ಬಿಜೆಪಿ ಐಟಿ ಸೆಲ್ ಮುಖ್ಯಸ್ಥನ ಮೇಲೆ 1 ಕೋಟಿ ರು ಮಾನಹಾನಿ ಪ್ರಕರಣ
ನವದೆಹಲಿ, ಜನವರಿ 21: ಬಿಜೆಪಿ ಮಾಹಿತಿ ತಂತ್ರಜ್ಞಾನ ಘಟಕದ (ಐಟಿ ಸೆಲ್) ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ದೆಹಲಿಯ ಇಬ್ಬರು ಮಹಿಳೆಯರು ಮಾನಹಾನಿ ಪ್ರಕರಣ ಹೂಡಿದ್ದಾರೆ.
ಅಮಿತ್ ಮಾಳವೀಯಾ ಅವರು ''ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದಕ್ಷಿಣ ದೆಹಲಿಯ ಶಾಹಿನ್ಬಾಗ್ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಹಣ ಪಡೆದು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಆರೋಪಿಸಿ ತಿರುಚಿದ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದರು'' ಎಂದು ದೂರುದಾರರು ಆರೋಪಿಸಿದ್ದಾರೆ.
ಅಮಿತ ಮಾಳವೀಯಾ ಕ್ರಮ ಖಂಡಿಸಿ ಮೆಹಮೂದ್ ಪ್ರಾಚಾ ಎನ್ನುವ ವಕೀಲರ ಮೂಲಕ ಹೆಸರು ಬಹಿರಂಗಪಡಿಸದ ಇಬ್ಬರು ಮಹಿಳೆಯರು 1 ಕೋಟಿ ರುಪಾಯಿ ಮಾನಹಾನಿ ಪ್ರಕರಣವನ್ನು ದಾಖಲಿಸಿದ್ದಾರೆ. ''ಭಾರತೀಯ ದಂಡ ಸಂಹಿತೆ, 1860 (ಮಾನಹಾನಿ) ಯ ಸೆಕ್ಷನ್ 500 ರ ಅಡಿಯಲ್ಲಿ ಮಾಳವಿಯಾ ಅವರು ಮಾಡಿರುವ ಅರೋಪಗಳು ನಿರಾಧಾರವಾಗಿದ್ದು, ಸಿಎಎ ಬಗ್ಗೆ ಪ್ರಶ್ನೆ ಮಾಡುವವರನ್ನು ಹತ್ತಿಕ್ಕಲು ಅಮಿತ್ ಮಾಳವಿಯಾ ಮಾಡಿರುವ ವ್ಯವಸ್ಥಿತ ಷ್ಯಡ್ಯಂತ್ರವಾಗಿದೆ'' ಎಂದು ದೆಹಲಿ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೂಲತಃ ಬ್ಯಾಂಕರ್ ಆಗಿರುವ ಅಮಿತ್ ಮಾಳವಿಯಾ ಅವರು ಸದ್ಯ ಕೇಂದ್ರ ಬಿಜೆಪಿ ಐಟಿ ಸೆಲ್ನ ಮುಖ್ಯಸ್ಥರಾಗಿದ್ದು, ಟ್ವಿಟರ್ನಲ್ಲಿ 3.87 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications