ಇವರ ಹೊಟ್ಟೆ ಕತ್ತರಿಸಿದಾಗ ಸಿಕ್ಕಿದ್ದು ಕೆಜಿ ಕೆಜಿ ಹೆರಾಯಿನ್!
ನವದೆಹಲಿ, ಜನವರಿ.12: ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಅಫ್ಘಾನಿಸ್ತಾನ ಮೂಲದ 7 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ ಪ್ಲಾನ್ ಕಂಡು ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ.
ಅಚ್ಚರಿ ಎನಿಸಿದರೂ ಇದು ಸತ್ಯ ಘಟನೆ. ಅಫ್ಘಾನಿಸ್ತಾನದಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಳು ಮಂದಿ ಮೇಲೆಯ ಹೊಟ್ಟೆಯಲ್ಲಿ ಅನುಮಾನಾಸ್ಪದ ವಸ್ತು ಇರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಎಲ್ಲರನ್ನೂ ವಶಕ್ಕೆ ಪಡೆಯಲಾಗಿತ್ತು.
ಡಿಸೆಂಬರ್.28ರಂದು ಅಫ್ಘಾನಿಸ್ತಾನದಿಂದ ದೆಹಲಿಗೆ ಆಗಮಿಸಿದ್ದ ಏಳು ಮಂದಿಯನ್ನು ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಮಾದಕವಸ್ತುಗಳನ್ನು ಹೊಟ್ಟೆಯಲ್ಲಿಟ್ಟುಕೊಂಡು ಸಾಗಿಸುತ್ತಿದ್ದರು ಎಂಬ ವಿಚಾರ ಹೊರ ಬಿದ್ದಿದೆ.

ಹೊಟ್ಟೆಯಲ್ಲೇ 1.623 ಕೆಜಿ ಹೆರಾಯಿನ್:
ಏಳು ಮಂದಿ ಆರೋಪಿಗಳು ಹೊಟ್ಟೆಯಲ್ಲೇ 1.623 ಕೆಜಿ ಹೆರಾಯಿನ್ ಪತ್ತೆಯಾಗಿದೆ. ವೈದ್ಯಕೀಯ ಶಸ್ತ್ರಚಿಕಿತ್ಸೆ ಮೂಲಕ ಆರೋಪಿಗಳ ಹೊಟ್ಟೆಯಲ್ಲಿದ್ದ ಮಾದಕ ವಸ್ತುವನ್ನು ಹೊರ ತೆಗೆದಿದ್ದು, ದೆಹಲಿಯ ಮಾದಕ ವಸ್ತುಗಳ ನಿಯಂತ್ರಣ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇನ್ನು, ಬಂಧಿತ ಆರೋಪಿಗಳನ್ನು ಯೂಸಫ್ ಜೈ ರಹಮತ್ ಉಲ್ಲಾ, ಫಯಾಜ್ ಮೊಹಮ್ಮದ್, ನಬೀಜದಾ ಹಬೀಬ್ ಉಲ್ಲಾ, ಅಹ್ಮದ್ ಅಬ್ದುಲ್ ವದೂದ್, ತುರ್ಕಮನ್ ಅಬ್ದುಲ್ ಹಮೀದ್, ಫಯಾಜ್ ಅಹ್ಮದ್, ನೂರ್ ಜೈ ಕಬೀರ್, ಹಯಾತ್ ಉಲ್ಲಾ, ಮತ್ತು ಮಸೂದ್ ಮಹ್ಮದ್ ಎಂದು ಗುರುತಿಸಲಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications