ತ್ವರಿತ ಅಲರ್ಟ್ ಗಳಿಗಾಗಿ
For Daily Alerts
1984 ರ ಸಿಖ್ ದಂಗೆ ಪ್ರಕರಣ: ಸಜ್ಜನ್ ಕುಮಾರ್ ಅರ್ಜಿ ವಜಾ
ನವದೆಹಲಿ, ಡಿಸೆಂಬರ್ 21: 1984ರ ಸಿಖ್ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಜ್ಜನ್ ಕುಮಾರ್ ಅವರು ಶರಣಾಗಲು ಸಮಯಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಸಿಖ್ ನರಮೇಧಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರನ್ನು ದೆಹಲಿಯ ನ್ಯಾಯಾಲಯ ದೋಷಿ ಎಂದು ಪರಿಗಣಿಸಿ ಡೊ.17 ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು.
1984ರ ಸಿಖ್ ದಂಗೆ:ಕಾಂಗ್ರೆಸ್ಸಿನ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ
ಅವರು ಡಿ.31 ರವೊಳಗೆ ಶರಣಾಗಬೇಕೆಂಬ ಆದೇಶಕ್ಕೆ ಪ್ರತಿಯಾಗಿ, ಶರಣಾಗಲು ಜನವರಿ 31 ರವರೆಗೆ ಸಮಯಾವಕಾಶ ನೀಡಬೇಕು ಎಂದು ಸಜ್ಜನ್ ಕುಮಾರ್ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
Comments
English summary
1984 anti-Sikh riots case: Delhi High Court dismissed Sajjan Kumar's plea which sought more time to surrender
Story first published: Friday, December 21, 2018, 10:56 [IST]