ಬಜೆಟ್ 2021; ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು 16 ಪಕ್ಷಗಳ ತೀರ್ಮಾನ
ನವದೆಹಲಿ, ಜನವರಿ 28: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 29, ಶುಕ್ರವಾರದಿಂದ ಆರಂಭಗೊಳ್ಳಲಿದ್ದು ಮೊದಲ ದಿನ ಬಜೆಟ್ ಕುರಿತ ರಾಷ್ಟ್ರಪತಿ ಭಾಷಣವನ್ನು 16 ವಿರೋಧ ಪಕ್ಷಗಳು ಬಹಿಷ್ಕರಿಸಲಿವೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.
Union Budget 2021: ಇತಿಹಾಸದಲ್ಲೇ ಮೊದಲ ಬಾರಿ "ಕಾಗದರಹಿತ ಬಜೆಟ್"
ಸಂಸತ್ತಿನಲ್ಲಿ ಶುಕ್ರವಾರದಿಂದ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಈ ಮೊದಲ ದಿನದ ಅಧಿವೇಶನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣವನ್ನು ಬಹಿಷ್ಕರಿಸಲು 16 ಪಕ್ಷಗಳು ತೀರ್ಮಾನಿಸಿರುವುದಾಗಿ ಹೇಳಿಕೆ ನೀಡಿದ್ದೇವೆ. ಯಾವುದೇ ವಿರೋಧವಿಲ್ಲದೇ, ಯಾರ ಅಭಿಪ್ರಾಯವನ್ನೂ ಪಡೆಯದೆ ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಒತ್ತಾಯಪೂರ್ವಕವಾಗಿ ಜಾರಿಗೊಳಿಸಲಾಗಿದೆ. ರೈತರಿಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ" ಎಂದು ಹೇಳಿದ್ದಾರೆ.
ಬಜೆಟ್ ಮಂಡನೆಗೆ ಮುನ್ನ ಜನವರಿ 29ರಂದು ಸಂಸತ್ತಿನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜ್ಯ ಸಭೆ ಹಾಗೂ ಲೋಕಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರುವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ.