ಮಹಿಳಾ ಕಲ್ಯಾಣದತ್ತ ಮೋದಿ ಸರ್ಕಾರದ ದಿಟ್ಟ ಹೆಜ್ಜೆ
ನವದೆಹಲಿ, ಮೇ 29: ಕೇಂದ್ರದಲ್ಲಿ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರುವ ಮೂಲಕ ಬಿಜೆಪಿ ಸರ್ಕಾರ ದಾಖಲೆ ಬರೆದು ನಾಲ್ಕು ವರ್ಷಗಳು ಸಂದಿವೆ. ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರಕ್ಕೆ ಇದು ನಾಲ್ಕು ವರ್ಷಗಳ ಆಡಳಿತದ ಸಿಂಹಾವಲೋಕನದ ಕಾಲ.
ನಾಲ್ಕು ವರ್ಷಗಳಲ್ಲಿ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಸಾಧಿಸಲಾದ ಮಹತ್ವದ ಮೈಲಿಗಲ್ಲುಗಳು ಗಮನೀಯ. ಮನೇಕಾ ಗಾಂಧಿ ಅವರು ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ಹಲವು ಯೋಜನೆಗಳಿಗೆ ನಾಂದಿ ಹಾಡಿದರು.
ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆಯಿಂದ ಹಿಡಿದು, ಆರು ತಿಂಗಳುಗಳ ಕಾಲ ತಾಯ್ತನ ರಜೆಯನ್ನು ವಿಸ್ತರಿಸಿದ್ದು ಮಹಿಳಾ ಕಲ್ಯಾಣದಲ್ಲಿ ಮಹತ್ವದ ಹೆಜ್ಜೆ.

ಬೇಟಿ ಬಚಾವೋ, ಬೇಟಿ ಪಢಾವೋ
2013 ರ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆಯನ್ನು ಜಾರಿಗೊಳಿಸಿದರು. ಆರಂಭವಾದ 30 ತಿಂಗಳುಗಳಲ್ಲಿ 161 ಜಿಲ್ಲೆಗಳಲ್ಲಿ 104 ಜಿಲ್ಲೆಗಳು ಮಕ್ಕಳ ಲಿಂಗಾನುಪಾತದಲ್ಲಿ ಸಾಕಷ್ಟು ಸುಧಾರಣೆ ಕಂಡುಬಂತು. ನಂತರ ಈ ಯೋಜನೆಯನ್ನು ದೇಶದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಯಿತು.
ಬೇಟಿ ಬಚಾವೋ, ಬೇಟಿ ಪಢಾವೋ ಅಭಿಯಾನದ ಭಾಗವಾಗಿ ಸುಕನ್ಯಾ ಸಮೃದ್ಧಿ ಯೋಜನೆಯನ್ನೂ ಜಾರಿಗೆ ತರಲಾಯಿತು. ಹೆಣ್ಣು ಶಿಶು ಹುಟ್ಟುತ್ತಿದ್ದಂತೆಯೇ ಆಕೆಯ ಹೆಸರಿನಲ್ಲಿ ನಿರ್ದಿಷ್ಟ ಠೇವಣಿ ಇಟ್ಟು, ಅದನ್ನು ಆಕೆಗೆ 18 ವರ್ಷವಾಗುತ್ತಿದ್ದಂತೆಯೇ ಹಿಂಪಡೆಯುವ ಯೋಜನೆ ಇದು. ಈ ಎರಡೂ ಯೋಜನೆಗಳೂ ಹೆಣ್ಣು ಭ್ರೂಣ ಹತ್ಯೆ ತಡೆ ಮತ್ತು ಅಸಮಾನತೆಯನ್ನು ಹೋಗಲಾಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನಾ
ಮೇ 2016 ರಲ್ಲಿ ಪರಿಚಯಿಸಲಾದ ಈ ಯೋಜನೆಯನ್ವಯ ಇದುವರೆಗೂ 2.2 ಕೋಟಿ ಎಲ್ ಪಿ ಜಿ ಗ್ಯಾಸ್ ಸಂಪರ್ಕವನ್ನು ಬಡವರಿಗೆ ನೀಡಲಾಗಿದೆ. ಮಹಿಳೆಯರ ಆರೋಗ್ಯ ರಕ್ಷಣೆ ಮತ್ತು ಅಡುಗೆಗಾಗಿ ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡುವ ಸಲುವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
6 ತಿಂಗಳು ತಾಯ್ತನ ರಜೆ
ತಾಯ್ತನದ ರಜೆಯನ್ನು 3 ರಿಂದ 6 ತಿಂಗಳವರೆಗೆ ಹೆಚ್ಚಿಸಿದ್ದು ಮೋದಿ ಸರ್ಕಾರದ ಇನ್ನೊಂದು ಸಾಧನೆ. 2017 ರಂದು ಈ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಯ್ತು. ಇದರಿಂದ ಮಹಿಳೆಯರ ಆರೋಗ್ಯವೂ ಸುಧಾರಿಸುತ್ತದೆ ಎಂಬ ನಂಬಿಕೆ ಸರ್ಕಾರದ್ದು.
ಇನ್ನಿತರ ಯೋಜನೆಗಳು
ಈ ಎಲ್ಲ ಯೋಜನೆಗಳೊಟ್ಟಿಗೆ ಮಹಿಳೆಯರಿಗೆ ಆಪ್ತಸಲಹೆ ನೀಡುವ ಸಖಿ ಯೋಜನೆ, ಮಹಿಳೆಯರ ರಕ್ಷಣೆಗಾಗಿ ಅವರ ಸ್ಮಾರ್ಟ್ ಫೋನ್ ಗಳಲ್ಲಿ ಪ್ಯಾನಿಕ್ ಬಟನ್ ಸೌಲಭ್ಯ, ಮಹಿಳಾ ಸಹಾಯವಾಣಿ(181), ವಿಧವೆಯರಿಗೆ ಆಶ್ರಯ ವ್ಯವಸ್ಥೆ, ಉದ್ಯೋಗಸ್ಥ ಮಹಿಳೆಯರಿಗೆ ಹಾಸ್ಟೆಲ್ ಸೌಲಭ್ಯ, ಉದ್ಯೋಗ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆ ಸೇರಿದಂತೆ ಹತ್ತು ಹಲವು ನಿರ್ಧಾರಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications