ನಿಷೇಧದ ನಡುವೆ ಮಾರಾಟ: ದೆಹಲಿಯಲ್ಲಿ 6,000 ಕೆಜಿ ಪಟಾಕಿ ಜಪ್ತಿ, 55 ಮಂದಿ ಬಂಧನ
ನವದೆಹಲಿ, ನವೆಂಬರ್ 04: ರಾಷ್ಟ್ರೀಯ ರಾಜಧಾನಿಯಲ್ಲಿ ಪಟಾಕಿಯನ್ನು ನಿಷೇಧ ಮಾಡಲಾಗಿದೆ. ಈ ನಡುವೆ ಪಟಾಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ 6,000 ಕಿಲೋ ಗ್ರಾಮ್ ತೂಕದ ಪಟಾಕಿಯನ್ನು ವಶಕ್ಕೆ ಪಡೆಯಲಾಗಿದೆ. ಹಾಗೆಯೇ ಈ ಸಂಬಂಧ 55 ಮಂದಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದೆಹಲಿ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಪಟಾಕಿ ನಿಷೇಧ ಮಾಡಿದ್ದರೂ ಕೂಡಾ ಪಟಾಕಿಯನ್ನು ಮಾರಾಟ ಮಾಡಿದ, ಪಟಾಕಿಯನ್ನು ಸಂಗ್ರಹ ಮಾಡಿ ಇರಿಸಿದ ಹಾಗೂ ಪಟಾಕಿಯನ್ನು ಸಿಡಿಸಿದ ಕಾರಣಕ್ಕೆ 55 ಮಂದಿಯ ವಿರುದ್ಧ 56 ಪ್ರಕರಣಗಳು ದಾಖಲು ಆಗಿದೆ.
56 ಪ್ರಕರಣಗಳಲ್ಲಿ ಒಟ್ಟು 6,050 ಕೆಜಿ ಪಟಾಕಿಯನ್ನು ಜಪ್ತಿ ಮಾಡಲಾಗಿದೆ. ಈ 6,050 ಕೆಜಿ ಪಟಾಕಿಗಳ ಪೈಕಿ 2,400 ಕೆಜಿ ಪಟಾಕಿಯನ್ನು ಉತ್ತರ ಜಿಲ್ಲೆಯ ದೆಹಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾಗಿದೆ. ರೋಹಿಣಿ ಜಿಲ್ಲೆಯಲ್ಲೇ 1,163 ಕೆಜಿ ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಜಿಲ್ಲೆಯಲ್ಲಿ 298 ಕೆಜಿ ಪಟಾಕಿಯನ್ನು ವಶಕ್ಕೆ ಪಡೆಯಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧ ಮಾಡಲಾದ ಹಿನ್ನೆಲೆಯಲ್ಲಿ, ಪಟಾಕಿ ತಯಾರಿಕ ಸಂಸ್ಥೆಗಳು, ಪಟಾಕಿ ಸಂಗ್ರಹ ಘಟಕಗಳ್ನು ಮುಚ್ಚಲಾಗಿದೆ. ಆದರೂ ನೆರೆಯ ರಾಜ್ಯಗಳಾದ ಉತ್ತರ ಪ್ರದೇಶ ಹಾಗೂ ಹರಿಯಾಣದಿಂದ ಜನರು ಕಡಿಮೆ ಬೆಲೆಗೆ ಪಟಾಕಿಯನ್ನು ಭಾರೀ ಪ್ರಮಾಣದಲ್ಲಿ ಖರೀದಿ ಮಾಡಿ ವ್ಯಾಪಾರ ಮಾಡುವ ದಂಧೆಯನ್ನು ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ (ಡಿಪಿಸಿಸಿ) ಮುಂದಿನ ವರ್ಷ ಜನವರಿ 1 ರವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಿ ಸೆಪ್ಟೆಂಬರ್ 28 ರಂದು ಆದೇಶ ನೀಡಿದೆ. ದೆಹಲಿ ಸರ್ಕಾರವು ಕೂಡಾ ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧ ಮಾಡಿದೆ. ಆದರೆ ಈಗ ಅಕ್ರಮವಾಗಿ ಪಟಾಕಿ ಮಾರಾಟವು ನಡೆಯುತ್ತಿದ್ದು, ಹಲವಾರು ಕಡೆಗಳಲ್ಲಿ ಪೊಲೀಸರು ಪಟಾಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹೊರ ರಾಜ್ಯಗಳಿಂದ ಪಟಾಕಿ ಖರೀದಿ ಮಾಡಿ ಅಕ್ರಮ ಮಾರಾಟ
ಚಾಂದಿನಿ ಚೌಕ್, ಪಹರ್ಗಂಜ್, ಕರೋಲ್ ಬಾಗ್ ಮತ್ತು ಇತರ ಮಾರುಕಟ್ಟೆ ಪ್ರದೇಶಗಳಲ್ಲಿ ಒಟ್ಟು 286 ಕೆಜಿ ಪಟಾಕಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಾಹದಾರ ಜಿಲ್ಲಾ ಪೊಲೀಸರು ನಾಲ್ವರನ್ನು ಬಂಧಿಸಿ 294 ಕೆಜಿ ಅಕ್ರಮ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ಆನಂದ್ ವಿಹಾರ್ ಪ್ರದೇಶದಲ್ಲಿ ಅಕ್ರಮ ಪಟಾಕಿ ಪೂರೈಕೆ ಬಗ್ಗೆ ಮಂಗಳವಾರ ಮಾಹಿತಿ ಲಭಿಸಿದೆ. ಆ ಬಳಿಕ ಕರ್ಕರ್ದೂಮ ಸಮೀಪದ ಆರ್ಯನಗರ ಗ್ರಾಮದ ಅಂಗಡಿಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 235 ಕೆಜಿ ಅಕ್ರಮ ಪಟಾಕಿಯನ್ನು ಜಪ್ತಿ ಮಾಡಲಾಗಿದ್ದು, ಈ ಅಂಗಡಿಯ ಮಾಲೀಕ ವಿನೋದ್ ಕುಮಾರ್ (53) ರನ್ನು ಬಂಧನ ಮಾಡಲಾಗಿದೆ. "ಆತ ಹರಿಯಾಣದ ಗುರುಗ್ರಾಮದಿಂದ ಪಟಾಕಿಯನ್ನು ಖರೀದಿ ಮಾಡಿದ್ದಾನೆ," ಎಂದು ಪೊಲೀಸರು ತಿಳಿಸಿದ್ದಾರೆ.
ಆ ನಂತರ ಶಹದಾರ ಜಿಲ್ಲೆಯ ಇತರ ತಂಡಗಳು 59 ಕೆಜಿ ಅಕ್ರಮ ಪಟಾಕಿಗಳನ್ನು ವಶಪಡಿಸಿಕೊಂಡಿದೆ. ಇಲ್ಲಿ ಇಬ್ಬರು ವಶಕ್ಕೆ ಪಡೆಯಲಾಗಿದ್ದು, ಬಂಧಿತ ಆರೋಪಿಗಳನ್ನು ರಾಮ್ ಅವತಾರ್, ಮಾಸುಮ್ ಅಲಿ ಮತ್ತು ಹರೀಶ್ ಸಿಂಘಾಲ್ ಎಂದು ಗುರುತಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಪೊಲೀಸರು 38 ವರ್ಷದ ಮನೀಶ್ ಗುಪ್ತಾ ಎಂಬಾತನ ಬಂಧನ ಮಾಡಿದ್ದಾರೆ. ಮಂಗಳವಾರ, ಕಲ್ಯಾಣಪುರಿ ಪ್ರದೇಶದಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ ಕೇಂದ್ರ ಮಾರುಕಟ್ಟೆಯಲ್ಲಿ ವ್ಯಕ್ತಿಯೋರ್ವ ಪಟಾಕಿಯನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಅಂಗಡಿಯಿಂದ ಹನ್ನೆರಡು ಗೋಣಿಚೀಲಗಳು ಮತ್ತು ಎರಡು ಪೆಟ್ಟಿಗೆಗಳಲ್ಲಿ ಪಟಾಕಿಯನ್ನು ಜಪ್ತಿ ಮಾಡಲಾಗಿದೆ. ಒಟ್ಟು 236 ಕೆಜಿ ಪಟಾಕಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications