215 ಕೋಟಿ ಸುಲಿಗೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ಗೆ ದುಬಾರಿ ಸಾಕು ಪ್ರಾಣಿಗಳ ಉಡುಗೊರೆ
ನವದೆಹಲಿ ಆಗಸ್ಟ್ 17: 215 ಕೋಟಿ ಸುಲಿಗೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಜಾರಿ ನಿರ್ದೇಶನಾಲಯ ಹೆಸರಿಸಿದೆ. ಇಡಿ ಬುಧವಾರ ಬಾಲಿವುಡ್ ನಟಿಯ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಪ್ರಕರಣದ ಆರೋಪಿ ಜಾಕ್ವೆಲಿನ್ ಫರ್ನಾಂಡಿಸ್ಗೆ ದುಬಾರಿ ಸಾಕು ಪ್ರಾಣಿಗಳ ಉಡುಗೊರೆಯಾಗಿ ನೀಡಿರುವುದು ಬೆಳಕಿಗೆ ಬಂದಿದೆ.
ಸುಲಿಗೆ ಮಾಡಿದ ಹಣದ ಫಲಾನುಭವಿ ಜಾಕ್ವೆಲಿನ್ ಎಂದು ಇಡಿ ಪತ್ತೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಸುಕೇಶ್ ಚಂದ್ರಶೇಖರ್ ಸುಲಿಗೆಕೋರ ಎಂದು ಆಕೆಗೆ ತಿಳಿದಿತ್ತು ಎಂದು ಇಡಿ ನಂಬಿದೆ. ಪ್ರಮುಖ ಸಾಕ್ಷಿಗಳು ಮತ್ತು ಆರೋಪಿಗಳ ಹೇಳಿಕೆಗಳಿಂದ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಕೇಶ್ ಅವರೊಂದಿಗೆ ವೀಡಿಯೊ ಕರೆಗಳ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ. ಮಾತ್ರವಲ್ಲದೆ ಶ್ರೀಲಂಕಾ ಮೂಲದ ನಟಿ ಜಾಕ್ವೆಲಿನ್ ಗೆ ಉಡುಗೊರೆಗಳನ್ನು ನೀಡಿದ್ದಾಗಿ ಸುಕೇಶ್ ತಪ್ಪೊಪ್ಪಿಕೊಂಡಿದ್ದಾನೆ.
ಈ ಹಿಂದೆ ಸುಕೇಶ್ ಆಕೆಗೆ 10 ಕೋಟಿ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ಕಳುಹಿಸಿದ್ದನ್ನು ಇಡಿ ಪತ್ತೆ ಹಚ್ಚಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇಡಿ ಇದುವರೆಗೆ ನಟಿಯ 7 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಸುಕೇಶ್ ಚಂದ್ರಶೇಖರ್ ಜೊತೆಗಿನ ನಂಟುಗಳ ಆರೋಪದ ಮೇಲೆ ಇಡಿ ಹಲವು ಬಾರಿ ಪ್ರಶ್ನಿಸಿತ್ತು. ಮೂವತ್ಮೂರು ವರ್ಷದ ಸುಕೇಶ್ ಚಂದ್ರಶೇಖರ್ ಅವರನ್ನು ಹಲವು ರಾಜ್ಯ ಪೊಲೀಸರು ಮತ್ತು ಮೂರು ಕೇಂದ್ರೀಯ ಏಜೆನ್ಸಿಗಳು - ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆಯಿಂದ 32 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ತನಿಖೆ ನಡೆಸುತ್ತಿದೆ.
ಸುಕೇಶ್ ದೆಹಲಿಯ ಜೈಲಿನಲ್ಲಿದ್ದಾಗ, ಪ್ರಧಾನಿ ಕಚೇರಿ, ಕಾನೂನು ಸಚಿವಾಲಯ ಮತ್ತು ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಸಂತ್ರಸ್ತ ಮಹಿಳೆಯಿಂದ ಹಣ ವಸೂಲಿ ಮಾಡಿದ್ದಾನೆ. ಸಂತ್ರಸ್ತೆಯ ಪತಿಗೆ ಜಾಮೀನು ದೊರಕಿಸಿಕೊಡುವುದಾಗಿ ಮತ್ತು ಅವರ ಔಷಧ ವ್ಯಾಪಾರವನ್ನು ನಡೆಸುವುದಾಗಿ ಸುಕೇಶ್ ದೂರವಾಣಿ ಕರೆಗಳಲ್ಲಿ ಹೇಳಿಕೊಂಡಿದ್ದರು.

ಜಾಕ್ವೆಲಿನ್ಗೆ ಇಡಿ ಪ್ರಶ್ನೆ
ಸುಕೇಶ್ ಚಂದ್ರಶೇಖರ್ ಸುಲಿಗೆ ವ್ಯವಹಾರದಲ್ಲಿ ಭಾಗಿಯಾಗಿರುವುದು ಜಾಕ್ವೆಲಿನ್ಗೆ ತಿಳಿದಿತ್ತು ಎಂದು ಇಡಿ ನಂಬಿದೆ. ಈ ಹಿಂದೆ ಸುಕೇಶ್ ಜಾಕ್ವೆಲಿನ್ 10 ಕೋಟಿ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ನೀಡಿದ್ದರು ಎಂದು ಇಡಿ ತಿಳಿದುಕೊಂಡಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಇದುವರೆಗೆ 7 ಕೋಟಿ ರೂಪಾಯಿ ವಶಪಡಿಸಿಕೊಂಡಿದೆ. ಈ ಹಿಂದೆ ಜಾಕ್ವೆಲಿನ್ ಅವರನ್ನು ಇಡಿ ಹಲವು ಬಾರಿ ವಿಚಾರಣೆ ನಡೆಸಿತ್ತು. ಸುಕೇಶ್ ಜೊತೆಗಿನ ಸಂಬಂಧದ ಬಗ್ಗೆ ಜಾಕ್ವೆಲಿನ್ ಅವರನ್ನು ಇಡಿ ಪ್ರಶ್ನಿಸಿದೆ.

215 ಕೋಟಿ ರೂಪಾಯಿ ಸುಲಿಗೆ
33 ವರ್ಷದ ಸುಕೇಶ್ ವಿರುದ್ಧ 32 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಯ ತಂಡಗಳು ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳು ಆತನ ವಿರುದ್ಧ ದಾಖಲಾಗಿವೆ. ರಾನ್ಬಾಕ್ಸಿ ಸಂಸ್ಥೆಯ ಶಿವಿಂದರ್ ಸಿಂಗ್ ಅವರು ಬೇರೊಂದು ಹಣ ಅವ್ಯವಹಾರ ಪ್ರಕರಣದಲ್ಲಿ 2019 ರಲ್ಲಿ ಜೈಲು ಸೇರಿದ್ದರು. ಅವರನ್ನು ಬಿಡಿಸಿಕೊಡುವ ಭರವಸೆ ನೀಡಿದ ಸುಕೇಶ್ ಚಂದ್ರಶೇಖರ್, ಶಿವಿಂದರ್ ಅವರ ಪತ್ನಿ ಅದಿತಿ ಸಿಂಗ್ ಅವರಿಂದ 215 ಕೋಟಿ ರೂಪಾಯಿ ಸುಲಿಗೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಸುಕೇಶ್ ಪ್ರಧಾನಿ ಕಚೇರಿಯ ಅಧಿಕಾರಿಯಂತೆ ನಟಿಸಿ ಈ ಸುಲಿಗೆಯನ್ನು ಮಾಡಿದ್ದನು ಎಂದು ಹೇಳಲಾಗುತ್ತಿದೆ. ಸಂತ್ರಸ್ತೆಯ ಪತಿಗೆ ಜಾಮೀನು ಸಿಗಲಿದ್ದು, ನಂತರ ತನ್ನ ಫಾರ್ಮಾ ವ್ಯವಹಾರ ಪುನರಾರಂಭವಾಗಲಿದೆ ಎಂದು ಸುಕೇಶ್ ದೂರವಾಣಿ ಕರೆಯಲ್ಲಿ ಅದಿತಿ ಸಿಂಗ್ಗೆ ಭರವಸೆ ನೀಡಿದ್ದರು.

9 ಲಕ್ಷದ ಪರ್ಷಿಯನ್ ಬೆಕ್ಕು ಉಡುಗೊರೆ
ಜಾಕ್ವೆಲಿನ್ಗೆ ಸುಕೇಶ್ ಚಂದ್ರಶೇಖರ್ 5.71 ಕೋಟಿ ರೂಪಾಯಿ ಮೌಲ್ಯದ ಉಡುಗೊರೆ ನೀಡಿದ್ದಾರೆ ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದ್ದು, ಜಾಕ್ವೆಲಿನ್ ಅಪರಾಧ ಚಟುವಟಿಕೆಗಳ ಮೂಲಕ ಈ ಹಣವನ್ನು ಪಡೆದಿದ್ದಾಳೆ ಎನ್ನಲಾಗುತ್ತಿದೆ. ಚಂದ್ರಶೇಖರ್ ಅವರು ಪಿಂಕಿ ಇರಾನಿ ಮೂಲಕ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಈ ಉಡುಗೊರೆಗಳನ್ನು ಕಳುಹಿಸಿದ್ದರು. ಪಿಂಕಿ ಸುಕೇಶ್ನ ಹಳೆಯ ಸ್ನೇಹಿತೆಯಾಗಿದ್ದು, ಆಕೆ ಕೂಡ ಪ್ರಕರಣದಲ್ಲಿ ಸಹ ಆರೋಪಿಯಾಗಿದ್ದಾಳೆ. ಜಾಕ್ವೆಲಿನ್ಗೆ 52 ಲಕ್ಷ ರೂಪಾಯಿ ಮೌಲ್ಯದ ಕುದುರೆ, 9 ಲಕ್ಷ ರೂಪಾಯಿ ಮೌಲ್ಯದ ಪರ್ಷಿಯನ್ ಬೆಕ್ಕು ನೀಡಲಾಗಿದೆ. ಇದಲ್ಲದೇ ಜಾಕ್ವೆಲಿನ್ ಕುಟುಂಬ ಸದಸ್ಯರಿಗೆ ಸುಕೇಶ್ ಸಾಕಷ್ಟು ಹಣವನ್ನೂ ನೀಡಿದ್ದಾರೆ.

9 ಮಂದಿ ಬಂಧನ
ಇದಲ್ಲದೇ ಸುಕೇಶ್ ಐದು ವರ್ಷಗಳ ಹಿಂದಿನ ವಂಚನೆ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ. ನಾಯಕ ಟಿಟಿವಿ ದಿನಕರನ್ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಏಪ್ರಿಲ್ 4 ರಂದು ಇಡಿ ಅವರನ್ನು ಬಂಧಿಸಿತ್ತು. ಜಾಕ್ವೆಲಿನ್ ಫರ್ನಾಂಡಿಸ್ ಶ್ರೀಲಂಕಾದ ಪ್ರಜೆ ಎಂಬುದು ಗಮನಿಸಬೇಕಾದ ಸಂಗತಿ. ಅವರು 2009 ರಲ್ಲಿ ಭಾರತೀಯ ಚಲನಚಿತ್ರೋದ್ಯಮವನ್ನು ಪ್ರವೇಶಿಸಿದರು. ಇಡೀ ಪ್ರಕರಣದಲ್ಲಿ ಇಡಿ ಇದುವರೆಗೆ 9 ಮಂದಿಯನ್ನು ಬಂಧಿಸಿದೆ. ಇದರಲ್ಲಿ ಚಂದ್ರಶೇಖರ್ ಮತ್ತು ಅವರ ಪತ್ನಿ ಲೀನಾ ಮರಿಯಾ ಪಾಲ್ ಕೂಡ ಇದೆ ಎನ್ನಲಾಗುತ್ತಿದೆ.s
-
Anupama Gowda: ನನ್ನ ಮದುವೆಗೆ ನನ್ನನ್ನೂ ಕರೆಯಿರಿ: ಎಂಗೇಜ್ಮೆಂಟ್ ಸುದ್ದಿ ಹಬ್ಬಿಸಿದವರಿಗೆ ನಿರೂಪಕಿ ಅನುಪಮಾ ಗೌಡ ಕ್ಲಾರಿಟಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ











Click it and Unblock the Notifications