YS Sharmila: ಪೊಲೀಸರ ಕೆನ್ನೆಗೆ ಹೊಡೆದಿದ್ದ ಆಂಧ್ರ ಸಿಎಂ ತಂಗಿ ವೈಎಸ್‌ ಶರ್ಮಿಳಾಗೆ ಜಾಮೀನು ಮಂಜೂರು

ಹೈದರಾಬಾದ್‌, ಏಪ್ರಿಲ್‌ 25: ಹೈದರಾಬಾದ್‌ ನಗರದ ತಮ್ಮ ನಿವಾಸದ ಹೊರಗೆ ವಾಗ್ವಾದ ವೇಳೆ ಪೊಲೀಸ್ ಸಿಬ್ಬಂದಿಯ ಕೆನ್ನೆಗೆ ಹೊಡೆದಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ವೈಎಸ್‌ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಅವರಿಗೆ ಸ್ಥಳೀಯ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರನ್ನು ಸೋಮವಾರ ಬಂಧಿಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಮೇ 8 ರವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

YS Sharmila granted bail for slapping police on cheek

ಶರ್ಮಿಳಾ ಅವರು ಜಾಮೀನು ಅರ್ಜಿ ಸಲ್ಲಿಸಿದ್ದು, ಪೊಲೀಸರಿಗೆ ನೊಟೀಸ್ ಜಾರಿ ಮಾಡಿದ ಬಳಿಕ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿತ್ತು. ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಮಂಗಳವಾರ ಆಕೆಗೆ 30,000 ರೂ.ಗಳ ಜಾಮೀನು ಬಾಂಡ್ ಮತ್ತು ಇಬ್ಬರು ಶ್ಯೂರಿಟಿಗಳನ್ನು ಒದಗಿಸುವ ಷರತ್ತುಬದ್ಧ ಜಾಮೀನು ನೀಡಿತು.

ಪೊಲೀಸ್ ಸಿಬ್ಬಂದಿಯ ದೂರಿನ ಆಧಾರದ ಮೇಲೆ ಶರ್ಮಿಳಾ ವಿರುದ್ಧ ಒಬ್ಬ ಸಬ್ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ಮಾಡಿದ ಆರೋಪ, ಪೊಲೀಸ್ ಪೇದೆಯ ಮೇಲೆ ತನ್ನ ವಾಹನವನ್ನು ಡಿಕ್ಕಿ ಹೊಡೆದು ಅವರ ಕಾಲಿಗೆ ಗಾಯ ಮಾಡಿದ ಮತ್ತು ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಐಪಿಸಿ ಸೆಕ್ಷನ್ 353 (ಸಾರ್ವಜನಿಕ ನೌಕರನನ್ನು ಕರ್ತವ್ಯದಿಂದ ಹಿಮ್ಮೆಟ್ಟಿಸಲು ಹಲ್ಲೆ ಅಥವಾ ಕ್ರಿಮಿನಲ್ ಬಲ), 332 (ಸಾರ್ವಜನಿಕ ಸೇವಕನನ್ನು ಕರ್ತವ್ಯದಿಂದ ಹಿಮ್ಮೆಟ್ಟಿಸಲು ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು), 324 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಮತ್ತು 509 ( ಮಹಿಳೆಯ ನಮ್ರತೆಗೆ ಅವಮಾನ ಮಾಡುವ ಉದ್ದೇಶದಿಂದ ಸನ್ನೆ ಅಥವಾ ಕೃತ್ಯ)) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶರ್ಮಿಳಾ ಮತ್ತು ಆಕೆಯ ಚಾಲಕನ ವಿರುದ್ಧ ಪೊಲೀಸರು ಹೇಳಿದ್ದಾರೆ.

ವಿಡಿಯೋ ದೃಶ್ಯಗಳಲ್ಲಿ ಶರ್ಮಿಳಾ ಅವರು ಅನುಮತಿ ಪಡೆಯದ ಹಿನ್ನೆಲೆ ಪ್ರತಿಭಟನೆಯನ್ನು ಮುಂದುವರಿಸದಂತೆ ತಡೆಯಲು ಪ್ರಯತ್ನಿಸಿದ ಪೊಲೀಸ್ ಅಧಿಕಾರಿಗಳನ್ನು ಅವಮಾನಿಸುತ್ತಿರುವುದು ಕಂಡುಬಂದಿತ್ತು. ಅವರು ಎಸ್‌ಐಟಿ ಕಚೇರಿಯಲ್ಲಿ ಶರ್ಮಿಳಾ ಪ್ರತಿಭಟನೆ ನಡೆಸಲು ಮುಂದಾಗಿದ್ದರು ಎಂಬ ಮಾಹಿತಿ ಸಿಕ್ಕಿದ್ದರಿಂದ ಅವರನ್ನು ತಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಗೆ ಅನುಮತಿ ಇಲ್ಲದ ಕಾರಣ ಪೊಲೀಸ್ ಸಿಬ್ಬಂದಿ ಆಕೆಯ ಮನೆಯ ಬಳಿ ತಡೆಯಲು ಯತ್ನಿಸಿದರು. ಆದರೆ ಆಕೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದರು ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿದಂತೆ ಅಲ್ಲಿದ್ದವರನ್ನು ತಳ್ಳಿದರು ಎಂದು ಪೊಲೀಸರು ಹೇಳಿದರು. ಟಿಎಸ್‌ಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಪ್ರತಿಭಟನೆ ಮಾಡಲು ಎಸ್‌ಐಟಿ ಕಚೇರಿಗೆ ಭೇಟಿ ನೀಡಲು ಯೋಜಿಸುತ್ತಿದ್ದಾಗ ಪೊಲೀಸರು ತನ್ನನ್ನು ಗೃಹಬಂಧನದಲ್ಲಿರಿಸಿದ್ದರು ಎಂದು ಶರ್ಮಿಳಾ ಹೇಳಿದ್ದರು.

ಹೈದರಾಬಾದ್ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಸ್ತುತ ಟಿಎಸ್‌ಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ತನ್ನ ನಡೆಯನ್ನು ಸಮರ್ಥಿಸಿಕೊಂಡಿರುವ ಶರ್ಮಿಳಾ ತನ್ನ ಹೇಳಿಕೆಯಲ್ಲಿ, ಆತ್ಮ ರಕ್ಷಣೆಗಾಗಿ ಸಕ್ರಿಯಳಾಗುವುದು ನನ್ನ ಜವಾಬ್ದಾರಿ. ಅಲ್ಲದೆ ಪೊಲೀಸರು ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದರು ಎಂದು ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+