ರಯಾನ್ ಶಾಲೆ ವಿದ್ಯಾರ್ಥಿ ಹತ್ಯೆ: ಪ್ರಾಂಶುಪಾಲ ಸೇರಿ 4 ಬಂಧನ
ನವದೆಹಲಿ, ಸೆಪ್ಟೆಂಬರ್ 8: ಗುರುಗ್ರಾಮದ ರಿಯಾನ್ ಶಾಲೆಯಲ್ಲೇ ನಡೆದಿರುವ 2ನೇ ತರಗತಿ ವಿದ್ಯಾರ್ಥಿಯಾಗಿದ್ದ ಪ್ರದ್ಯುಮನ್ ಠಾಕೂರ್ (7) ವಿದ್ಯಾರ್ಥಿಯ ಕೊಲೆ ದೇಶಾದ್ಯಂತ ತೀವ್ರ ಆತಂಕ ಹುಟ್ಟಿಸಿದೆ.
ಶುಕ್ರವಾರ (ಸೆ. 8) ಬೆಳಗ್ಗೆ ಎಂದಿನಂತೆ ಶಾಲೆಗೆ ಬಂದಿದ್ದ ಪ್ರದ್ಯುಮನ್, ಶಾಲೆಯ ಶೌಚಾಲಯದಲ್ಲಿ ಶವವಾಗಿ ಸಿಕ್ಕಿದ್ದ. ಆತನನ್ನು ಕತ್ತು ಸೀಳಿ ಕೊಲೆಗೈಯ್ಯಲಾಗಿತ್ತು. ಆತನ ಮೃತದೇಹದ ಬಳಿ ಹತ್ಯೆಗೆ ಬಳಸಲಾಗಿರುವ ಚಾಕುವೂ ಲಭ್ಯವಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಶಾಲೆಯ ಪ್ರಾಂಶುಪಾಲ, ಶವವನ್ನು ಮೊದಲು ನೋಡಿದ ಶಾಲಾ ಬಸ್ ನ ಡ್ರೈವರ್ ಹಾಗೂ ಕೆಲವಾರು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಪೋಷಕರಿಂದ ದಾಂಧಲೆ
ವಾಟ್ಸಾಪ್ ನಲ್ಲಿ ಈ ಸುದ್ದಿ ಹರಡುತ್ತಿದ್ದಂತೆ ಶಾಲೆಯ ಮುಂದೆ ಭಾರೀ ಪ್ರಮಾಣದಲ್ಲಿ ಜಮಾಯಿಸಿದ ಜನರು ಶಾಲೆಯ ಒಳಗೆ ನುಗ್ಗಿ ಪೀಠೋಪಕರಣಗಳನ್ನು ಕಿತ್ತೆಸೆದು ದಾಂಧಲೆ ಮಾಡಿದರು. ಕಿಟಕಿಗಳ ಗಾಜು ಒಡೆದುಹಾಕಿದರು. ಆಗ ಶಾಲೆಗೆ ಧಾವಿಸಿದ ಪೊಲೀಸ್ ಸಿಬ್ಬಂದಿಯು ಪ್ರತಿಭಟನಾಕಾರರನ್ನು ಹೊರಹಾಕಿದರು.
ಆದರೂ, ಗೇಟ್ ನ ಮುಂದೆ ನಿಂತ ಜನರು ಶಾಲೆಯ ಆಡಳಿತ ಮಂಡಳಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರದ್ಯುಮನ್ ಸಾವಿಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿದರು.

ಏತನ್ಮಧ್ಯೆ, ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರು ಶಾಲೆ ಹಾಗೂ ಸುತ್ತಲಿನ ಕಟ್ಟಡಗಳ ಸಿಸಿಟಿವಿಯ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದಾರೆ.
ಬಾಲಕನ ತಂದೆಯು ಖಾಸಗಿ ಕಂಪನಿಯೊಂದರಲ್ಲಿ ಕ್ವಾಲಿಟಿ ಚೆಕಿಂಗ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಶುಕ್ರವಾರ ಬೆಳಗ್ಗೆಯೇ ತನ್ನ ಮಗನನ್ನು ಶಾಲೆಗೆ ಡ್ರಾಪ್ ಮಾಡಿ ಮನೆಗೆ ಬಂದಿದ್ದರು. ಹಾಗೆ ಮನೆಗೆ ಬಂದ ಕೆಲವೇ ನಿಮಿಷಗಳಲ್ಲಿ ಮಗನ ಸಾವಿನ ಸುದ್ದಿ ಕೇಳಿ ಆಘಾತಗೊಂಡಿದ್ದಾಗಿ ಅವರ ತಂದೆ ಕಣ್ಣೀರು ಹಾಕಿದ್ದಾರೆ.
ಇತ್ತ, ಪೊಲೀಸರಿಗೆ ಹೇಳಿಕೆ ನೀಡಿರುವ ಶಾಲೆಯ ವಾಹನ ಡ್ರೈವರ್, ಎಲ್ಲಾ ಮಕ್ಕಳೂ ಬೆಳಗಿನ ಪ್ರಾರ್ಥನೆಗಾಗಿ ಸೇರಿದ್ದಾಗ ತಾನು ಶೌಚಾಲಯಕ್ಕೆ ಹೋಗಿದ್ದು, ಆಗ ಬಾಲಕನ ಶವ ನೋಡಿದ್ದಾಗಿ ತಿಳಿಸಿದ್ದಾನೆ.
If children are murdered in schools,then on what belief can we leave them for 8 hrs there asks teary-eyed father of murdered 7-yr-old #Ryan pic.twitter.com/pgS7X7LEMq
— ANI (@ANI) September 8, 2017
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications