ದಸರಾ ಯುವ ಸಂಭ್ರಮದಲ್ಲಿ ಮಹದೇಶ್ವರನ ಹಾಡಿಗೆ ಹೆಜ್ಜೆ ಹಾಕಿದ ಜಿಟಿಡಿ
ಮೈಸೂರು, ಅಕ್ಟೋಬರ್.01 : ಅಲ್ಲಿ ಉಲ್ಲಾಸದ ನದಿ ತುಂಬಿ ಹರಿಯುತ್ತಿತ್ತು. ಯುವ ಮನಸ್ಸುಗಳ ಸಡಗರ, ಸಂತಸಕ್ಕೆ ಪಾರವೇ ಇರಲಿಲ್ಲ. ಯುವ ಸಮೂಹವಂತೂ ಕುಣಿದು ಕುಪ್ಪಳಿಸಿತು. ಇಂಪಾದ ಹಾಡಿಗೆ, ನೃತ್ಯದ ಮಾಧುರ್ಯಕ್ಕೆ ನೋಡುಗರ ಜತೆಗೆ ಗಿಡ ಮರಗಳೂ ತಲೆದೂಗಿದ್ದವು ಅಂದರೆ ತಪ್ಪಾಗಲಾರದು.
ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಅದಕ್ಕೆ ಮುನ್ನುಡಿಯಂತೆ ದಸರಾ ಮಹೋತ್ಸವ 2018ರ ಯುವ ಸಂಭ್ರಮ' ಮಾನಸ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ಚಾಲನೆಗೊಂಡಿತು. ನಗರದ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರ ನೃತ್ಯದ ಸೊಬಗು ಪ್ರೇಕ್ಷಕರ ಗಣದಲ್ಲಿ ಮಿಂಚು ಹರಿಸಿತ್ತು.
ಅದರಲ್ಲಿಯೂ ವಿಶೇಷ ವಿದ್ಯಾರ್ಥಿಗಳ ನರ್ತನ ಕೌಶಲ ನೋಡುಗರನ್ನು ಬೆರಗುಗೊಳಿಸಿತ್ತು.

ಉಕ್ರೇನ್ ದೇಶದ ಯೂಲಿಯಾ ತಾವೇ ತಯಾರಿಸಿದ 'ಕ್ಲಸ್ಟರ್ ಹಿಲಿಯಂ ಬಲೂನ್ ಆಕ್ಟ' ಎಂಬ ವಿಶೇಷ ಬಲೂನಿಗೆ ದೀಪಾಲಂಕಾರ ಮಾಡಿದ್ದರು. ಬಳಿಕ ಸೊಂಟಕ್ಕೆ ಕಟ್ಟಿಕೊಂಡು ಸುಮಾರು 100 ಅಡಿ ಎತ್ತರದಿಂದ ಸಾಹಸ ಮಾಡುತ್ತಾ ಚಾಲನೆ ನೀಡಿ ಯುವ ಸಮೂಹದ ಮನಸ್ಸು ಗೆದ್ದರು.
ಇತ್ತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಜಿಟಿ ದೇವೇಗೌಡ, ಮೈಸೂರು ಮಹಾರಾಜರು ದಸರಾ ಮಹೋತ್ಸವ ಹಾಗೂ ಸಾಂಸ್ಕೃತಿಕ ಚಟುವಟಿಕೆ, ಅಭಿವೃದ್ಧಿಯ ಮೂಲಕ ಮೈಸೂರಿನ ಕೀರ್ತಿಯನ್ನು ದೇಶ-ವಿದೇಶದಲ್ಲಿ ಹರಡಲು ಕಾರಣಕರ್ತರಾಗಿದ್ದಾರೆ. ಅವರ ನೀಡಿರುವ ಕೊಡುಗೆಯನ್ನು ಎಂದೂ ಮರೆಯಲು ಸಾಧ್ಯವಿಲ್ಲ ಎಂದರು.

ಬಳಿಕ ಸಾಂಪ್ರದಾಯಿಕವಾಗಿ ಕನ್ನಡ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಮಹದೇಶ್ವರನ ಹಾಡಿನೊಂದಿಗೆ ಹೆಜ್ಜೆ ಹಾಕಿದರು.

ಯಳಂದೂರಿನ ಜೆಎಸ್ ಎಸ್ ಮಹಿಳಾ ಸಂಯುಕ್ತ ಪದವಿಪೂರ್ವ ಕಾಲೇಜು, ಮಂಡ್ಯದ ಭಾರತೀ ಕಾಲೇಜು, ಮೈಸೂರಿನ ಕರುಣಾಮಯಿ ವಿಶೇಷ ಮಕ್ಕಳ ತರಬೇತಿ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ 14 ಕಾಲೇಜುಗಳ ವಿದ್ಯಾರ್ಥಿಗಳು ಪ್ರದರ್ಶನ ನೀಡಿದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications