ದೆಹಲಿ ಹಿಂಸಾಚಾರ; ಚರಂಡಿಯಲ್ಲಿ 11 ಶವಗಳು ಪತ್ತೆ
ನವದೆಹಲಿ, ಮಾರ್ಚ್ 03 : ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದ ಬಳಿಕ ದೆಹಲಿಯ ಚರಂಡಿಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಕಳೆದ 5 ದಿನಗಳಲ್ಲಿ ಚರಂಡಿಗಳಿಂದ 11 ಶವಗಳನ್ನು ಹೊರತೆಗೆಯಲಾಗಿದೆ. ಇವರು ಗಲಭೆಯಲ್ಲಿ ಮೃತಪಟ್ಟವರು ಎಂದು ಶಂಕಿಸಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧ ಹೋರಾಟಗಾರರ ನಡುವೆ ಆರಂಭವಾದ ಘರ್ಷಣೆ ನಂತರ ಕೋಮುಗಲಭೆ ಸ್ವರೂಪ ಪಡೆದಿತ್ತು. ಇದುವರೆಗೂ ಹಿಂಸಾಚಾರದಲ್ಲಿ 47 ಜನರು ಬಲಿಯಾಗಿದ್ದಾರೆ. ಗಲಭೆಗೆ ಸಂಬಂಧಿಸಿದಂತೆ 167 ಎಫ್ಐಆರ್ಗಳನ್ನು ದಾಖಲು ಮಾಡಲಾಗಿದೆ.
ದೆಹಲಿ ಗಲಭೆಯಲ್ಲಿ ಮನೆ ಕಳೆದುಕೊಂಡ ಯೋಧನಿಗೆ ಬಿಎಸ್ಎಫ್ ನೆರವು
ಕಳೆದ 5 ದಿನಗಳಲ್ಲಿ ಚರಂಡಿಗಳಿಂದ 11 ಶವಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶವಗಳು ಕೊಳೆತು ಹೋಗಿದ್ದು ಡಿಎನ್ಎ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಪರೀಕ್ಷೆ ಬಳಿಕ ಮೃತಪಟ್ಟವರ ವಿವರಗಳು ತಿಳಿಯಲಿವೆ. ಎಲ್ಲರೂ ಗಲಭೆಯಿಂದಾಗಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
ದೆಹಲಿಯ ಗಲಭೆ; ಬಿಜೆಪಿ ನಾಯಕನ ಮನೆಗೆ ಬೆಂಕಿ
ದೆಹಲಿ ಪೊಲೀಸರು ಚರಂಡಿಯಲ್ಲಿ ಮೊದಲು ಗುಪ್ತಚರ ದಳದ ಅಧಿಕಾರಿ ಅಂಕಿತ್ ಶರ್ಮಾ ಶವ ಪತ್ತೆಯಾಗಿತ್ತು. ಅವರ ಕುಟುಂಬಸ್ಥರು ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ದೆಹಲಿ ಗಲಭೆ; 167 ಎಫ್ಐಆರ್, 885 ಜನರ ಬಂಧನ
ಭಾನುವಾರ ಮತ್ತು ಸೋಮವಾರ ಪೊಲೀಸರಿಗೆ ಚರಂಡಿಯಲ್ಲಿ 5 ಶವಗಳು ಸಿಕ್ಕಿವೆ. ಆದರೆ, ಶವಗಳ ಗುರುತು ಪತ್ತೆಯಾಗಿಲ್ಲ. ದೆಹಲಿಯಲ್ಲಿ ಗಲಭೆ ನಡೆಯುವಾಗ ಸಿಕ್ಕ-ಸಿಕ್ಕವರ ಮೇಲೆ ಹಲ್ಲೆ ನಡೆಸಲಾಗಿದೆ.