ಯುವ ರಾಜ್ ಕುಮಾರ್-ಶ್ರೀದೇವಿ ಭೈರಪ್ಪ ನಿಶ್ಚಿತಾರ್ಥಕ್ಕೆ ಸಿದ್ಧವಾಗ್ತಿದೆ ಸಾಂಸ್ಕೃತಿಕ ನಗರಿ
ಮೈಸೂರು, ಜುಲೈ.05: ಸಾಂಸ್ಕೃತಿಕ ನಗರಿಯಲ್ಲಿ ವರನಟ ಡಾ.ರಾಜ್ ಕುಮಾರ್ ಮೊಮ್ಮಗ, ನಟ ರಾಘವೇಂದ್ರ ರಾಜ್ ಕುಮಾರ್ ಕಿರಿಯ ಪುತ್ರ ಯುವ ರಾಜ್ ಕುಮಾರ್ ಮದುವೆ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.
ಇಲ್ಲಿನ ಖಾಸಗಿ ಹೋಟೆಲ್ ಸದರನ್ ಸ್ಟಾರ್ ನಲ್ಲಿ ಸಿದ್ಧತಾ ಕಾರ್ಯ ನಡೆಯುತ್ತಿದ್ದು, ವಿಜಯನಗರದ ಮನೆಯಲ್ಲಿ ಸಾಂಪ್ರದಾಯಿಕ ಶಾಸ್ತ್ರಗಳು ನಡೆಯಲಿವೆ. ಬಳಿಕ ಸ್ಟಾರ್ ಹೋಟೆಲ್ ನಲ್ಲಿ ಫೋಟೋ ಶೂಟ್, ಭೋಜನದ ವ್ಯವಸ್ಥೆ ಕಲ್ಪಿಸಲಾಗಿದೆ.
ಸಾಂಸ್ಕೃತಿಕ ನಗರಿಯಲ್ಲಿ ಅಣ್ಣಾವ್ರ ಮೊಮ್ಮಗನ ನಿಶ್ಚಿತಾರ್ಥ
ವಧು- ವರನ ಕುಟುಂಬದವರು, ಸಂಬಂಧಿಕರು ಹಾಗೂ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದ್ದು, ಯುವ ರಾಜ್ ಕುಮಾರ್ ಬಹುಕಾಲದ ಗೆಳತಿ ಮೈಸೂರಿನ ಶ್ರೀದೇವಿ ಭೈರಪ್ಪ ಅವರನ್ನು ಇಂದು ವರಿಸಲಿದ್ದಾರೆ.

ಶ್ರೀದೇವಿ ಭೈರಪ್ಪ ಅವರು ಮೈಸೂರಿನಲ್ಲೇ ಹುಟ್ಟಿ ಬೆಳೆದು ಉನ್ನತ ಶಿಕ್ಷಣ ಮುಗಿಸಿ, ದೊಡ್ಮನೆ ಒಡೆತನದಲ್ಲಿರುವ ಡಾ.ರಾಜ್ ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿ ಉಸ್ತುವಾರಿ ವಹಿಸಿಕೊಂಡಿದ್ದರು.
ಯುವ ರಾಜ್ ಕುಮಾರ್ ಅವರ 7 ವರ್ಷದ ಗೆಳತಿಯಾಗಿದ್ದ ಶ್ರೀದೇವಿ ಭೈರಪ್ಪ, ಈ ಹಿಂದೆ ತೆರೆಕಂಡಿದ್ದ ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಪರೋಕ್ಷವಾಗಿ ತೊಡಗಿಸಿಕೊಂಡಿದ್ದರು.
ಯುವ ರಾಜ್ ಕುಮಾರ್, ಶ್ರೀದೇವಿ ಸ್ನೇಹ ಪ್ರೀತಿಗೆ ತಿರುಗಿ ಈಗ ಮದುವೆಯ ಹೊಸ್ತಿಲಿಗೆ ಬಂದು ನಿಂತಿದ್ದು, ಎರಡೂ ಮನೆಯವರ ಒಪ್ಪಿಗೆಯೊಂದಿಗೆ ನಿಶ್ಚಿತಾರ್ಥ ನಡೆಯುತ್ತಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications