2ಜಿ ಹಗರಣ: ಎ ರಾಜಾ ವಿರುದ್ಧ ಮತ್ತೆ ಸಿಬಿಐ ಪ್ರಹಾರ
ನವದೆಹಲಿ, ಆಗಸ್ಟ್ 20: ಬಹುಕೋಟಿ 2ಜಿ ತರಂಗಾಂತರ ಹಂಚಿಕೆ ಪ್ರಕರಣದ ಆರೋಪಿ ಕೇಂದ್ರದ ಮಾಜಿ ಸಚಿವ ಎ ರಾಜಾ ವಿರುದ್ಧ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಕೇಷನ್ (ಸಿಬಿಐ) ಮತ್ತೆ ಪ್ರಕರಣ ದಾಖಲಿಸಿಕೊಂಡಿದೆ. ಇದರ ಬೆನ್ನಲ್ಲೆ ರಾಜಾಗೆ ಸೇರಿದ ಕಚೇರಿ, ಮನೆ ಮೇಲೆ ದಾಳಿ ನಡೆಸಲಾಗಿದೆ.
ಸುಮಾರು 200 ಕೋಟಿ ರು ಹವಾಲಾ ಹಣವನ್ನು ಲಂಚ ರೂಪದಲ್ಲಿ ಬಳಸಲಾಗಿದೆ ಎಂದು ಮಾಜಿ ಟೆಲಿಕಾಂ ಸಚಿವ ಎ.ರಾಜಾ ಮತ್ತು ಕನ್ನಿಮೋಳಿ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.[ಬೇಲು ಸಿಕ್ತು, ಟೆಲಿಕಾಂ ರಾಜಾ ಇನ್ನು ಮಹಾರಾಜ!]

1.76 ಲಕ್ಷ ಕೋಟಿ ರೂಪಾಯಿ 2ಜಿ ಸ್ಪೆಕ್ಟ್ರಂ ವಿತರಣೆ ಹಗರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳಿಗೂ ಹೆಚ್ಚಿನ ಅವಧಿಯ ಬಳಿಕ ಬುಧವಾರ ಮಾಜಿ ಟೆಲಿಕಾಂ ಸಚಿವ ಎ. ರಾಜಾ ವಿರುದ್ಧ ಸಿಬಿಐ ಆದಾಯ ಮೀರಿದ ಆಸ್ತಿ ಹೊಂದಿದ ಪ್ರಕರಣವನ್ನು ದಾಖಲಿಸಿದೆ.
ದೆಹಲಿ ಮತ್ತು ಇತರ ನಗರಗಳ 15 ಸ್ಥಳಗಳಲ್ಲಿರುವ ಅವರದೆಂದು ಹೇಳಲಾದ ಅಕ್ರಮ ಆಸ್ತಿಗಳ ಮೇಲೆ ಸಿಬಿಐ ತಂಡಗಳು ಬುಧವಾರ ದಾಳಿ ನಡೆಸಿದ್ದವು. ದೆಹಲಿಯ ಗುಲ್ ಮೋಹರ್ ಪಾರ್ಕ್ ನಿವಾಸದಲ್ಲಿ ಸುಮಾರು 1,7726 ಗ್ರಾಂನಷ್ಟು ಚಿನ್ನ, 4.6 ಲಕ್ಷ ರುನಷ್ಟು ನಗದು, 125ಕ್ಕೂ ಅಧಿಕ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
1996ರಲ್ಲಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ ಎ ರಾಜಾ ಅವರು ಕೇಂದ್ರದಲ್ಲಿ ಗ್ರಾಮೀಣಾಭಿವೃದ್ಧಿ, ಆರೋಗ್ಯ ಇಲಾಖೆ, ಟೆಲಿಕಾಂ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಸರ್ಕಾರಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅದರೆ, 2ಜಿ ಹಗರಣ ಆರೋಪದ ನಂತರ ಅಕ್ರಮ ಆಸ್ತಿ ಗಳಿಕೆ ಪ್ರಕರಣ ರಾಜಾ ಕೊರಳನ್ನು ಸುತ್ತಿಕೊಂಡಿದೆ. ಈಗ ಜಾರಿ ನಿರ್ದೇಶನಾಲಯ ಕೂಡಾ ಹೊಸದಾಗಿ ಮನಿಲಾಂಡ್ರಿಂಗ್ ಕೇಸಿನಲ್ಲಿ ರಾಜಾ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವ ಸಾಧ್ಯತೆಯಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications