ಮೈಸೂರು ಯುವ ದಸರಾ: ಸೆಲೆಬ್ರಿಟಿಗಳು ಪಡೆಯುತ್ತಿರುವ ಸಂಭಾವನೆ ಎಷ್ಟು?
Recommended Video

ಮೈಸೂರು, ಅಕ್ಟೋಬರ್. 12: ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಲ್ಲೊಂದಾದ ಹಾಗೂ ಯುವ ಸಮೂಹವನ್ನು ಸೂಜಿಗಲ್ಲಿನಂತೆ ಸೆಳೆಯುವ ಯುವದಸರಾ ಇಂದು ಸಂಜೆ ಶುಕ್ರವಾರ (ಅ.12) ಆರಂಭವಾಗಲಿದೆ.
ಪ್ರಖ್ಯಾತ ಗಾಯಕರಾದ ಜಯಹೋ ಖ್ಯಾತಿಯ ವಿಜಯ ಪ್ರಕಾಶ್, ಬಾಲಿವುಡ್ ಗಾಯಕರಾದ ಬಾದಶಾ, ಆಸ್ತ ಗಿಲ್, ಅರ್ಮಾನ್ ಮಲ್ಲಿಕ್, ನೇಹ ಕಕ್ಕರ್, ಶೆರ್ಲಿ ಸೇಟಿಯಾ ಹಾಗೂ ಸ್ಯಾಂಡಲ್ ವುಡ್ ಖ್ಯಾತ ನಟ ನಟಿಯರು ಯುವ ಸಮೂಹವನ್ನು ಸಂತಸದ ಕಡಲಲ್ಲಿ ತೇಲಿಸಲು ರೆಡಿಯಾಗಿದ್ದಾರೆ.
ಕಳೆದ 15 ವರ್ಷಗಳ ಹಿಂದೆ ಆರಂಭವಾದ ಯುವ ದಸರಾ ಕಾರ್ಯಕ್ರಮ ವರ್ಷದಿಂದ ವರ್ಷಕ್ಕೆ ತನ್ನ ಆಕರ್ಷಣೆಯನ್ನು ಹೆಚ್ಚಿಸಿಕೊಂಡೇ ಬಂದಿದೆ. ಪ್ರತೀ ಬಾರಿ ದೇಶದ ಮುಂಬೈ, ಹೊಸದಿಲ್ಲಿ, ಇನ್ನಿತರ ರಾಜ್ಯಗಳ ಕಲಾವಿದರು, ಯುವ ದಸರಾ ವೇದಿಕೆಯ ಮೂಲಕ ಯುವ ಸಮೂಹವನ್ನು ರಂಜಿಸಿದ್ದಾರೆ.
ಈ ಬಾರಿಯೂ ಅದು ಮುಂದುವರಿದಿದೆ. ಇದರ ಜೊತೆಗೆ ಯುವ ಸಂಭ್ರಮದ ಮೂಲಕ ಆಯ್ಕೆಯಾದ 25 ತಂಡಗಳ ವಿದ್ಯಾರ್ಥಿಗಳು ಯುವ ದಸರಾದಲ್ಲಿ ತಮ್ಮ ಕಲಾ ಪ್ರದರ್ಶನವನ್ನು ಉಣಬಡಿಸಲಿದ್ದಾರೆ. ಪ್ರತೀ ದಿನ 6 ಗಂಟೆಯಿಂದ 7 ಗಂಟೆಯವರೆಗೆ ಐದು ಕಾಲೇಜುಗಳ ವಿದ್ಯಾರ್ಥಿಗಳು ಪ್ರದರ್ಶನ ನೀಡಲಿದ್ದಾರೆ. ಮುಂದೆ ಓದಿ...

ಸ್ಥಳೀಯ ಕಲಾವಿದರಿಗೆ ಅವಕಾಶ
7 ರಿಂದ 8.30ರವರೆಗೆ ಸ್ಥಳೀಯ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ ಹಾಗೂ ಇನ್ನಿತರ ಜಿಲ್ಲೆಗಳ ಕಲಾವಿದರು ನೃತ್ಯ, ನೃತ್ಯ ರೂಪಕ, ಪಾಪ್ ಡ್ಯಾನ್ಸ್, ಭರತ ನಾಟ್ಯ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.

ಮುಖ್ಯಮಂತ್ರಿಗಳಿಂದ ಉದ್ಘಾಟನೆ
ಸಂಜೆ 6.30ಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಜಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಚಿವರಾದ ಸಾ.ರಾ.ಮಹೇಶ್, ಡಾ.ಜಯಮಾಲ, ಎನ್.ಮಹೇಶ್, ಸಿ.ಪುಟ್ಟರಂಗಶೆಟ್ಟಿ, ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ ಭಾಗವಹಿಸಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು.

ಸಿದ್ಧತೆಗಳು ಪೂರ್ಣ
ಯುವ ದಸರಾ ಆಚರಣೆಗೆ ಸಂಬಂಧಿಸಿದಂತೆ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿದ್ದು, ಮೈದಾನದಲ್ಲಿ 30 ಸಾವಿರ ಮಂದಿ ಕೂರಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ದೊಡ್ಡ ಪರದೆಯ ಮೂಲಕ ಮೈದಾನದ ಹೊರಗಿನವರಿಗೂ ಕಾರ್ಯಕ್ರಮ ವೀಕ್ಷಿಸಲು ಅನುವು ಮಾಡಿಕೊಡಲಾಗುತ್ತಿದೆ.

ಕಾರ್ಯಕ್ರಮಗಳ ವಿವರ
ಉದ್ಘಾಟನೆ ದಿನ ವಿಜಯಪ್ರಕಾಶ್ ತಂಡದಿಂದ ಸಂಗೀತ, ಸಂಜೆ 13ರ ರಾತ್ರಿ ಬಾದಶಾ ಸಂಗೀತ ರಸಮಂಜರಿ, 14ರಂದು ಅರ್ಮಾನ್ ಮಲಿಕ್ ಸಂಗೀತೋತ್ಸವ, 15ರಂದು ಕನ್ನಡ ನಟಿಯರಿಂದ ಸ್ಯಾಂಡಲ್ ವುಡ್ ನೈಟ್ಸ್, 16ರಂದು ಸಂಗೀತಗಾರ ನವೀನ್ ಸಜ್ಜು ತಂಡ, ಶೆರ್ಲಿ ಸೇಟಿ ತಂಡದಿಂದ ಸಂಗೀತ, 17ರಂದು ಯಶ್ ಮನರಂಜನೆ, ನೇಹಾ ಕಕ್ಕರ್ ರಸಸಂಜೆ ಕಾರ್ಯಕ್ರಮವಿರುತ್ತದೆ.

ಸೆಲೆಬ್ರಿಟಿಗಳ ಸಂಭಾವನೆ
ವಿಜಯಪ್ರಕಾಶ್ ತಂಡ 60 ಲಕ್ಷ + ಜಿಎಸ್ಟಿ, ಅರ್ಮಾನ್ ಮಲಿಕ್: 35 ಲಕ್ಷ + ಜಿಎಸ್ಟಿ, ನೇಹಾ ಕಕ್ಕರ್: 35 ಲಕ್ಷ + ಜಿಎಸ್ಟಿ, ಬಾದಶಾ-30 ಲಕ್ಷ +ಜಿಎಸ್ಟಿ, ಶ್ರೀಧರ್ ಜೈನ್ ತಂಡ: 1.5 ಲಕ್ಷ
ನವೀನ್ ಸಜ್ಜು: 1.5 ಲಕ್ಷ ಸಂಭಾವನೆ ಪಡೆದಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications