ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನ

|
Google Oneindia Kannada News

ನವದೆಹಲಿ,ಫೆಬ್ರವರಿ 13:ಗಣರಾಜ್ಯೋತ್ಸವ ದಿನದಂದು ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಫೆಬ್ರವರಿ 10 ರಂದು ಪ್ರಕರಣ ಸಂಬಂದ ದೆಹಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದರು. ಇದೀಗ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ಸಂಬಂಧ ಈ ವರೆಗೂ ಒಟ್ಟಾರೆ 14 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಕೃಷಿ ಕಾಯ್ದೆಗಳು ಹೂಡಿಕೆಗಳನ್ನು ಸೆಳೆಯಲಿವೆ; ಧರ್ಮೇಂದ್ರ ಪ್ರಧಾನ್ಕೃಷಿ ಕಾಯ್ದೆಗಳು ಹೂಡಿಕೆಗಳನ್ನು ಸೆಳೆಯಲಿವೆ; ಧರ್ಮೇಂದ್ರ ಪ್ರಧಾನ್

ಬಂಧಿತರನ್ನು ಸುಖ್ಮೀತ್ ಸಿಂಗ್ (35), ಗುಣ್ದೀಪ್ ಸಿಂಗ್ (33) ಮತ್ತು ಹರ್ವೀಂದರ್ ಸಿಂಗ್ (32) ಎಂದು ಗುರ್ತಿಸಲಾಗಿದೆ. ಜನವರಿ 26 ರಂದು ನಡೆದ ಟ್ರ್ಯಾಕ್ಟರ್‌ ರ‍್ಯಾಲಿ ವೇಳೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಘಟನೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದರು.

Delhi: 3 More Arrested In Connection With Republic Day Violence

ಜೈಲಿನಲ್ಲಿರುವ 115 ರೈತರ ಬಗ್ಗೆ ಮತ್ತು ನಾಪತ್ತೆಯಾಗಿರುವ ರೈತರ ಬಗ್ಗೆ ಚರ್ಚಿಸಲು ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದರು. ನ್ಯಾಯಕ್ಕಾಗಿ ಹೋರಾಡುತ್ತಿರುವ ರೈತ ಮುಖಂಡರಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಸಿಎಂ ಕೇಜ್ರಿವಾಲ್ ಭರವಸೆ ನೀಡಿದ್ದರು.

ಒಂದು ಕಾನೂನು ತಂಡ ರಚಿಸಿದ್ದು, ಕಾಣೆಯಾದ ಅಥವಾ ಜೈಲಿನಲ್ಲಿರುವ ರೈತರಿಗೆ ಈ ಕಾನೂನು ತಂಡ ಸಹಾಯ ಮಾಡಲಿದೆ. ಈ ಕಾನೂನು ತಂಡ ಇಂದು ಕೇಜ್ರಿವಾಲ್ ಮತ್ತು ಇತರ ಮುಖಂಡರನ್ನು ಭೇಟಿಯಾಗಿ ಜೈಲಿನಲ್ಲಿದ್ದ ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ ಮೋರ್ಚಾ ನಾಯಕರು ಹೇಳಿದ್ದರು.

English summary
Three more people have been arrested in connection with the violence that took place during the farmers' tractor rally in Delhi's Burari area on January 26, police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X