ಲಾಕ್ಡೌನ್ ವಿಸ್ತರಣೆ ಬಗ್ಗೆ ಮೋದಿ ಬಳಿ ವಿಪಕ್ಷಗಳ ಮನವಿ ಏನು?
ನವದೆಹಲಿ, ಏಪ್ರಿಲ್ 8: ದೇಶದಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಯಲು ದೇಶಾದ್ಯಂತ ಹೇರಲಾಗಿರುವ ಲಾಕ್ಡೌನ್ ಏಪ್ರಿಲ್ 14 ರ ನಂತರವೂ ಮುಂದುವರೆಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ಮುಖಂಡರ ಜೊತೆ ವಿಡಿಯೋ ಕಾನ್ಪರೆನ್ಸ್ ಸಂವಾದ ನಡೆಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಅವರು, ಪ್ರಧಾನಿ ನಮ್ಮೆಲ್ಲರ ಸಲಹೆ ಕೇಳಿದ್ದಾರೆ. ಶೇ 88 ರಷ್ಟು ವಿರೋಧ ಪಕ್ಷಗಳು ಲಾಕ್ಡೌನ್ ಮುಂದುವರೆಸಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಕೆಲವು ವಿನಾಯಿತಿ ನೀಡಬೇಕು
ನಾವು ಪ್ರಧಾನಿಗೆ ಸಾಮಾನ್ಯ ಜನಕ್ಕೆ ಆಗುತ್ತಿರವ ಸಮಸ್ಯೆಗಳ ಬಗ್ಗೆಯೂ ಹೆಚ್ಚು ಗಮನ ಕೊಡಿ ಎಂದು ಸಲಹೆ ನೀಡಿದ್ದೇವೆ. ಆದರೆ, ಲಾಕ್ಡೌನ್ ನ್ನು ಹಾಟ್ಸ್ಪಾಟ್ ನಗರಗಳಲ್ಲಿ ಇನ್ನಷ್ಟು ಕಟ್ಟುನಿಟ್ಟುಗೊಳಿಸಿ, ಉಳಿದಂತೆ ಕೊರೊನಾ ಕಂಡು ಬರದ ಕಡೆಗೆ ಕೆಲವು ವಿನಾಯಿತಿ ನೀಡಬೇಕು ಎಂದು ಹೇಳಿದ್ದೇವೆ ಎಂದು ಅಜಾದ್ ಹೇಳಿದ್ದಾರೆ.

ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ
ಶೇ 88 ರಷ್ಟು ವಿರೋಧ ಪಕ್ಷಗಳು ಲಾಕ್ಡೌನ್ ಮುಂದುವರೆಸಬೇಕು ಎಂಬ ಬಗ್ಗೆ ಮೋದಿ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಲಾಕ್ಡೌನ್ ಮೇ ಏಪ್ರಿಲ್ ಅಂತ್ಯಂದವರೆಗೂ ಮುಂದುವರೆಯುತ್ತೆ ಎನ್ನುವ ವಿಶ್ವಾಸವಿದೆ ಎಂದು ಅಜಾದ್ ಅವರು ಹೇಳಿದ್ದಾರೆ.

ಏಪ್ರಿಲ್ 11 ರಂದು ಮುಖ್ಯಮಂತ್ರಿಗಳ ಸಭೆ
ವಿಡಿಯೋ ಸಂವಾದದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ಮುಖಂಡರ ಸಲಹೆ, ಅಭಿಪ್ರಾಯವನ್ನು ಪಡೆದುಕೊಂಡಿದ್ದಾರೆ. ಏಪ್ರಿಲ್ 11 ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕೂಡ ಕರೆದಿದ್ದಾರೆ. ಈ ಸಭೆ ಮುಗಿದ ನಂತರ ಲಾಕ್ಡೌನ್ ಬಗ್ಗೆ ಮೋದಿ ಅವರು ಅಂತಿಮ ನಿರ್ಧಾರ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

175 ಮಂದಿ ದೇಶದಲ್ಲಿ ಸಾವನ್ನಪ್ಪಿದ್ದಾರೆ
ಕೊರೊನಾ ಸೋಂಕಿನಿಂದ ಇದುವರೆಗೆ 149 ಮಂದಿ ದೇಶದಲ್ಲಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 32 ಮಂದಿ ಕೊರೊನಾದಿಂದ ಸಾವು. 24 ಗಂಟೆಯಲ್ಲಿ 773 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾಗಿವೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications