ಈರುಳ್ಳಿ ಜೊತೆಗೆ 20 ಆಹಾರ ವಸ್ತುಗಳು ದುಬಾರಿ
ನವದೆಹಲಿ, ಡಿಸೆಂಬರ್ 12: ಕೇವಲ ಈರುಳ್ಳಿ ಒಂದೇ ಅಲ್ಲ ಅದರ ಜೊತೆ ಅದರ ಜೊತೆ ನಿತ್ಯ ಬಳಕೆಯ 20 ಆಹಾರ ಪದಾರ್ಥಗಳು ಈ ವರ್ಷದಲ್ಲಿ ದುಬಾರಿಯಾಗಿವೆ. ಈ ವರ್ಷದ ಆರಂಭ ಜನೆವರಿಯಿಂದ ಡಿಸೆಂಬರ್ ನಡುವಿನ ಅವಧಿಯಲ್ಲಿ ಈರುಳ್ಳಿ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಲೋಕ ಸಭೆಯಲ್ಲಿ ಹೇಳಿದ್ದಾರೆ.
ಈರುಳ್ಳಿಯ ಜೊತೆಗೆ ತೊಗರಿ ಬೆಳೆ, ಉದ್ದು, ಹೆಸರು ಬೆಳೆಗಳ ದರದಲ್ಲಿ ಏರಿಕೆ ಕಂಡಿವೆ. ಪೂರೈಕೆಯ ಕೊರತೆ ಮತ್ತು ಪ್ರತಿಕೂಲ ಹವಾಮಾನ ವೈಪರಿತ್ಯ, ಸಾಗಣೆಯ ವೆಚ್ಚದಲ್ಲಿ ಏರಿಕೆ, ಕಾಳಸಂತೆಯಲ್ಲಿ ಕೃತಕ ಅಭಾವ ಮತ್ತು ಇತರ ಕಾರಣಗಳಿಂದಾಗಿ ಬೆಲೆ ಏರಿಕೆಯಾಗಿದೆ ಎಂದು ತಿಳಿಸಿದರು.
ದಿನ ನಿತ್ಯ ಆಹಾರ ಬಳಕೆಯಲ್ಲಿ ಈರುಳ್ಳಿ ಹೆಚ್ಚು ಬಳಕೆಯಾಗಲಿದ್ದು, ಇದು ದೇಶದ ಕೆಲವು ಭಾಗಗಳಲ್ಲಿ 1 ಕೆ.ಜಿಗೆ 200 ರೂ, ವರೆಗೆ ಮಾರಾಟವಾಗುತ್ತಿದೆ. ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಸರಾಸರಿ ದರ 81 ರೂ, ಅಗಿದೆ ಎಂದರು.

ಉದ್ದಿನ ಬೆಳೆಯ ದರ ಕೆ.ಜಿಗೆ 72 ರೂ, ನಿಂದ 95 ರೂ, ಗೆ ಏರಿಕೆಯಾಗಿದೆ. ತೊಗರಿ ಮತ್ತು ಹೆಸರು ಬೆಳೆ ಶೇ, 15 ರಿಂದ 20 ರಷ್ಟು ಏರಿಕೆಯಾಗಿವೆ. ಆಲೂಗಡ್ಡೆ ಶೇ,40 ಹೆಚ್ಚಳವಾಗಿದೆ. ಅಕ್ಕಿ ಮತ್ತು ಗೋಧಿಯಲ್ಲಿ ಶೇ, 10 ವೃದ್ಧಿಸಿದೆ ಎಂದು ಮಾಹಿತಿ ನೀಡಿದರು.
ಕೆಲ ದಿನಗಳಿಂದ ಅಫ್ಘಾನಿಸ್ತಾನ ಮತ್ತು ಟರ್ಕಿಯಿಂದ ಈರುಳ್ಳಿ ಆಮದಾಗುತ್ತಿದ್ದು, ಗಗನಕ್ಕೇರಿದ್ದ ಈರುಳ್ಳಿ ದರವನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗಿದೆ, ಅಟ್ಟಾರಿ ಗಡಿಯಲ್ಲಿ ಈರುಳ್ಳಿ ಸಾಗಣೆಯಾಗುತ್ತಿದ್ದು, ರಾಜಸ್ಥಾನದಲ್ಲಿ ಹೊಸ ಫಸಲು ಬರುತ್ತಿದೆ ಮುಂದಿನ ದಿನಗಳಲ್ಲಿ ದಿನನಿತ್ಯ ಬಳಕೆಯ ಆಹಾರ ಪದಾರ್ಥಗಳ ದರದಲ್ಲಿ ಇಳಿಕೆಯಾಗಬಹುದು ಎಂದು ತಿಳಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications