ಒಂದು ಟೀಗೆ 70 ರೂ.?, ರೈಲ್ವೆ ಇಲಾಖೆ ಬೆಲೆಗೆ ಹೌಹಾರಿದ ಪ್ರಯಾಣಿಕ
ನವದಹೆಲಿ, ಜು.1: ವಿಮಾನದಲ್ಲಿ ಆಹಾರ ದುಬಾರಿ ಎಂಬುದು ಗೊತ್ತಿರುವ ವಿಚಾರ. ಆದರೆ ರೈಲಿನಲ್ಲೂ ಆಹಾರ ಪದಾರ್ಥ ಕೇವಲ ಒಂದು ಕಪ್ ಟೀ ಕೂಡ ದುಬಾರಿಯೇ ಎಂಬುದು ಜನರನ್ನು ಹುಬ್ಬೇರಿಸುವಂತೆ ಮಾಡಿದೆ. ರೈಲ್ವೇ ಇಲಾಖೆ ತಾನು ಕೊಡುವ ಟೀಗೆ ಭಾರೀ ಸೇವಾ ಶುಲ್ಕ ವಿಧಿಸುವ ಮೂಲಕ ಪ್ರಯಾಣಿಕರ ಕೆಂಗಣ್ಣಿಗೆ ಈಗ ಗುರಿಯಾಗಿದೆ.
ರೈಲಿನಲ್ಲಿ ಒಂದು ಕಪ್ ಚಹಾಕ್ಕೆ 70 ರೂ. ಶುಲ್ಕ ವಿಧಿಸಲಾಗಿದೆ ಎಂದು ಪ್ರಯಾಣಿಕರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಫೋಟೋ ಇದೀಗ ವೈರಲ್ ಆಗಿದೆ. ಒಂದು ಚಹಾಕ್ಕೆ 20 ರೂ. ಇತ್ತು, ಆದರೆ ಬಿಲ್ನಲ್ಲಿ 50 ಸೇವಾ ಶುಲ್ಕವೂ ಸೇರಿ ಒಟ್ಟು 70 ರು ಒಂದು ಟೀಗೆ ಬಿಲ್ ಬಂದಿತ್ತು. ಈ ಬಿಲ್ ನೋಡಿದ ಅದನ್ನು ಸಾಮಾಜಿಕ ಜಾಲತಾಣಕ್ಕೆ ಅಪಲೋಡ್ ಮಾಡಿದ್ದಾನೆ. ಇದು ಈಗ ವೈರಲ್ ಆಗಿದೆ.
ವ್ಯಕ್ತಿಯೊಬ್ಬರು ಜೂನ್ 28 ರಂದು ದೆಹಲಿಯಿಂದ ಭೋಪಾಲ್ಗೆ ಶತಾಬ್ದಿ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅವರು ಅಪ್ಲೋಡ್ ಮಾಡಿದ ಬಿಲ್ ಇನ್ವಾಯ್ಸ್ಗಳ ಫೋಟೋಗಳು ಟ್ವಿಟರ್ ಮತ್ತು ರೆಡ್ಡಿಟ್ನಲ್ಲಿ ವೈರಲ್ ಆಗಿವೆ.

ಆದರೆ ರೈಲ್ವೇ ಇಲಾಖೆ ಪ್ರಕಾರ, ಪ್ರಯಾಣಿಕರು ತಮ್ಮ ಎಕ್ಸ್ಪ್ರೆಸ್ ರೈಲಿಗೆ ಟಿಕೆಟ್ ಕಾಯ್ದಿರಿಸುವಾಗ ಯಾವುದೇ ಆಹಾರವನ್ನು ಪೂರ್ವ ಆರ್ಡರ್ ಮಾಡದಿದ್ದರೆ, ಸವಾರಿಯ ಸಮಯದಲ್ಲಿ ಏನನ್ನಾದರೂ ಆರ್ಡರ್ ಮಾಡುವಾಗ ಅವರು 50 ರು. ಸೇವಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದೆ.
ಭಾರತೀಯ ರೈಲ್ವೇಯು 2018ರಲ್ಲಿ ಸುತ್ತೋಲೆಯನ್ನು ಹೊರಡಿಸಿದ್ದು, ಟಿಕೆಟ್ ಬುಕ್ ಮಾಡುವ ಸಮಯದಲ್ಲಿ ಆಹಾರ ಸೇವೆಗಳನ್ನು ಆಯ್ಕೆ ಮಾಡಿಕೊಳ್ಳದ ಪ್ರಯಾಣಿಕರು ಮತ್ತು ಆನ್ಬೋರ್ಡ್ನಲ್ಲಿ ಊಟವನ್ನು ಖರೀದಿಸಲು ನಿರ್ಧರಿಸಿದರೆ, ಅಧಿಸೂಚನೆಗೆ ಹೆಚ್ಚುವರಿಯಾಗಿ ಪ್ರತಿ ಊಟಕ್ಕೆ 50 ರು. ಹೆಚ್ಚುವರಿ ಮೊತ್ತ ಊಟಕ್ಕೆ ಅಡುಗೆ ಶುಲ್ಕವನ್ನು ಐಆರ್ಸಿಟಿಸಿಯ ಆನ್-ಬೋರ್ಡ್ ಮೇಲ್ವಿಚಾರಕರು ವಿಧಿಸುತ್ತಾರೆ ಎಂದು ಹೇಳಿದೆ.

ಭಾರತೀಯ ರೈಲ್ವೇ 2018ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ, ರಾಜಧಾನಿ ಅಥವಾ ಶತಾಬ್ದಿಯಂತಹ ರೈಲುಗಳಲ್ಲಿ ಕಾಯ್ದಿರಿಸುವಾಗ ಪ್ರಯಾಣಿಕರು ಊಟವನ್ನು ಕಾಯ್ದಿರಿಸದಿದ್ದರೆ, ಪ್ರಯಾಣದ ಸಮಯದಲ್ಲಿ ಚಹಾ, ಕಾಫಿ ಅಥವಾ ಆಹಾರವನ್ನು ಆರ್ಡರ್ ಮಾಡಲು 50 ರು. ಸೇವಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳುತ್ತದೆ. ಅದು ಕೇವಲ ಒಂದು ಕಪ್ ಚಹಾ ಕೂಡ.
ಮೊದಲು ಶತಾಬ್ದಿ ಮತ್ತು ರಾಜಧಾನಿಯಂತಹ ರೈಲುಗಳಲ್ಲಿ ಆಹಾರ ಬೆಲೆಗಳು ಕೈಗೆಟಕುವಂತಿತ್ತು. ಆದರೆ, ಈಗ ದರವನ್ನು ಹೆಚ್ಚಿಸಿರುವುದರಿಂದ ಪ್ರಯಾಣಿಕರು ಊಟದಿಂದ ಹೊರಗುಳಿಯಬಹುದು ಮತ್ತು ಪ್ರಯಾಣಕ್ಕಾಗಿ ಪಾವತಿಸಬಹುದು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications