ಕಾರ್ತಿ ಬೇಲ್ ಕ್ಯಾನ್ಸಲ್ : ನ್ಯಾಯಾಧೀಶರು ಹೇಳಿದ್ದೇನು?
Recommended Video

ನವದೆಹಲಿ, ಮಾರ್ಚ್ 02 : ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ವಿರುದ್ಧ, ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿಕೆ ಮಣ್ಣೆರಚಿ, ಹಣ ದುರುಪಯೋಗ ಮಾಡಿದ ಆರೋಪದಲ್ಲಿ ಮೇಲ್ನೋಟಕ್ಕೆ ಸತ್ಯಾಂಶವಿದೆ ಎಂದು ಕಂಡುಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಸಿಬಿಐನ ಕಸ್ಟಡಿಗೆ ನೀಡಲಾಗಿದೆ.
ಪೀಟರ್ ಮತ್ತು ಇಂದ್ರಾಣಿ ಮುಖರ್ಜಿಯಾ ಅವರ ಐಎನ್ಎಕ್ಸ್ ಮೀಡಿಯಾ ಕಂಪನಿಗೆ ಮಾರಿಷನ್ ಕಂಪನಿಯಿಂದ ಹರಿದುಬಂದ ವಿದೇಶಿ ಹಣಕ್ಕೆ ತೆತ್ತಬೇಕಾದ ತೆರಿಗೆಯನ್ನು ವಂಚಿಸಲು, ಅವರಿಗೆ ಸಹಾಯ ಮಾಡಿದ್ದಕ್ಕಾಗಿ ಕಾರ್ತಿ ಚಿದಂಬರಂ ಅವರಿಗೆ 10 ಲಕ್ಷ ರುಪಾಯಿ ಕಮಿಷನ್ ನೀಡಲಾಗಿದೆ ಎಂಬ ಆರೋಪ ಹೊರಿಸಲಾಗಿದೆ.
ಅವರನ್ನು ಸಿನಿಮೀಯ ರೀತಿಯಲ್ಲಿ ಚೆನ್ನೈ ಏರ್ಪೋರ್ಟಿನಲ್ಲಿ ಬಂಧಿಸಿದ ನಂತರ, ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಆವರಣದಲ್ಲಿ ಬುಧವಾರ ಭಾರೀ ನಾಟಕವೇ ನಡೆಯಿತು. ಕಾರ್ತಿಯ ಹುಚ್ಚಾಟಗಳನ್ನು ನೋಡಿದ ನ್ಯಾಯಾಧೀಶರು, ಕಡೆಗೆ ಅವರನ್ನು ಮಾರ್ಚ್ 5ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ.
ಈ ಸಂದರ್ಭದಲ್ಲಿ, 46 ವರ್ಷದ ಕಾರ್ತಿಯ ಜಾಮೀನನ್ನು ನಿರಾಕರಿಸಿ, ವಿಶೇಷ ಸಿಬಿಐ ನ್ಯಾಯಾಧೀಶರಾದ ಸುನೀಲ್ ರಾಣಾ ಅವರು ಗಮನಿಸಿರುವ ಅಂಶಗಳು, ಜಾಮೀನು ನಿರಾಕರಿಸಲು ನೀಡಿರುವ ಕಾರಣಗಳು ಗಮನಾರ್ಹವಾಗಿವೆ.

ಆರೋಪ ಮೇಲ್ನೋಟಕ್ಕೆ ಸಾಬೀತು
ಕಾರ್ತಿ ಚಿದಂಬರ್ ಅವರ ಮೇಲಿನ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವ ಕಾರಣ, ತನಿಖೆ ಸಂಪೂರ್ಣವಾಗಿ ಮುಕ್ತಾಯವಾಗುವವರೆಗೆ ಅವರು ತನಿಖಾ ಸಂಸ್ಥೆಯ ವಶದಲ್ಲಿರಬೇಕಾಗಿರುವುದು ಅತೀ ಅವಶ್ಯ ಎಂದು ಸುನೀಲ್ ರಾಣಾ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಷಡ್ಯಂತ್ರ ಬಯಲಿಗೆಳೆಯಲು ವಶ ಅನಿವಾರ್ಯ
ಕಾರ್ತಿ ಅವರ ವಿರುದ್ಧ ಸಿಬಿಐ ಈಗಾಗಲೆ ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದೆ, ತನ್ನ ಬಳಿ ಸಾಕ್ಷ್ಯವಿದೆ ಎಂದು ಹೇಳಿದೆ. ಕಾರ್ತಿ ಮತ್ತು ಸಹ ಆರೋಪಿ ಸೇರಿ ಮಾಡಿದ್ದಾರೆನ್ನಲಾಗಿರುವ ಷಡ್ಯಂತ್ರವನ್ನು ಬಯಲಿಗೆಳೆಯಲು, ದಾಖಲೆಗಳನ್ನು ಪುಷ್ಟೀಕರಿಸಲು ಅವರು ಸಿಬಿಐ ವಶದಲ್ಲಿರುವುದು ಅನಿವಾರ್ಯವಾಗಿದೆ.

ಪ್ರಕರಣ ಗಂಭೀರ ಮತ್ತು ಕ್ಲಿಷ್ಟಕರ
ಈ ಪ್ರಕರಣ ಗಂಭೀರ ಮತ್ತು ಕ್ಲಿಷ್ಟಕರವಾಗಿದ್ದು, ಕೆಲವು ನಿರ್ದಿಷ್ಟ ಉತ್ತರಗಳನ್ನು ಪ್ರಮುಖ ಆರೋಪಿ ಕಾರ್ತಿ ಚಿದಂಬರಂ ಮತ್ತು ಇತರ ಸಹ ಆರೋಪಿಗಳಿಂದ ಪಡೆಯುವ ಅಗತ್ಯವಿರುವುದರಿಂದ ಕಾರ್ತಿ ಅವರ ಉಪಸ್ಥಿತಿ ಬೇಕೇಬೇಕಾಗಿದೆ.

ಹೆಚ್ಚಿನ ಮಾಹಿತಿ ತೆಗೆಯಲು ಪೊಲೀಸ್ ಕಸ್ಟಡಿ
ಆರೋಪಿಯಿಂದ ಇನ್ನೂ ಹೆಚ್ಚಿನ ಮಾಹಿತಿ ಪಡೆಯಬೇಕಾಗಿರುವುದರಿಂದ ಸಿಬಿಐ ವಶಕ್ಕೆ ನೀಡಬೇಕು ಎಂಬ ಸಾಮಾನ್ಯ ಕೋರಿಕೆಯನ್ನು ಮನ್ನಿಸಲಾಗದು. ಆದರೆ, ರಿಮಾಂಡ್ ಗೆ ನೀಡಿದಾಗ ಹೆಚ್ಚಿನ ಮಾಹಿತಿಯನ್ನು ತೆಗೆಯಲು ಸಾಧ್ಯವಾಗದಿದ್ದರೆ, ಪೊಲೀಸ್ ಕಸ್ಟಡಿಗೆ ನೀಡುವುದು ಅನಿವಾರ್ಯವಾಗುತ್ತದೆ.

ಮಾರ್ಚ್ 6ರಂದು ಸಿಬಿಐ ಕೋರ್ಟಿಗೆ ಹಾಜರ್
ಕಾರ್ತಿ ಅವರನ್ನು ಮಾರ್ಚ್ 6ರಂದು ಸಿಬಿಐ ನ್ಯಾಯಾಲಯದ ಮುಂದೆ ಮತ್ತೆ ಹಾಜರುಪಡಿಸಬೇಕು. ಅವರು ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪ್ರತಿ 24 ಗಂಟೆಗಳಿಗೊಮ್ಮೆ ಅವರ ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications