ಗುಂಪು ಹಲ್ಲೆ: ಪ್ರಧಾನಿ ನರೇಂದ್ರ ಮೋದಿಗೆ 49 ಸೆಲೆಬ್ರಿಟಿಗಳ ಪತ್ರ
ನವದೆಹಲಿ, ಜುಲೈ 24: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ 49 ಖ್ಯಾತ ನಿರ್ದೇಶಕರು ಮತ್ತು ನಟರು, ದೇಶದಲ್ಲಿ ಹೆಚ್ಚುತ್ತಿರುವ ಧಾರ್ಮಿಕ ದ್ವೇಷ ಮತ್ತು ಗುಂಪು ಹಲ್ಲೆ ಪ್ರಕರಣಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.
ನಿರ್ದೇಶಕರಾದ ಅಡೂರು ಗೋಪಾಲಕೃಷ್ಣನ್, ಮಣಿರತ್ನಂ, ಅನುರಾಗ್ ಕಶ್ಯಪ್, ಅಪರ್ಣ ಸೇನ್, ಶ್ಯಾಮ್ ಬೆನಗಲ್, ಅನುಪಮ್ ರಾಯ್, ಕೊಂಕಣಾ ಸೇನ್ ಶರ್ಮಾ, ಸೌಮಿತ್ರಾ ಚಟರ್ಜಿ, ರೇವತಿ, ಶುಭಾ ಮುದ್ಗಲ್, ಬಿನಾಯಕ್ ಸೇನ್, ರಿದ್ಧಿ ಸೇನ್, ಇತಿಹಾಸ ತಜ್ಞ ರಾಮಚಂದ್ರ ಗುಹಾ, ಆಶಿಶ್ ನಂದಿ ಸೇರಿದಂತೆ 49 ಸೆಲೆಬ್ರಿಟಿಗಳ ಸಹಿ ಈ ಪತ್ರದಲ್ಲಿದೆ.
'ದುರದೃಷ್ಟವಶಾತ್ ಜೈ ಶ್ರೀರಾಮ್ ಎನ್ನುವುದು ಇಂದು ಪ್ರಚೋದನಾತ್ಮಕ ಯುದ್ಧದ ಕೂಗು ಆಗಿಬಿಟ್ಟಿದೆ. ಇದು ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳಿಗೆ ಎಡೆಮಾಡಿಕೊಡುತ್ತಿದೆ. ಅದರ ಹೆಸರಿನಲ್ಲಿ ಅನೇಕ ಗುಂಪು ಹಲ್ಲೆಗಳು ನಡೆದಿವೆ' ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ನಡೆದಿರುವ ಕೆಲವು ಗುಂಪು ಹಲ್ಲೆ ಪ್ರಕರಣಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮುಸ್ಲಿಂ, ದಲಿತ ಮತ್ತು ಇತರೆ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಗುಂಪು ಹಲ್ಲೆಗಳನ್ನು ಕೂಡಲೇ ನಿಲ್ಲಿಸಬೇಕು. ರಾಷ್ಟ್ರೀಯ ಅಪರಾಧ ದಾಖಲಾತಿ ಘಟಕದ ಪ್ರಕಾರ 2016ರಲ್ಲಿ ದಲಿತರ ಮೇಲೆ 840 ದೌರ್ಜನ್ಯ ಪ್ರಕರಣಗಳು ನಡೆದಿವೆ. ಆದರೆ, ಇವುಗಳಲ್ಲಿ ಶಿಕ್ಷೆಗೆ ಒಳಗಾದವರ ಪ್ರಮಾಣ ತೀರಾ ಕಡಿಮೆ ಎಂದು ಹೇಳಿದ್ದಾರೆ.
ಗುಂಪು ಹಲ್ಲೆ ಕುರಿತು ನೀವು ಸಂಸತ್ನಲ್ಲಿ ಖಂಡನೆ ವ್ಯಕ್ತಪಡಿಸಿದ್ದೀರಿ. ಆದರೆ, ಇದು ಸಾಲುವುದಿಲ್ಲ. ಈ ರೀತಿ ಕೃತ್ಯ ಎಸಗಿದವರ ಮೇಲೆ ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ? ದುರದೃಷ್ಟವಶಾತ್ ಒಂದು ಜೈ ಶ್ರೀರಾಮ್ ಎನ್ನುವುದು ಯುದ್ಧದ ಕೂಗು ಆಗಿಬಿಟ್ಟಿದೆ. ಇದಕ್ಕೆ ಕಾನೂನಿನ ಹಂಗು ಇಲ್ಲದಂತಾಗಿದೆ. ಈ ಹೆಸರಿನಿಂದಲೇ ಅನೇಕ ಗುಂಪು ಹಲ್ಲೆಗಳು ನಡೆದಿವೆ ಎಂದಿದ್ದಾರೆ.
ಭಿನ್ನಾಭಿಪ್ರಾಯ ಇಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆ ಇರಲಾರದು. ಆದರೆ, ಸರ್ಕಾರದ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಜನರಿಗೆ ದೇಶದ್ರೋಹಿ ಅಥವಾ ಅರ್ಬನ್ ನಕ್ಸಲ್ ಎಂಬ ಪಟ್ಟಕಟ್ಟಬಾರದು ಎಂದು ಮನವಿ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications