ದೆಹಲಿಯ ಚರಂಡಿಯಲ್ಲಿ ಮತ್ತೆರೆಡು ಮೃತದೇಹ ಪತ್ತೆ
ನವದೆಹಲಿ, ಫೆಬ್ರವರಿ 27: ಗುಪ್ತಚರ ಇಲಾಖೆ ಅಧಿಕಾರಿ ಶವ ಪತ್ತೆಯಾಗಿ ಒಂದು ದಿನದೊಳಗೆ ಮತ್ತೆರೆಡು ಶವ ಚರಂಡಿಯಲ್ಲಿ ಪತ್ತೆಯಾಗಿದೆ.
ಗಂಗವಿಹಾರ್ ಜೊಹ್ರಿಪುರದ ವಿಸ್ತರಣೆ ಪ್ರದೇಶದಲ್ಲಿರುವ ಚರಂಡಿಯಲ್ಲಿ ಎರಡು ಶವಗಳು ಪತ್ತೆಯಾಗಿದ್ದು ಅವುಗಳನ್ನು ಹೊರತೆಗೆಯಲಾಗಿದೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಚರಂಡಿಯೊಳಗೆ ಇನ್ನೂ ಶವಗಳಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಈಶಾನ್ಯ ದೆಹಲಿಯಲ್ಲಿ ನಡೆದ ಸಿಎಎ ಪರ ಮತ್ತು ವಿರೋಧ ಹೋರಾಟದಿಂದಾಗಿ ಸಾವಿಗೀಡಾದವರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚಳ ಕಾಣುತ್ತಿದೆ. ಇಂದು ಬೆಳಗ್ಗೆ ಚರಂಡಿಯಿಂದ ಎರಡು ಶವವನ್ನು ಹೊರತೆಗೆಯಲಾಗಿದೆ.

ರ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಅಧಿಕಾರಿ ಹಿಂಸಾಚಾರದಲ್ಲಿ ಕೊಲೆಮಾಡಿ ಅವರ ಶವವನ್ನು ಚರಂಡಿಗೆ ಎಸೆಯಲಾಗಿತ್ತು. ಅವರನ್ನು ಮನೆಯಿಂದ ಎಳೆದು ತಂದು ಕೊಲೆ ಮಾಡಿದ್ದಾಗಿ ಹೇಳಲಾಗಿತ್ತು.
ದೆಹಲಿಯ ಹಿಂಸಾಚಾರದಿಂದಾಗಿ ಸತ್ತವರ ಸಂಖ್ಯೆ 35ಕ್ಕೆ ತಲುಪಿದೆ. ಇನ್ನೂ ಹೆಚ್ಚೆಚ್ಚು ಶವಗಳು ಪತ್ತೆಯಾಗುತ್ತಿರುವುದು ವರದಿಯಾಗಿದೆ.
ಈಶಾನ್ಯ ದೆಹಲಿಯ ಖಜೂರಿ ಖಾಸ್ ಪ್ರದೇಶದ ನಿವಾಸಿಯಾಗಿದ್ದ ಅಂಕಿತ್ ಶರ್ಮಾ, ಅವರ ದೇಹ ಅತ್ಯಂತ ಗಲಭೆ ಪೀಡಿತ ಪ್ರದೇಶಗಳಲ್ಲಿ ಒಂದಾದ ಜಫ್ರಾಬಾದ್ನಲ್ಲಿ ಸಿಕ್ಕಿದೆ. ಅಂಕಿತ್ ಸಾವಿಗೆ ಎಎಪಿ ಮುಖಂಡ ತಾಹೀರ್ ಹುಸೇನ್ ಕಾರಣ ಎಂದು ಅವರ ತಂದೆ ರವೀಂದರ್ ಶರ್ಮಾ ಆರೋಪಿಸಿದ್ದಾರೆ.
ಹುಸೇನ್ ನೇತೃತ್ವದಲ್ಲಿ ಕಲ್ಲು ತೂರಾಟಗಾರರು ನಡೆಸಿದ್ದಾರೆ ಎನ್ನಲಾದ ದಾಳಿಯ ವಿಡಿಯೋವನ್ನು ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ. ಹುಸೇನ್ ಅವರೇ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಮತ್ತು ಕಲ್ಲು ತೂರಾಟ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅಂಕಿತ್ ಹತ್ಯೆಯ ಹಿಂದೆ ಹುಸೇನ್ ಕೈವಾಡ ಇದೆ ಎಂದು ಅವರ ಕುಟುಂಬ ಹೇಳಿದೆ ಎಂದು ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications