ಯುವ ರಾಜ್ ಕುಮಾರ್-ಶ್ರೀದೇವಿ ಭೈರಪ್ಪ ನಿಶ್ಚಿತಾರ್ಥಕ್ಕೆ ಸಿದ್ಧವಾಗ್ತಿದೆ ಸಾಂಸ್ಕೃತಿಕ ನಗರಿ
ಮೈಸೂರು, ಜುಲೈ.05: ಸಾಂಸ್ಕೃತಿಕ ನಗರಿಯಲ್ಲಿ ವರನಟ ಡಾ.ರಾಜ್ ಕುಮಾರ್ ಮೊಮ್ಮಗ, ನಟ ರಾಘವೇಂದ್ರ ರಾಜ್ ಕುಮಾರ್ ಕಿರಿಯ ಪುತ್ರ ಯುವ ರಾಜ್ ಕುಮಾರ್ ಮದುವೆ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.
ಇಲ್ಲಿನ ಖಾಸಗಿ ಹೋಟೆಲ್ ಸದರನ್ ಸ್ಟಾರ್ ನಲ್ಲಿ ಸಿದ್ಧತಾ ಕಾರ್ಯ ನಡೆಯುತ್ತಿದ್ದು, ವಿಜಯನಗರದ ಮನೆಯಲ್ಲಿ ಸಾಂಪ್ರದಾಯಿಕ ಶಾಸ್ತ್ರಗಳು ನಡೆಯಲಿವೆ. ಬಳಿಕ ಸ್ಟಾರ್ ಹೋಟೆಲ್ ನಲ್ಲಿ ಫೋಟೋ ಶೂಟ್, ಭೋಜನದ ವ್ಯವಸ್ಥೆ ಕಲ್ಪಿಸಲಾಗಿದೆ.
ಸಾಂಸ್ಕೃತಿಕ ನಗರಿಯಲ್ಲಿ ಅಣ್ಣಾವ್ರ ಮೊಮ್ಮಗನ ನಿಶ್ಚಿತಾರ್ಥ
ವಧು- ವರನ ಕುಟುಂಬದವರು, ಸಂಬಂಧಿಕರು ಹಾಗೂ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದ್ದು, ಯುವ ರಾಜ್ ಕುಮಾರ್ ಬಹುಕಾಲದ ಗೆಳತಿ ಮೈಸೂರಿನ ಶ್ರೀದೇವಿ ಭೈರಪ್ಪ ಅವರನ್ನು ಇಂದು ವರಿಸಲಿದ್ದಾರೆ.

ಶ್ರೀದೇವಿ ಭೈರಪ್ಪ ಅವರು ಮೈಸೂರಿನಲ್ಲೇ ಹುಟ್ಟಿ ಬೆಳೆದು ಉನ್ನತ ಶಿಕ್ಷಣ ಮುಗಿಸಿ, ದೊಡ್ಮನೆ ಒಡೆತನದಲ್ಲಿರುವ ಡಾ.ರಾಜ್ ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿ ಉಸ್ತುವಾರಿ ವಹಿಸಿಕೊಂಡಿದ್ದರು.
ಯುವ ರಾಜ್ ಕುಮಾರ್ ಅವರ 7 ವರ್ಷದ ಗೆಳತಿಯಾಗಿದ್ದ ಶ್ರೀದೇವಿ ಭೈರಪ್ಪ, ಈ ಹಿಂದೆ ತೆರೆಕಂಡಿದ್ದ ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಪರೋಕ್ಷವಾಗಿ ತೊಡಗಿಸಿಕೊಂಡಿದ್ದರು.
ಯುವ ರಾಜ್ ಕುಮಾರ್, ಶ್ರೀದೇವಿ ಸ್ನೇಹ ಪ್ರೀತಿಗೆ ತಿರುಗಿ ಈಗ ಮದುವೆಯ ಹೊಸ್ತಿಲಿಗೆ ಬಂದು ನಿಂತಿದ್ದು, ಎರಡೂ ಮನೆಯವರ ಒಪ್ಪಿಗೆಯೊಂದಿಗೆ ನಿಶ್ಚಿತಾರ್ಥ ನಡೆಯುತ್ತಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications