ಗೋದಾಮು ಕುಸಿತದಿಂದ 5 ಜನರು ಸಾವು, ಇಬ್ಬರಿಗೆ ಗಂಭೀರ ಗಾಯ
ನವದೆಹಲಿ, ಜು.16: ದೆಹಲಿಯ ಅಲಿಪುರದಲ್ಲಿ ಗೋದಾಮು ಗೋಡೆ ಕುಸಿದು 5 ಜನರು ಸಾವನ್ನಪ್ಪಿದ್ದಾರೆ. ಹಾಗೂ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗೌಡನ್ ಕಟ್ಟಡವನ್ನ ಸರಿಯಾಗಿ ದುರಸ್ತಿ ಮಾಡದ ಕಾರಣ ದುರ್ಘಟನೆ ಸಂಭವಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಎನ್ನಲಾದ ಗುತ್ತಿಗೆದಾರ ಸಿಕಂದರ್ ದಾಸ್ ಮತ್ತು ಜಾಗದ ಮಾಲೀಕ ಸತೀಶ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಟ್ಟಡ ದುರಸ್ತಿ ಮಾಡುವುದರಲ್ಲಿ ನಿರ್ಲಕ್ಷ ತೋರಿರುವುದರಿಂದ ಇಬ್ಬರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 288, 304, 337, 338 ಮತ್ತು 34ರ ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಇನ್ನೋರ್ವ ಆರೋಪಿ ಶಕ್ತಿ ಸಿಂಗ್ ಎಂಬುವನು ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ.
ಈ ದುರ್ಘಟನೆಯಲ್ಲಿ ಸಂಭವಿಸಿದ ಪ್ರಾಣಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೂ 'ದೆಹಲಿಯ ಅಲಿಪುರದಲ್ಲಿ ಸಂಭವಿಸಿದ ದುರ್ಘಟನೆಯಿಂದ ನನಗೆ ದುಃಖವಾಗಿದೆ. ತಮ್ಮ ಪ್ರೀತಿ ಪಾತ್ರರರನ್ನು ಕಳೆದುಕೊಂಡವರ ನೋವು ಅರ್ಥವಾಗುತ್ತದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಮೋದಿ ಕಾರ್ಯಲಯ ಟ್ವೀಟ್ ಮಾಡಿದ್ದಾರೆ.
अलीपुर में दुखद हादसा हुआ। ज़िला प्रशासन राहत और बचाव के काम में जुटा हुआ है। मैं स्वयं राहत कार्य पर नज़र रखे हुए हूँ।
— Arvind Kejriwal (@ArvindKejriwal) July 15, 2022
दिवंगत आत्माओं की शांति के लिए ईश्वर से प्रार्थना करता हूँ। https://t.co/ShLAJSOneX
ಇನ್ನು ಈ ಬಗ್ಗೆ ಟ್ವೀಟ್ ಮಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಿಲ್ಲಾಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ನಾನು ವೈಯಕ್ತಿಕವಾಗಿ ಪರಿಹಾರ ಒದಗಿಸುವ ಕಾರ್ಯವನ್ನು ಮಾಡುತ್ತೇನೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೆನೆ ಎನ್ನುವ ಮೂಲಕ ದುಃಖ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸಂಪೂರ್ಣ ರಕ್ಷಣಾ ಕಾರ್ಯಚರಣೆಯ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ನಿರ್ಮಾಣದ ಹಂತದಲ್ಲಿದ್ದ ಕಟ್ಟಡದ ಗೋಡೆ ಕುಸಿದ ಕಾರಣ ಅಲ್ಲಿ ಇನ್ನು 6-12 ಜನರು ಸಿಲುಕಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ ಎಂದು ಸರ್ಕಾರ ಮೂಲಗಳು ತಿಳಿಸಿವೆ. ಅಲ್ಲದೇ ಕಟ್ಟಡದ ಕೆಳಗೆ ಸಿಲುಕಿರುವವರನ್ನು ರಕ್ಷಣೆ ಮಾಡಲು ಎನ್ಡಿಆರ್ಎಫ್ ತಂಡ ಕಾರ್ಯನಿರ್ವಹಿಸುತ್ತಿದೆ. ಹಾಗೂ ಘಟನಾ ಸ್ಥಳಕ್ಕೆ ತಕ್ಷಣ ಆಗಮಿಸಿದ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications