ಮೈಸೂರು ಮೃಗಾಲಯ ದೇಶದಲ್ಲೇ 3ನೇ ಅತ್ಯುತ್ತಮ ಮೃಗಾಲಯ
ಮೈಸೂರು, ಸೆಪ್ಟೆಂಬರ್ 16: ದೇಶದ ಅತ್ಯುತ್ತಮ ಮೃಗಾಲಯಗಳ ಶ್ರೇಯಾಂಕದಲ್ಲಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ 3ನೇ ಶ್ರೇಯಾಂಕ ಪಡೆದುಕೊಂಡಿದೆ. ಸೆಪ್ಟೆಂಬರ್ 10ರಂದು ಭುವನೇಶ್ವರದಲ್ಲಿ ಮೃಗಾಲಯದ ನಿರ್ದೇಶಕರ ಸಮಾವೇಶದಲ್ಲಿ ದೇಶದ ಎಲ್ಲಾ ಮೃಗಾಲಯಗಳ ಮಾಹಿತಿಯನ್ನು ಕಲೆ ಹಾಕಿ ಕೇಂದ್ರ ಮೃಗಾಲಯ ಪ್ರಾಧಿಕಾರ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಮೃಗಾಲಯಗಳ ಪರಿಣಾಮಕಾರಿ ನಿರ್ವಹಣೆಯ ಮೌಲ್ಯಮಾಪನದ ಆಧಾರದ ಮೇಲೆ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ 3 ನೇ ಸ್ಥಾನ ಬಂದಿದ್ದರೆ, ದೊಡ್ಡ ಮೃಗಾಲಯ ವಿಭಾಗದಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರ ಘೋಷಣೆ ಮಾಡಿದಂತೆ ಡಾರ್ಜಿಲಿಂಗ್ನ ಪದ್ಮಜಾ ನಾಯ್ಡು ಹಿಮಾಲಯನ್ ಝೂಲಾಜಿಕಲ್ ಪಾರ್ಕ್ ದೇಶದ ಅತ್ಯುತ್ತಮ ಮೃಗಾಲಯ ಎಂಬ ಹಿರಿಮೆಗೆ ಪಾತ್ರವಾಗಿದೆ. ಚೆನ್ನೈನ ಅರಿಗ್ನಾರ್ ಅಣ್ಣಾ ಝೂಲಾಜಿಕಲ್ ಪಾರ್ಕ್ 2ನೇ ಸ್ಥಾನಪಡೆದುಕೊಂಡಿದೆ. ಬೆಂಗಳೂರಿನ ಬನ್ನೇರುಘಟ್ಟ ಪ್ರಾಣಿ ಸಂಗ್ರಹಾಲಯ 9ನೇ ಶ್ರೇಯಾಂಕ ಪಡೆದುಕೊಂಡಿದೆ.
ನಿರ್ವಹಣೆ, ಸ್ವಚ್ಛತೆ, ಪ್ರಾಣಿಗಳ ಎರವಲು ಪ್ರವಾಸಿಗರ ಆಕರ್ಷಣೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ನಡೆದಿರುವ ಮೌಲ್ಯಮಾಪನದಲ್ಲಿ ದೊಡ್ಡ ಮೃಗಾಲಯಗಳ ವಿಭಾಗದಲ್ಲಿ ತಮಿಳುನಾಡಿನ ಅರಿಗ್ನಾರ್ ಅಣ್ಣ ಜಿಯಾಲಾಜಿಕಲ್ ಪಾರ್ಕ್ ಶೇಕಡಾ 80ರಷ್ಟು ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಶ್ರೀ ಚಾಮರಾಜೇಂದ್ರ ಮೃಗಾಲಯವು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಗುಜರಾತ್ನ ಸಕ್ರ್ಕರ್ಬಾಗ್ ಜಿಯಾಲಾಜಿಕಲ್ ಪಾರ್ಕ್ ಶೇ.76ರಷ್ಟು ಅಂಕಗಳನ್ನು ಪಡೆದು ಮೂರನೇ ಸ್ಥಾನ ಪಡೆದುಕೊಂಡಿದೆ.

ಮಧ್ಯಮವರ್ಗ ಮೃಗಾಲಯಗಳ ವಿಭಾಗದಲ್ಲಿ ಪಶ್ಚಿಮ ಬಂಗಾಳದ ಪದ್ಮಜನಾಯ್ಡು ಹಿಮಾಲಯನ್ ಜಿಯಾಲಾಜಿಕಲ್ ಪಾರ್ಕ್ ಶೇ.83ರಷ್ಟು ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದು, ಶೇ.78 ಅಂಕಪಡೆದ ಅಲಿಫೋರ್ ಜಿಯಾಲಾಜಿಕಲ್ ಪಾರ್ಕ್ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

157 ಎಕರೆ ವಿಸ್ತೀರ್ಣದ ಮೈಸೂರು ಮೃಗಾಲಯ ದೇಶದ ಅತ್ಯಂತ ಹಳೆಯ ಮೃಗಾಲಯ ಎನಿಸಿಕೊಂಡಿದೆ. 1892 ರಲ್ಲಿ ಮೃಗಾಲಯ ಆರಂಭಗೊಂಡಿತ್ತು. ಈ ಮೃಗಾಲಯ ಅರಮನೆಯಿಂದ ಕೆಲವೇ ಕಿ.ಮೀ. ದೂರದಲ್ಲಿದ್ದು, 1909 ರಲ್ಲಿ ಚಾಮರಾಜೇಂದ್ರ ಮೃಗಾಲಯ ಎಂದು ಮರುನಾಮಕರಣ ಮಾಡಲಾಯಿತು. ಪ್ರಸ್ತುತ ಸುಮಾರು 1,300 ಪ್ರಾಣಿಗಳಿಗೆ ಈ ಮೃಗಾಲಯ ನೆಲೆ ಹೊದಗಿಸಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications