ ಕಾರ್ಯಕ್ರಮಕ್ಕೆ ಈ ಬಾರಿ 260 ಕಾಲೇಜು ತಂಡಗಳು ಭಾಗವಹಿಸಿ ಪ್ರದರ್ಶನ ನೀಡಲಿದ್ದು, ಇದೊಂದು ದಾಖಲೆಯ ಪ್ರದರ್ಶನವಾಗಿದೆ. ಕಳೆದ ವರ್ಷ 162 ಕಾಲೇಜು ತಂಡಗಳು ಭಾಗವಹಿಸಿ ನೃತ್ಯ ಪ್ರದರ್ಶನ ನೀಡಿದ್ದವು. ತಂಡಗಳು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿರುವುದರಿಂದ ಎಂಟು ದಿನಗಳಿಂದ ಈ ಬಾರಿ ಹತ್ತು ದಿನಗಳಿಗೆ ಹೆಚ್ಚಿಸಲಾಗಿದೆ. ಯುವ ಸಂಭ್ರಮ ಕಾರ್ಯಕ್ರಮವು ಸಂಜೆ 5.30ರಿಂದಲೇ ಆರಂಭವಾಗಲಿದೆ.

ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರದರ್ಶನ ನೀಡುವ ಪ್ರತಿ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ನಿಗದಿಪಡಿಸಿರುವ ವಾಸ್ತವಿಕ ಬಸ್ ಪ್ರಯಾಣ ದರ, ತಾಲೀಮು ವೆಚ್ಚ ತಲಾ 100ರೂ.ನಂತೆ ವಸ್ತ್ರ ವಿನ್ಯಾಸ ವೆಚ್ಚ ತಲಾ 500ರೂ.ನಂತೆ ಕೊರಿಯೋಗ್ರಾಫರ್ ವೆಚ್ಚ ಕಾಲೇಜು ತಂಡವೊಂದಕ್ಕೆ 7,500ರೂ. ನೀಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡುವ ಕಾಲೇಜು ತಂಡಗಳನ್ನು ಆಯ್ಕೆ ಮಾಡಿ ಯುವ ದಸರಾದಲ್ಲಿ ಅವಕಾಶ ನೀಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಹಿರಿಯ ಜಾನಪದ ಕಲಾವಿದ ಪಿ.ಕೆ.ರಾಜಶೇಖರ್, ಹಿರಿಯ ಭರತನಾಟ್ಯ ಕಲಾವಿದೆ ಶೀಲ ಶ್ರೀಧರ್, ಪಾಶ್ಚಾತ್ಯ ನೃತ್ಯ ಕಲಾವಿದೆ ಪೂಜಾ ಜೋಷಿ ಸಂತೋಷ್ ಕುಮಾರ್ ಕುಸನೂರು ಮೊದಲಾದವರು ತೀರ್ಪುಗಾರರಾಗಿರಲಿದ್ದಾರೆ. ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲು ಬರುವ ಕಾಲೇಜು ತಂಡಗಳಿಗೆ ವಸತಿ ಮತ್ತು ಸಾರಿಗೆ ಸೌಲಭ್ಯವನ್ನು ಹಾಗೂ ಸುರಕ್ಷತೆಯ ದೃಷ್ಟಿಯಿಂದ ಬಯಲು ರಂಗಮಂದಿರದ ಸುತ್ತ ಮುತ್ತ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದಾಗಿ ಇದೇ ವೇಳೆ ತಿಳಿಸಿದರು.
ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷ, ಮೈಸೂರು ಡಿಸಿಸಿ ಬ್ಯಾಕ್ ವ್ಯವಸ್ಥಾಪಕ ನಿರ್ದೇಶಕ ಡಿ.ಬಿ.ಲಿಂಗಣ್ಣಯ್ಯ, ಕೆ.ಜಿ.ಎಸ್ ಕಾರ್ಯದರ್ಶಿ ಜಿ.ಎಸ್.ಸೋಮಶೇಖರ್ ಉಪಸ್ಥಿತರಿದ್ದು, ಯುವ ಸಂಭ್ರಮದ ಕುರಿತಂತೆ ಮಾಹಿತಿ ನೀಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications