ಮಾರ್ಚ್.01ರಿಂದ ಎಟಿಎಂಗಳಲ್ಲೂ ಬರೋದಿಲ್ಲ 2,000 ರೂಪಾಯಿ ನೋಟು
ನವದೆಹಲಿ, ಫೆಬ್ರವರಿ.24: ಎರಡು ಸಾವಿರ ರೂಪಾಯಿ ಮೌಲ್ಯದ ನೋಟುಗಳ ಚಲಾವಣೆ ಬಂದ್ ಆಗುತ್ತದೆ ಎಂಬ ಸುದ್ದಿ ದೇಶಾದ್ಯಂತ ಹರಿದಾಡುತ್ತಿದೆ. ಇದರ ನಡುವೆ ಮಾರ್ಚ್.01ರಿಂದ ಎಟಿಎಂಗಳಲ್ಲೂ 2 ಸಾವಿರ ರೂಪಾಯಿ ಮುಖಬೆಲೆಯ ನೋಟ್ ಗಳು ಬರುವುದಿಲ್ಲ ಎನ್ನಲಾಗುತ್ತಿದೆ.
ಇಂಡಿಯನ್ ಬ್ಯಾಂಕ್ ಮುಂದಿನ ಮಾರ್ಚ್.01ರಿಂದ ತನ್ನ ಬ್ಯಾಂಕ್ ಎಟಿಎಂಗಳಲ್ಲಿ 2 ಸಾವಿರ ರೂಪಾಯಿ ನೋಟ್ ಗಳನ್ನು ನೀಡುವುದನ್ನೇ ಬಂದ್ ಮಾಡುವುದಾಗಿ ತಿಳಿಸಿದೆ. ಸಾರ್ವಜನಿಕರು 2 ಸಾವಿರ ರೂಪಾಯಿ ಚಿಲ್ಲರೆಗೆ ಪರದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳುತ್ತಿರುವುದಾಗಿ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು, ಬ್ಯಾಂಕ್ ನ ಶಾಖೆಗಳಲ್ಲಿ ಎಂದಿನಂತೆ ಗ್ರಾಹಕರಿಗೆ 2 ಸಾವಿರ ರೂಪಾಯಿ ಮೌಲ್ಯದ ನೋಟನ್ನು ನೀಡಲಾಗುತ್ತದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ ಎಂದು ಬ್ಯಾಂಕ್ ನ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2 ಸಾವಿರ ರೂಪಾಯಿ ನೋಟಿನ ಬಗ್ಗೆ ಆತಂಕ ಬೇಡ
ಇಂಡಿಯನ್ ಬ್ಯಾಂಕ್ ಎಟಿಎಂಗಳಿಗಷ್ಟೇ ಈ ಕ್ರಮವನ್ನು ಸೀಮಿತಗೊಳಿಸಲಾಗಿದೆ. ದೇಶಾದ್ಯಂತ ಇರುವ ಇಂಡಿಯನ್ ಬ್ಯಾಂಕ್ ನ ಎಲ್ಲ ಶಾಖೆಗಳಲ್ಲೂ 2 ಸಾವಿರ ರೂಪಾಯಿ ಮುಖಬೆಲೆಯ ನೋಟಿನ ವಿನಿಮಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಫೆಬ್ರವರಿ.17ರಂದೇ ಎಲ್ಲ ಶಾಖೆಗಳಿಗೆ ಸೂಚನೆ
ಇನ್ನು, ದೇಶಾದ್ಯಂತ ಇರುವ ಇಂಡಿಯನ್ ಬ್ಯಾಂಕ್ ನ ಎಲ್ಲ ಎಟಿಎಂಗಳಲ್ಲೂ ಮಾರ್ಚ್.01ರಿಂದ 2 ಸಾವಿರ ರೂಪಾಯಿ ಮೌಲ್ಯದ ನೋಟು ಸಿಗುವುದಿಲ್ಲ. ಈ ಕುರಿತು ಕ್ರಮ ತೆಗೆದುಕೊಳ್ಳುವಂತೆ ಬ್ಯಾಂಕ್ ಹಿರಿಯ ಅಧಿಕಾರಿಗಳು ಫೆಬ್ರವರಿ.17ರಂದೇ ಎಲ್ಲ ಶಾಖೆಗಳಿಗೂ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.

200 ರೂಪಾಯಿ ಕ್ಯಾಸೆಟ್ ಜೋಡಣೆಗೆ ಸೂಚನೆ
ಎಟಿಎಂಗಳಲ್ಲಿ 2 ಸಾವಿರ ರೂಪಾಯಿ ನೋಟ್ ಗಳನ್ನು ಜೋಡಿಸುವ ಕ್ಯಾಸೆಟ್ ಗಳನ್ನು ತೆಗೆದು ಅದರ ಬದಲು 200 ರೂಪಾಯಿ ನೋಟ್ ಗಳನ್ನು ಜೋಡಿಸುವ ಕ್ಯಾಸೆಟ್ ಗಳನ್ನು ಹಾಕುವಂತೆ ಎಲ್ಲ ಶಾಖೆ ಸಿಬ್ಬಂದಿಗೂ ಮಾಹಿತಿ ರವಾನಿಸಲಾಗಿದೆ.

ಚಿಲ್ಲರೆ ಸಮಸ್ಯೆ ಬಗೆಹರಿಸಲು ಇಂಡಿಯನ್ ಬ್ಯಾಂಕ್ ಕ್ರಮ
ಗ್ರಾಹಕರು 2 ಸಾವಿರ ರೂಪಾಯಿಗೆ ಚಿಲ್ಲರೆ ಪಡೆಯುವುದಕ್ಕಾಗಿ ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮವನ್ನು ಜರುಗಿಸಲಾಗಿದೆ ಎಂದು ಇಂಡಿಯನ್ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಹೊರತುಪಡಿಸಿ ಬೇರೆ ಯಾವ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಗಳು ತಮ್ಮ ಬ್ಯಾಂಕಿನ ಎಟಿಎಂಗಳಲ್ಲಿ 2 ಸಾವಿರ ರೂಪಾಯಿ ಮೌಲ್ಯನ ನೋಟ್ ನ್ನು ತುಂಬಿಸುವುದಿಲ್ಲ ಎಂದು ಮಾಹಿತಿ ನೀಡಿಲ್ಲ. ಈ ಕ್ರಮವು ಕೇವಲ ಇಂಡಿಯನ್ ಬ್ಯಾಂಕ್ ನದ್ದು ಎಂದು ತಿಳಿದು ಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications