ಅಸ್ಸಾಂನಲ್ಲಿ 289 ವಿದೇಶಿಗರ ಬಂಧನ, 227 ಮಂದಿ ಗಡಿಪಾರು
ನವದೆಹಲಿ, ಡಿಸೆಂಬರ್ 11: ಅಸ್ಸಾಂನಲ್ಲಿ 2019ರಲ್ಲಿ ಇದುವರೆಗೂ 289 ಮಂದಿ ಘೋಷಿತ ವಿದೇಶಿಯರನ್ನು ಬಂಧಿಸಲಾಗಿದ್ದು, ಡಿ.5ರಂದು ಇತರೆ 227 ಮಂದಿಯನ್ನು ಅವರ ಮೂಲ ದೇಶಕ್ಕೆ ಗಡಿಪಾರು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಲೋಕಸಭೆಯಲ್ಲಿ ಮಂಗಳವಾರ ಲಿಖಿತ ರೂಪದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಚಿವ ನಿತ್ಯಾನಂದ ರೈ, ಅಸ್ಸಾಂ ಸರ್ಕಾರದಿಂದ ದೊರಕಿರುವ ಮಾಹಿತಿ ಪ್ರಕಾರ 181 ಮಂದಿಯನ್ನು ವಿದೇಶಿಗರೆಂದು ಘೋಷಿಸಲಾಗಿದ್ದು, ಶಿಕ್ಷೆಗೆ ಒಳಗಾದ 44 ಮಂದಿ ವಿದೇಶಿಗರು ಮೂರು ವರ್ಷದ ಬಂಧನ ಪೂರೈಸಿದ್ದಾರೆ ಎಂದು ತಿಳಿಸಿದರು.
ವಿದೇಶಿಗರ ಕಾಯ್ದೆಯಡಿ ಬಂಧನಕ್ಕೊಳಗಾಗಿ ಮೂರು ವರ್ಷಕ್ಕೂ ಅಧಿಕ ಕಾಲ ಶಿಕ್ಷೆ ಅನುಭವಿಸಿದ್ದ 128 ಮಂದಿಯನ್ನು ಮೇ 10ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದಂತೆ ಬಿಡುಗಡೆ ಮಾಡಲಾಗಿದೆ. 2019ರ ಅಕ್ಟೋಬರ್ನಲ್ಲಿ ಅಸ್ಸಾಂನಲ್ಲಿನ ವಿವಿಧ ನ್ಯಾಯಮಂಡಳಿಗಳು 1.14 ಲಕ್ಷ ಜನರು ಭಾರತೀಯ ಪೌರರೆಂದು ಮತ್ತು 1.29 ಲಕ್ಷ ಮಂದಿ ವಿದೇಶಿಗರೆಂದು ಘೋಷಿಸಿತ್ತು ಎಂದು ಹೇಳಿದರು.

ಯಾವುದೇ ಮಗುವನ್ನು ವಿದೇಶಿಗ ಎಂದು ಘೋಷಿಸಿಲ್ಲ. ಅಕ್ಟೋಬರ್ನಲ್ಲಿ 4,68,905 ಮಂದಿಯನ್ನು ವಿದೇಶಿ ನ್ಯಾಯಮಂಡಳಿಗಳ ಪರಿಶೀಲನೆಗೆ ಒಳಪಡಿಸಲಾಗಿತ್ತು. ಇವರಲ್ಲಿ 1,29,009 ಮಂದಿಯನ್ನು ವಿದೇಶಿಗರೆಂದು ಪರಿಗಣಿಸಲಾಗಿದೆ. ಈ ಅವಧಿಯಲ್ಲಿ 290 ಮಹಿಳೆಯರನ್ನು ವಿದೇಶಿಗರೆಂದು ಗುರುತಿಸಲಾಗಿದೆ. ಕಳೆದ ಆರು ತಿಂಗಳಿನಲ್ಲಿ ಅಸ್ಸಾಂನ ವಿದೇಶಿ ಬಂಧನ ಕೇಂದ್ರಗಳಲ್ಲಿ ಯಾವುದೇ ಆತ್ಮಹತ್ಯೆಯ ಪ್ರಕರಣಗಳು ನಡೆದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications