ಬೆಂಗಳೂರು ಸಬ್ಅರ್ಬನ್ ರೈಲು ಯೋಜನೆ ವಿಳಂಬವಿಲ್ಲ: ಅಶ್ವಿನಿ ವೈಷ್ಣವ್
ನವದೆಹಲಿ, ಫೆಬ್ರವರಿ 11: ಬೆಂಗಳೂರು ಉಪನಗರ ಯೋಜನೆಯಲ್ಲಿ ಯಾವುದೇ ವಿಳಂಬವಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹಾಗೂ ಮೈಸೂರು ಸಂಸದ ಪ್ರತಾಪ್ ಸಿಂಹ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಎಸ್ಆರ್ಪಿಯ ಅನುಷ್ಠಾನ ಸಂಸ್ಥೆಯಾದ ಕರ್ನಾಟಕ ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಇದನ್ನು ಆರು ವರ್ಷಗಳ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಲು ಬದ್ಧವಾಗಿದೆ ಎಂದರು.
ಬಿಎಸ್ಆರ್ಪಿ ಕಾರ್ಯಗತಗೊಳಿಸಲು ಅಗತ್ಯವಿರುವ ಸುಮಾರು ಶೇ.85ರಷ್ಟು ಭೂಮಿ ಈಗಾಗಲೇ ಲಭ್ಯವಿದೆ. ಉಳಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಮುಂದುವರೆದಿದೆ ಎಂದು ತಿಳಿಸಿದರು.

ಟೆಂಡರ್ ಅಂತಿಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ, ಜನವರಿ 31ರವರೆಗೆ ಅಂದಾಜು 103.8 ಕೋಟಿ ರೂ. ಕೆ-ರೈಡ್ ತಾಂತ್ರಿಕ ದಾಖಲೆಗಳ ಅನುಮೋದನೆ ದೊರೆತಿದೆ.
ಇದಲ್ಲದೆ ನಗರ ಹಾಗೂ ಭೂ ಸಾರಿಗೆ ಇಲಾಖೆ ಆಯುಕ್ತರು ಕೆರೈಡ್ನೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸುತ್ತಾ ಇದ್ದಾರೆ. ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ರಚಿಸಲಾದ ಬೆಂಗಳೂರು ಮಿಷನ್ 2022 ವೇದಿಕೆಯಲ್ಲಿ ಪ್ರಗತಿ ಮೇಲ್ವಿಚಾರಣೆ ನಡೆಯುತ್ತಿದೆ.
ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ರೈಲು ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ - ಚಿಕ್ಕಬಾಣಾವರ ಕಾರಿಡಾರ್ ನಿರ್ಮಾಣ ಕುರಿತು 2021ರ ನವೆಂಬರ್ನಲ್ಲಿ ಟೆಂಡರ್ ಕರೆದಿತ್ತು.
ಈ ಮಾರ್ಗ 25.1 ಕಿ.ಮೀ ಉದ್ದವಿದ್ದು, 2026ಕ್ಕೆ ಕಾಮಗಾರಿ ಮುಗಿಸಲು ಗಡುವು ನೀಡಲಾಗಿದೆ. 2030ರಿಂದ ಸಬ್ ಅರ್ಬನ್ ರೈಲು ಬಳಕೆಗೆ ಲಭ್ಯವಾಗುವ ಸಾಧ್ಯತೆ ಇದೆ.
ಕೇಂದ್ರ ಸಚಿವ ಸಂಪುಟ ಆರ್ಥಿಕ ವ್ಯವಹಾರಗಳ ಸಮಿತಿ ಉಪನಗರ ರೈಲು ಯೋಜನೆಗೆ ಅನುಮೋದನೆ ನೀಡುವಾಗ ನಾಲ್ಕು ಕಾರಿಡಾರ್ ಪೈಕಿ ಆದ್ಯತೆ ಮೇರೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ - ದೇವನಹಳ್ಳಿ ಕಾರಿಡಾರ್ ಕೈಗೆತ್ತಿಕೊಂಡು ಮೂರು ವರ್ಷದಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿತ್ತು.
ಆದರೆ, ರಾಜ್ಯ ಸರಕಾರದ ಸೂಚನೆ ಮೇರೆಗೆ ಕೆ - ರೈಡ್, ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ - ಚಿಕ್ಕಬಾಣಾವರ ಮತ್ತು ಹೀಲಲಿಗೆ - ರಾಜಾನುಕುಂಟೆ ಕಾರಿಡಾರ್ ಕೈಗೆತ್ತಿಕೊಳ್ಳಲು ತೀರ್ಮಾನಿಸಿದೆ. 148.17 ಕಿ.ಮೀ ಉದ್ದದ 15,767 ಕೋಟಿ ರೂ. ಅಂದಾಜು ವೆಚ್ಚದ ಉಪನಗರ ರೈಲು ಯೋಜನೆಯಲ್ಲಿ ಪ್ರಮುಖವಾಗಿ ನಾಲ್ಕು ಕಾರಿಡಾರ್ಗಳು ಬರಲಿವೆ. ಈ ಪೈಕಿ ಕೆ - ರೈಡ್ ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ -ಚಿಕ್ಕಬಾಣಾವರ ಕಾರಿಡಾರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುವ ನಿರ್ಧಾರ ಮಾಡಿದೆ.
ಸಬ್ಅರ್ಬನ್ ರೈಲು ಯೋಜನೆಗೆ ಕೇಂದ್ರ ಸಿದ್ಧ
ಬೈಯಪ್ಪನಹಳ್ಳಿ - ಚಿಕ್ಕಬಾಣಾವರ ಕಾರಿಡಾರ್ನಲ್ಲಿ ಒಟ್ಟು 14 ರೈಲು ನಿಲ್ದಾಣಗಳು ಬರಲಿವೆ. ಬೈಯಪ್ಪನಹಳ್ಳಿ, ಕಸ್ತೂರಿನಗರ, ಸೇವಾನಗರ, ಬಾಣಸವಾಡಿ, ಕಾವೇರಿನಗರ, ನಾಗವಾರ, ಕನಕನಗರ, ಹೆಬ್ಬಾಳ, ಲೊಟ್ಟೆಗೊಲ್ಲಹಳ್ಳಿ, ಯಶವಂತಪುರ, ಜಾಲಹಳ್ಳಿ, ಶೆಟ್ಟಿಹಳ್ಳಿ, ಮೈದಾರಹಳ್ಳಿ ಹಾಗೂ ಚಿಕ್ಕಬಾಣಾವರ ರೈಲ್ವೆ ನಿಲ್ದಾಣಗಳು ಬರಲಿವೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications