ಗಂಗಾ, ಮತ್ತದರ ಉಪನದಿಗಳ ಸ್ವಚ್ಛತೆಗೆ 30,000 ಕೋಟಿ ರೂ.ಮಂಜೂರು
ನವದೆಹಲಿ ಆಗಸ್ಟ್ 17: ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕೇಂದ್ರ ಸರ್ಕಾರವು ಗಂಗಾ ಮತ್ತು ಅದರ ಉಪನದಿಗಳನ್ನು ಸ್ವಚ್ಛಗೊಳಿಸುವ ಯೋಜನೆಗಳಿಗೆ ಒಟ್ಟು 30,000 ಕೋಟಿ ರೂ. ಹೆಚ್ಚು ಹಣ ಮಂಜೂರು ಮಾಡಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮಾಹಿತಿ ನೀಡಿದರು.
ಸೀಮಿತ ಜಲಸಂಪನ್ಮೂಲಗಳ ಪ್ರಾಮುಖ್ಯತೆಗೆ ಒತ್ತು ನೀಡಿದ್ದರ ಬಗ್ಗೆ ಪ್ರಿಕ್ರಿಯಿಸಿದ ಸಚಿವ ಶೇಖಾವತ್, ಆರ್ಥಿಕ ಅಭಿವೃದ್ಧಿಯ ಆರಂಭವು 'ನಮ್ಮ ನೀರಿನ ಸಂಪನ್ಮೂಲ ಮತ್ತು ಶಕ್ತಿ'ಯಿಂದಲೇ ಪ್ರಾರಂಭವಾಗುತ್ತದೆ. ನೈಸರ್ಗಿಕ ಸಂಪನ್ಮೂಲಗಳು ಹಾಗೂ ಆರ್ಥಿಕ ವೃದ್ಧಿ ಅಗತ್ಯತೆಯ ಗ್ರಾಫ್ ಒಂದೇ ರೀತಿಯಲ್ಲಿರುತ್ತದೆ ಎಂದರು.
ಹೆಚ್ಚುತ್ತಿರುವ ಭಾರತದ ಜನಸಂಖ್ಯೆ, ಭೌಗೋಳಿಕ ವೈಶಾಲ್ಯತೆ, ಸೀಮಿತ ಜಲಸಂಪನ್ಮೂಲಗಳು ಹಾಗೂ ಮುಂದಿರುವ ಪರಿಸರ ಸವಾಲುಗಳನ್ನು ಎದುರಿಸುವ ಇಚ್ಛೆ ಇದೆ. ನೀರು ಹಾಗೂ ಇನ್ನಿತರ ಲಭ್ಯ ನೈಸರ್ಗಿಕ ಸಂಪನ್ಮೂಲಗಳನ್ನು ಸುಸ್ಥಿರವಾಗಿ ಮತ್ತು ಸಮರ್ಥಿನಿಯ ಬಳಕೆಯನ್ನು ಖಚಿತಪಡಿಸಿಳ್ಳಬೇಕಾದ ಅವಶ್ಯಕತೆ ಇದೆ ಎಂದು ಅವರು ಹೇಳಿದರು.

ಗಂಗಾ ಮತ್ತು ಅದರ ಉಪನದಿಗಳನ್ನು ಸ್ವಚ್ಛಗೊಳಿಸಲು ಸಾಕಷ್ಟು ಮೂಲಸೌಕರ್ಯಗಳನ್ನು ರಚಿಸಲಾಗಿದೆ. ಆ ನಿಟ್ಟಿನಲ್ಲಿ ರೂಪಿಸಲಾಗಿರುವ ವಿವಿಧ ಯೋಜನೆಗಳ ಸಾಕಾರಕ್ಕೆ ಬೇಕಾದಷ್ಟು ಹಣವನ್ನು ಮಂಜೂರು ಮಾಡಲಾಗಿದೆ ಎಂದು ಶೇಖಾವತ್ ಪುನರುಚ್ಚರಿಸಿದರು.
ಸರ್ಕಾರದೊಂದಿಗೆ ವಿವಿಧ ಸಂಘಟನೆಗಳ ಸಹಕಾರ
ಕೇಂದ್ರ ಸರ್ಕಾರದ ಜಲ ಅಭಿವೃದ್ಧಿ ಸೇರಿದಂತೆ ನೈಸರ್ಗಿಕ ವೃದ್ಧಿಗೆ ಒತ್ತು ನೀಡಿರುವುದನ್ನು ಸಾಕಷ್ಟ ಸಂಘಟನೆಗಳು ಬೆಂಬಲಿಸುತ್ತಿವೆ. ಜತೆಗೆ ಹಲವು ಸಂಘಟನೆಗಳು ಸರ್ಕಾರಕ್ಕೆ ಸಹಕಾರ ನೀಡಿವೆ. ಈಗಾಗಲೇ ವಿವಿಧ ಸಂಘಟನೆಗಳ ಬೆಂಬಲದ ಮೇರೆಗೆ 'ನಮಾಮಿ ಗಂಗೆ' ಕಾರ್ಯಕ್ರಮ ಒಂದು 'ಜನಾಂದೋಲನ' ವಾಗಿ ಪರಿವರ್ತನೆಗೊಂಡಿದ್ದು, ಆ ಬಗ್ಗೆ ನನ್ನಲ್ಲಿ ತೀವ್ರ ಸಂತಸವಿದೆ ಎಂದರು.

ಗಂಗಾ ನದಿಯ 100ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನದಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹರಿಸುವ ಬಗ್ಗೆ ಈಗಾಗಲೇ ಉತ್ತಮ ರೀತಿಯಲ್ಲಿ, ಸರಿಯಾದ ದಿಕ್ಕಿನತ್ತ ಚರ್ಚೆಗಳು ಸಾಗಿವೆ. ಆದಷ್ಟು ಬೇಗ ಈ ಸಮಸ್ಯೆಗಳು ಪರಿಹಾರಗೊಳ್ಳಲಿವೆ ಎಂದು ಅವರು ಭರವಸೆ ನೀಡಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications