ರಾಷ್ಟ್ರಪತಿ ಭವನದ 100ಕ್ಕೂ ಅಧಿಕ ಸಿಬ್ಬಂದಿಗೆ ಕ್ವಾರಂಟೈನ್
ನವದೆಹಲಿ, ಏಪ್ರಿಲ್ 21 : ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದ 100ಕ್ಕೂ ಅಧಿಕ ಸಿಬ್ಬಂದಿಗಳಿಗೆ ಕ್ವಾರಂಟೈನ್ನಲ್ಲಿರಲು ಸೂಚನೆ ನೀಡಲಾಗಿದೆ. ನಾಲ್ಕು ದಿನಗಳ ಹಿಂದೆ ಇಲ್ಲಿನ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
Recommended Video
ರಾಷ್ಟ್ರಪತಿ ಭವನದ ಸ್ವಚ್ಛತೆಯ ಕಾರ್ಯ ನಿರ್ವಹಣೆ ಮಾಡುವ ಸಿಬ್ಭಂದಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದಾಗಿ ಸ್ವಚ್ಛತೆಯ ಕೆಲಸ ಮಾಡುತ್ತಿದ್ದ ಎಲ್ಲರಿಗೂ ಕೇಂದ್ರ ದೆಹಲಿಯ ಪ್ರದೇಶದಲ್ಲಿ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಲಾಗಿದೆ.
ಕೊರೊನಾ: ಕೇದಾರನಾಥ ಪ್ರಧಾನ ಅರ್ಚಕರಿಗೆ 14ದಿನಗಳ ಕ್ವಾರಂಟೈನ್
ಕಾರ್ಯದರ್ಶಿ ಹಂತದ ಅಧಿಕಾರಿಗಳು, ಅವರ ಕುಟುಂಬ ಸದಸ್ಯರಿಗೆ ಹೋಂ ಕ್ವಾರಂಟೈನ್ನಲ್ಲಿರಲು ಸೂಚನೆ ನೀಡಲಾಗಿದೆ. ಒಬ್ಬ ಸಿಬ್ಬಂದಿ ಹೊರತುಪಡಿಸಿ ಉಳಿದವರಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕೊರೊನಾ ವೈರಸ್ ಪರೀಕ್ಷೆ ಮಾಡಿಸಿಕೊಂಡ ಸಚಿವ ಮಾಧುಸ್ವಾಮಿ!
ಸ್ವಚ್ಛತೆಯ ಕೆಲಸ ಮಾಡುತ್ತಿದ್ದ ಸಿಬ್ಬಂದಿ ವಾಸ ಮಾಡುತ್ತಿದ್ದ ಅಕ್ಕ-ಪಕ್ಕದ ಮನೆಯ 25 ಸದಸ್ಯರಿಗೆ ಕ್ವಾರಂಟೈನ್ನಲ್ಲಿರಲು ಸೂಚನೆ ನೀಡಲಾಗಿದೆ. ಭವನದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕಟ್ಟು ನಿಟ್ಟಿನ ಸೂಚನೆ ಕೊಡಲಾಗಿದೆ.
ಹೈಡ್ರೋಕ್ಸಿಕ್ಲೋರೋಕ್ವಿನ್ ಮಾತ್ರೆ ಯಾರು ಸೇವಿಸಬಹುದು?
ರಾಷ್ಟ್ರಪತಿಗಳ ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿಗಳಿಂದ ಹಿಡಿದು ಭದ್ರತೆ, ಸ್ವಚ್ಛತಾ ಸಿಬ್ಬಂದಿ ತನಕ ಹಲವಾರು ಸಿಬ್ಬಂದಿಗಳು ರಾಷ್ಟ್ರಪತಿ ಭವನದಲ್ಲಿ ಪ್ರತಿನಿತ್ಯ ಕಾರ್ಯ ನಿರ್ವಹಣೆ ಮಾಡುತ್ತಾರೆ. ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ನವದೆಹಲಿಯಲ್ಲಿ ಇದುವರೆಗೂ 2081 ಕೊರೊನಾ ಪ್ರಕರಣಗಳು ದಾಖಲಾಗಿವೆ. 47 ಜನರು ಮೃತಪಟ್ಟಿದ್ದಾರೆ. ಮೇ 3ರ ತನಕ ಲಾಕ್ ಡೌನ್ ನಿಯಮದಲ್ಲಿ ಯಾವುದೇ ಸಡಿಲಿಕ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.