ವೈದ್ಯರು, ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದರೆ 7 ವರ್ಷ ಜೈಲು
ನವದೆಹಲಿ, ಏಪ್ರಿಲ್ 22: ವಿಶ್ವದಾದ್ಯಂತ ಕೊರೊನಾ ಮಹಾಮಾರಿ ಹಬ್ಬಿದೆ. ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದರೆ 7 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ತಿಳಿಸಿದ್ದಾರೆ.
ದೇಶಾದ್ಯಂತ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದರ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸುವ ಸಂಬಂಧ ಕೇಂದ್ರ ಸರ್ಕಾರ ಬುಧವಾರ ಸುಗ್ರೀವಾಜ್ಞೆ ಹೊರಡಿಸಿದೆ.
ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳ ಅಂಕಿತ ದೊರೆತ ಕೂಡಲೇ ಇದು ಜಾರಿಗೆ ಬರಲಿದೆ. 1987ರ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಮೊದಲು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಕೇವಲ 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿತ್ತು. ಈಗ ಕೇಂದ್ರ ಸರ್ಕಾರ ತಪ್ಪಿತಸ್ಥರಿಗೆ ಶಿಕ್ಷೆಯ ಪ್ರಮಾಣವನ್ನು 6 ತಿಂಗಳಿಂದ 7 ವರ್ಷಕ್ಕೆ ವಿಸ್ತರಿಸಿ ಆದೇಶಿಸಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾವೇಡಕರ್ ಅವರು, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಸಾಂಕ್ರಾಮಿಕ ರೋಗದಿಂದ ದೇಶವನ್ನು ರಕ್ಷಿಸಲು ಶ್ರಮಿಸುತ್ತಿದ್ದಾರೆ. ಅವರ ಮೇಲೆ ಹಲ್ಲೆ ನಡೆಸುವುದು ಮತ್ತು ಕಿರುಕುಳ ನೀಡುವುದನ್ನು ಸಹಿಸಲು ಸಾಧ್ಯವಿಲ್ಲ.
ಈ ಸಂಬಂಧ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದ್ದು, ಇದರಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸುವವರಿಗೆ 6 ತಿಂಗಳಿಂದ 7 ವರ್ಷ ಜೈಲು ಶಿಕ್ಷೆ ನೀಡಲು ಅವಕಾಶವಿದೆ ಎಂದು ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications