Get Updates
Get notified of breaking news, exclusive insights, and must-see stories!

ಗಣರಾಜ್ಯೋತ್ಸವ ಹಿಂಸಾಚಾರ: ನಟ ದೀಪ್ ಸಿಧುಗೆ 14 ದಿನಗಳ ನ್ಯಾಯಾಂಗ ಬಂಧನ

ನವದೆಹಲಿ,ಫೆಬ್ರವರಿ 23: ಗಣರಾಜ್ಯೋತ್ಸವದ ದಿನದಂದು ರೈತರ ಪ್ರತಿಭಟನೆ ಹಿಂಸಾತ್ಮ ರೂಪವನ್ನು ತಾಳಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದೀಪ್ ಸಿಧುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಟ್ರ್ಯಾಕ್ಟರ್ ಜಾಥಾ ಹೆಸರಿನಲ್ಲಿ ಕೆಂಪು ಕೋಟೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಭಾರತಕ್ಕೆ ಅವಮಾನ ಮಾಡಿದ್ದರು.

ಸಾರ್ವಜನಿಕರ ಆಸ್ತಿಪಾಸ್ತಿ ನಾಶಪಡಿಸಿದ್ದರು. ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು,ಈ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ದೀಪ್ ಸುಧಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

14-Day Judicial Custody For Actor-Activist Deep Sidhu Over Republic Day Violence

ದೆಹಲಿ ಹಿಂಸಾಚಾರದಲ್ಲಿ ಪ್ರಮುಖ ಆರೋಪಿಯಾಗಿರುವ ದೀಪ್ ಸಿಧು ಹೆಚ್ಚಿನ ವಿಚಾರಣೆ ಅಗತ್ಯವಿದೆ, ಹೀಗಾಗಿ ಜಾಮೀನು ನೀಡಬಾರದು ಎಂದು ದೆಹಲಿ ಪೊಲೀಸರ ಪರ ವಕೀಲರು ವಾದಿಸಿದ್ದರು.

ಜನವರಿ 26 ರಂದು ನಡೆದ ಹಿಂಸಾಚಾರದಲ್ಲಿ ಸುಮಾರು 500ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು.ಸಾರ್ವಜನಿಕ ಸಾರಿಗೆ ,ಪೊಲೀಸ್ ವಾಹನಗಳು ಜಖಂಗೊಂಡಿತ್ತು.
ಫೆ.9 ರಂದು ದೀಪ್ ಸಿಧುವನ್ನು ಪಂಜಾಬ್‌ನ ಜೀಕರ್‌ಪುರದಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು, ಬಳಿಕ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಲಾಗಿತ್ತು.

ಈ ವೇಳೆ ನ್ಯಾಯಾಲಯ 7 ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು. ಇಂದಿಗೆ 7 ದಿನದ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಕಾರಣ ದೆಹಲಿ ಕೋರ್ಟ್‌ಗೆ ಹಾಜರುಪಡಿಸಲಾಗಿದೆ. ಈ ವೇಳೆ 14 ದಿನದ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಸೂಚಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+