ದೆಹಲಿಯ ಶಹದಾರಾದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ: ನಾಲ್ವರು ಮೃತ್ಯು
ನವದೆಹಲಿ, ಜೂ.30: ''ದೆಹಲಿಯ ಶಹದಾರಾದ ನಿವಾಸವೊಂದರಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹಬ್ಬಿದ್ದು, 45 ವರ್ಷದ ಮಹಿಳೆ, ಆಕೆಯ ಇಬ್ಬರು ಗಂಡು ಮತ್ತು ಓರ್ವ ಮಗಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ,'' ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್ಎಸ್) ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಡಿಎಫ್ಎಸ್ ಪ್ರಕಾರ, ಶಹದಾರಾದ ಫಾರ್ಶ್ ಬಜಾರ್ ಪ್ರದೇಶದಲ್ಲಿ ಮಂಗಳವಾರ ಮಧ್ಯರಾತ್ರಿ ಸಿಲಿಂಡರ್ ಸ್ಫೋಟದ ಬಗ್ಗೆ ಕರೆ ಬಂದಿದ್ದು, ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದರು. ಸ್ಫೋಟದಿಂದಾಗಿ ಛಾವಣಿಯ ಒಂದು ಭಾಗ ಕುಸಿದಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಮನೆಯ ಮುಂಭಾಗದಲ್ಲಿ ಗ್ಯಾಸ್ ಸ್ಟೌವ್ ರಿಪೇರಿ ಅಂಗಡಿ ಇದೆ ಎಂದು ಕೂಡಾ ಅಧಿಕಾರಿಗಳು ಉಲ್ಲೇಖ ಮಾಡಿದ್ದಾರೆ.

"ಎಲ್ಪಿಜಿ ಗ್ಯಾಸ್ ಸಿಲಿಂಡರ್ನಲ್ಲಿ ಸೋರಿಕೆಯಾದ ಕಾರಣ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊಗೆ ಉಸಿರಾಡಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿಯ ದೇಹದಲ್ಲಿ ಸುಟ್ಟ ಗಾಯಗಳು ಉಂಟಾಗಿದೆ. ಕ್ಯಾಟ್ಸ್ ಮೂಲಕ ಹೆಡ್ಜ್ವಾರ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು," ಎಂದು ಡಿಎಫ್ಎಸ್ ನಿರ್ದೇಶಕ ಅತುಲ್ ಗರ್ಗ್ ಹೇಳಿದ್ದಾರೆ.
"ಮುನ್ನೀ ದೇವಿ, ಎಂಬಾಕೆಯ ಇಬ್ಬರು ಗಂಡು ಮಕ್ಕಳಾದ ಓಂ ಪ್ರಕಾಶ್ (22) ಮತ್ತು ನರೇಶ್ (23), ಮತ್ತು ಮಗಳು ಸುನೀತಾ (18) ಉಸಿರುಗಟ್ಟಿ ಸಾವನ್ನಪ್ಪಿದ್ದರೆ, ಮತ್ತೊಬ್ಬ ಮಗ ಲಾಲ್ ಚಂದ್ (29) ಮೈಯಲ್ಲಿ ಶೇ 30 ರಷ್ಟು ಸುಟ್ಟಗಾಯಗಳಾಗಿವೆ," ಎಂದು ಪೊಲೀಸರು ತಿಳಿಸಿದ್ದಾರೆ.
"ಎಲ್ಲಾ ಐದು ಸದಸ್ಯರನ್ನು ಮನೆಯ ಕಿಟಕಿಗಳು ಮತ್ತು ಬಾಗಿಲುಗಳನ್ನು ಒಡೆಯುವ ಮೂಲಕ ಪೊಲೀಸರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ನಂತರ ಐವರನ್ನೂ ಕ್ಯಾಟ್ಸ್ ಆಂಬ್ಯುಲೆನ್ಸ್ ಮೂಲಕ ಡಾ. ಹೆಡ್ಜ್ವಾರ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಈ ಪೈಕಿ ನಾಲ್ವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ," ಉಪ ಪೊಲೀಸ್ ಆಯುಕ್ತ ಆರ್ ಸತ್ಯಸುಂದರಾಮ್ ಮಾಹಿತಿ ನೀಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications