ಭಾರತದ ಪ್ರತೀಕಾರಕ್ಕೆ ಪಾಕಿಸ್ತಾನದ 11 ಸೈನಿಕರ ಸಾವು: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ
ನವದೆಹಲಿ, ನವೆಂಬರ್ 14: ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಯ ಕದನ ವಿರಾಮ ಉಲ್ಲಂಘನೆ ಮಾಡಿದ್ದಕ್ಕಾಗಿ, ಭಾರತೀಯ ಸೇನೆಯ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಶುಕ್ರವಾರ 11 ಪಾಕಿಸ್ತಾನ ಸೈನಿಕರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ.
ಭಾರತೀಯ ಸೇನೆಯ ಮೂಲಗಳ ಪ್ರಕಾರ ಎರಡು-ಮೂರು ಪಾಕಿಸ್ತಾನ ಸೇನಾ ವಿಶೇಷ ಸೇವಾ ಗುಂಪು (ಎಸ್ಎಸ್ಜಿ) ಕಮಾಂಡೋಗಳು ಸಾವನ್ನಪ್ಪಿದವರಲ್ಲಿ ಸೇರಿದ್ದಾರೆ.
ನವೆಂಬರ್ 13 ರಂದು ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ, ಉರಿ ಪ್ರದೇಶದಿಂದ ಗುರೆಜ್ ವರೆಗಿನ ಅನೇಕ ಸ್ಥಳಗಳಲ್ಲಿ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ನಡೆಸಿತ್ತು.

ಎಲ್ಒಸಿ ಘಟನೆ ಕುರಿತು ಚರ್ಚಿಸಲು ಪಾಕಿಸ್ತಾನ ವಿದೇಶಾಂಗ ಕಚೇರಿ ಶನಿವಾರ ಭಾರತೀಯ ರಾಯಭಾರಿಯನ್ನು ಕರೆಸಿದೆ. ಪಾಕಿಸ್ತಾನ ಡೈರೆಕ್ಟರ್ ಜನರಲ್ ಇಂಟರ್ ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ಡಿಜಿ-ಐಎಸ್ಪಿಆರ್) ಮೇಜರ್ ಜನರಲ್ ಬಾಬರ್ ಇಫ್ತಿಕಾರ್ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಅವರ ಪತ್ರಿಕಾಗೋಷ್ಠಿಯನ್ನು ನ.14ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ.
ಭಾರತೀಯ ಸೇನೆಯ ಮುಂಚೂಣಿ ಪಡೆಗಳ ಪ್ರಕಾರ ಶುಕ್ರವಾರ ಕೇರನ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಅನುಮಾನಾಸ್ಪದ ಚಲನೆಯನ್ನು ಗುರುತಿಸಿವೆ. ಭಾರತೀಯ ಗಡಿ ಪಡೆಗಳು ಒಳನುಸುಳುವಿಕೆ ಯೋಜನೆಯನ್ನು ವಿಫಲಗೊಳಿಸಿದವು. ಇದರ ಪರಿಣಾಮವಾಗಿ ಪಾಕಿಸ್ತಾನದ ಕಡೆಯಿಂದ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ (ಸಿ.ಎಫ್.ವಿ) ಪ್ರಾರಂಭವಾಯಿತು.

ಉತ್ತರ ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ ಶುಕ್ರವಾರ ಪಾಕಿಸ್ತಾನ ಸೇನೆಯ ಶಿಬಿರಗಳನ್ನು ಹೊಡೆಯುವ ವೀಡಿಯೊಗಳನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಪಾಕಿಸ್ತಾನ ಸೇನೆಯ ಶಿಬಿರಗಳ ಮೇಲೆ ಪ್ರತೀಕಾರದ ಗುಂಡಿನ ಸಂದರ್ಭದಲ್ಲಿ, ಭಾರತೀಯ ಸೇನೆಯು ಸ್ಪೈಕ್ ಟ್ಯಾಂಕ್ ವಿರೋಧಿ ಮಾರ್ಗದರ್ಶಿ ಕ್ಷಿಪಣಿಗಳನ್ನು ಸಹ ಬಳಸಿದೆ. ಇವುಗಳನ್ನು ಇತ್ತೀಚೆಗೆ ಇಸ್ರೇಲ್ನಿಂದ ತುರ್ತು ಸ್ವಾಧೀನ ಪ್ರಕರಣದಲ್ಲಿ ತರಿಸಿಕೊಳ್ಳಲಾಗಿತ್ತು.
ಕೇರನ್ ಸೆಕ್ಟರ್ ನಲ್ಲಿ ಎಲ್ಒಸಿ ಉದ್ದಕ್ಕೂ ಪಾಕಿಸ್ತಾನ ಶಸ್ತ್ರಗಳನ್ನು ಹಾರಿಸಿತು. ಈ ಅಪ್ರಚೋದಿತ ಕ್ರಮದಿಂದಾಗಿ ಭಾರತವು ಪ್ರತೀಕಾರ ತೀರಿಸಿಕೊಂಡಿತು. ಪಾಕಿಸ್ತಾನಸ ಹಲವಾರು ಮದ್ದುಗುಂಡಿನ ಶೇಖರಣೆಗಳು ಮತ್ತು ಅನೇಕ ಭಯೋತ್ಪಾದಕ ಉಡಾವಣಾ ಪ್ಯಾಡ್ಗಳಿಗೆ ಹಾನಿಯಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications