ಮಾರ್ಚ್.01ರಿಂದ ಎಟಿಎಂಗಳಲ್ಲೂ ಬರೋದಿಲ್ಲ 2,000 ರೂಪಾಯಿ ನೋಟು
ನವದೆಹಲಿ, ಫೆಬ್ರವರಿ.24: ಎರಡು ಸಾವಿರ ರೂಪಾಯಿ ಮೌಲ್ಯದ ನೋಟುಗಳ ಚಲಾವಣೆ ಬಂದ್ ಆಗುತ್ತದೆ ಎಂಬ ಸುದ್ದಿ ದೇಶಾದ್ಯಂತ ಹರಿದಾಡುತ್ತಿದೆ. ಇದರ ನಡುವೆ ಮಾರ್ಚ್.01ರಿಂದ ಎಟಿಎಂಗಳಲ್ಲೂ 2 ಸಾವಿರ ರೂಪಾಯಿ ಮುಖಬೆಲೆಯ ನೋಟ್ ಗಳು ಬರುವುದಿಲ್ಲ ಎನ್ನಲಾಗುತ್ತಿದೆ.
ಇಂಡಿಯನ್ ಬ್ಯಾಂಕ್ ಮುಂದಿನ ಮಾರ್ಚ್.01ರಿಂದ ತನ್ನ ಬ್ಯಾಂಕ್ ಎಟಿಎಂಗಳಲ್ಲಿ 2 ಸಾವಿರ ರೂಪಾಯಿ ನೋಟ್ ಗಳನ್ನು ನೀಡುವುದನ್ನೇ ಬಂದ್ ಮಾಡುವುದಾಗಿ ತಿಳಿಸಿದೆ. ಸಾರ್ವಜನಿಕರು 2 ಸಾವಿರ ರೂಪಾಯಿ ಚಿಲ್ಲರೆಗೆ ಪರದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳುತ್ತಿರುವುದಾಗಿ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು, ಬ್ಯಾಂಕ್ ನ ಶಾಖೆಗಳಲ್ಲಿ ಎಂದಿನಂತೆ ಗ್ರಾಹಕರಿಗೆ 2 ಸಾವಿರ ರೂಪಾಯಿ ಮೌಲ್ಯದ ನೋಟನ್ನು ನೀಡಲಾಗುತ್ತದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ ಎಂದು ಬ್ಯಾಂಕ್ ನ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2 ಸಾವಿರ ರೂಪಾಯಿ ನೋಟಿನ ಬಗ್ಗೆ ಆತಂಕ ಬೇಡ
ಇಂಡಿಯನ್ ಬ್ಯಾಂಕ್ ಎಟಿಎಂಗಳಿಗಷ್ಟೇ ಈ ಕ್ರಮವನ್ನು ಸೀಮಿತಗೊಳಿಸಲಾಗಿದೆ. ದೇಶಾದ್ಯಂತ ಇರುವ ಇಂಡಿಯನ್ ಬ್ಯಾಂಕ್ ನ ಎಲ್ಲ ಶಾಖೆಗಳಲ್ಲೂ 2 ಸಾವಿರ ರೂಪಾಯಿ ಮುಖಬೆಲೆಯ ನೋಟಿನ ವಿನಿಮಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಫೆಬ್ರವರಿ.17ರಂದೇ ಎಲ್ಲ ಶಾಖೆಗಳಿಗೆ ಸೂಚನೆ
ಇನ್ನು, ದೇಶಾದ್ಯಂತ ಇರುವ ಇಂಡಿಯನ್ ಬ್ಯಾಂಕ್ ನ ಎಲ್ಲ ಎಟಿಎಂಗಳಲ್ಲೂ ಮಾರ್ಚ್.01ರಿಂದ 2 ಸಾವಿರ ರೂಪಾಯಿ ಮೌಲ್ಯದ ನೋಟು ಸಿಗುವುದಿಲ್ಲ. ಈ ಕುರಿತು ಕ್ರಮ ತೆಗೆದುಕೊಳ್ಳುವಂತೆ ಬ್ಯಾಂಕ್ ಹಿರಿಯ ಅಧಿಕಾರಿಗಳು ಫೆಬ್ರವರಿ.17ರಂದೇ ಎಲ್ಲ ಶಾಖೆಗಳಿಗೂ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.

200 ರೂಪಾಯಿ ಕ್ಯಾಸೆಟ್ ಜೋಡಣೆಗೆ ಸೂಚನೆ
ಎಟಿಎಂಗಳಲ್ಲಿ 2 ಸಾವಿರ ರೂಪಾಯಿ ನೋಟ್ ಗಳನ್ನು ಜೋಡಿಸುವ ಕ್ಯಾಸೆಟ್ ಗಳನ್ನು ತೆಗೆದು ಅದರ ಬದಲು 200 ರೂಪಾಯಿ ನೋಟ್ ಗಳನ್ನು ಜೋಡಿಸುವ ಕ್ಯಾಸೆಟ್ ಗಳನ್ನು ಹಾಕುವಂತೆ ಎಲ್ಲ ಶಾಖೆ ಸಿಬ್ಬಂದಿಗೂ ಮಾಹಿತಿ ರವಾನಿಸಲಾಗಿದೆ.

ಚಿಲ್ಲರೆ ಸಮಸ್ಯೆ ಬಗೆಹರಿಸಲು ಇಂಡಿಯನ್ ಬ್ಯಾಂಕ್ ಕ್ರಮ
ಗ್ರಾಹಕರು 2 ಸಾವಿರ ರೂಪಾಯಿಗೆ ಚಿಲ್ಲರೆ ಪಡೆಯುವುದಕ್ಕಾಗಿ ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮವನ್ನು ಜರುಗಿಸಲಾಗಿದೆ ಎಂದು ಇಂಡಿಯನ್ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಹೊರತುಪಡಿಸಿ ಬೇರೆ ಯಾವ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಗಳು ತಮ್ಮ ಬ್ಯಾಂಕಿನ ಎಟಿಎಂಗಳಲ್ಲಿ 2 ಸಾವಿರ ರೂಪಾಯಿ ಮೌಲ್ಯನ ನೋಟ್ ನ್ನು ತುಂಬಿಸುವುದಿಲ್ಲ ಎಂದು ಮಾಹಿತಿ ನೀಡಿಲ್ಲ. ಈ ಕ್ರಮವು ಕೇವಲ ಇಂಡಿಯನ್ ಬ್ಯಾಂಕ್ ನದ್ದು ಎಂದು ತಿಳಿದು ಬಂದಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications