ಕಳೆದ 24 ಗಂಟೆಗಳಲ್ಲಿ ಆಪ್ ಗೆ ಲಕ್ಷ ಲಕ್ಷ ಜನರಿಂದ ಮಿಸ್ ಕಾಲ್!
Recommended Video
ನವದೆಹಲಿ, ಫೆಬ್ರವರಿ.13: ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದ್ದೇ ಬಾರಿಸಿದ್ದು. ಆಪ್ ಜನಪ್ರಿಯತೆ ಮತ್ತಷ್ಟು ಹೆಚ್ಚಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 11 ಲಕ್ಷ ಜನರು ಆಪ್ ಗೆ ಸೇರ್ಪಡೆಗೊಂಡಿದ್ದಾರೆ.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ರಾಷ್ಟ್ರ ನಿರ್ಮಾಣ ಚಳವಳಿಯನ್ನು ಆರಂಭಿಸಿದ್ದು, ಪಕ್ಷಕ್ಕೆ ಸೇರ್ಪಡೆಗೊಳ್ಳಲು ಬಯಸುವವರಿಗೆ ದೂರವಾಣಿ ಸಂಖ್ಯೆಯೊಂದನ್ನು ನೀಡಿದೆ. ಈ ಸಂಖ್ಯೆಗೆ ಲಕ್ಷ ಲಕ್ಷ ಜನರು ಮಿಸ್ಡ್ ಕಾಲ್ ನೀಡುವ ಮೂಲಕ ಪಕ್ಷಕ್ಕೆಸ ಸೇರ್ಪಡೆಗೊಂಡಿದ್ದಾರೆ.
ನವದೆಹಲಿಯಲ್ಲಿ ಮಫ್ಲರ್ ಮ್ಯಾನ್ ಎದುರು ಮಂಕಾಗಿದ್ದೇಕೆ ಬಿಜೆಪಿ?
ದೇಶಾದ್ಯಂತ ಈ ದೂರವಾಣಿ ಸಂಖ್ಯೆಯನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುವುದಕ್ಕೆ ಆಪ್ ತೀರ್ಮಾನಿಸಿದೆ. 'ಕರ್ತವ್ಯದ ರಾಜಕಾರಣ'ಕ್ಕಾಗಿ ಆಪ್ ಅಭಿಯಾನವನ್ನು ಆರಂಭಿಸಿದ್ದು, ಭಾರತದಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.
ನವದೆಹಲಿಯಲ್ಲಿ ಆಪ್ ಜಯಭೇರಿ:
ನವದೆಹಲಿ ವಿಧಾನಸಭಾ ಚುನಾವಣೆಯ 70 ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷವು 62 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಭರ್ಜರಿ ಗೆಲುವು ದಾಖಲಿಸಿದೆ. ಇನ್ನು, ಬಿಜೆಪಿ ಕೇವಲ 8 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ, ರಾಷ್ಟ್ರೀಯ ಪಕ್ಷ ಎನಿಸಿರುವ ಕಾಂಗ್ರೆಸ್ ಸತತ ಎರಡನೇ ಬಾರಿಯೂ ಶೂನ್ಯ ಸಾಧನೆ ಮಾಡಿದೆ.
ಈ ಬಾರಿ ನಡೆದ ದೆಹಲಿ ಚುನಾವಣೆಯಲ್ಲಿ ಬಿಜೆಪಿ ಹಿಂದೂ-ಮುಸ್ಲಿಂ ಅಸ್ತ್ರಗಳನ್ನೇ ಬಳಸಿಕೊಂಡು ಪ್ರಚಾರದ ಅಖಾಡಕ್ಕೆ ಧುಮುಕಿತು. ಇದನ್ನು ಹೊರತುಪಡಿಸಿ ಸಾರ್ವಜನಿಕರ ಸಮಸ್ಯೆಗಳು ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಸೊಲ್ಲೆತ್ತಲಿಲ್ಲ. ಆದರೆ, ಆಮ್ ಆದ್ಮಿ ಪಕ್ಷವು ಜನ ಸಾಮಾನ್ಯ ಸಮಸ್ಯೆಗಳು ಮತ್ತು ಮೂಲಭೂತ ಸೌಕರ್ಯಗಳನ್ನೇ ಮುಖ್ಯಧ್ಯೇಯವನ್ನಾಗಿ ಇಟ್ಟುಕೊಂಡು ಪ್ರಚಾರ ನಡೆಸಿತು. ಇದರ ಪರಿಣಾಮವೇ ರಾಷ್ಟ್ರ ರಾಜಧಾನಿಯ ಮತದಾರ ಮತ್ತೊಮ್ಮೆ ಆಪ್ ಕೈಗೆ ಅಧಿಕಾರದ ಚುಕ್ಕಾಣಿ ಕೊಟ್ಟಿದ್ದಾರೆ.