ಲಿವ್ ಇನ್ ಸಂಬಂಧದಲ್ಲಿ ಹುಟ್ಟಿದ ಮಗುವಿಗೂ ಇದೆ ಪೂರ್ವಿಕರ ಆಸ್ತಿಯಲ್ಲಿ ಹಕ್ಕು: ಸುಪ್ರೀಂ
ನವದೆಹಲಿ, ಜೂ. 14: ಮದುವೆಯಾಗದೇ ಬಹಳ ಕಾಲದಿಂದ ಗಂಡು ಮತ್ತು ಹೆಣ್ಣು ಒಟ್ಟಿಗೆ ಸಹಜೀವನ ನಡೆಸುತ್ತಿದ್ದರೆ ಆ ಸಂಬಂಧವನ್ನು ಮದುವೆ ಎಂದೇ ಪರಿಗಣಿಸಲಾಗುತ್ತದೆ. ಇಂಥ ಲಿವ್ ಇನ್ ಸಂಬಂಧದಲ್ಲಿ ಹುಟ್ಟಿದ ಮಗುವಿಗೆ ಸಂಗಾತಿಯ ಪೋಷಕರು ಆಸ್ತಿ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಪುರುಷ ಮತ್ತು ಮಹಿಳೆ ಮದುವೆಯಾಗದೆ ಒಂದೇ ಮನೆಯಲ್ಲಿ ಸಹಜೀವನ ನಡೆಸುತ್ತಿರುವಾಗ ಅದನ್ನು ಮದುವೆ ಎಂದೇ ಕಾನೂನು ಹೇಳುತ್ತದೆ. ಈ ಹಿನ್ನೆಲೆಯಲ್ಲಿ ಇದನ್ನು ಅಕ್ರಮ ಸಂಬಂಧ ಎಂದು ಹೇಳಲು ಬರುವುದಿಲ್ಲ. ಸಹಬಾಳ್ವೆ ನಡೆಸುವ ಈ ಸಂದರ್ಭದಲ್ಲಿ ಪುರುಷ ಹಾಗೂ ಮಹಿಳೆಗೆ ಹುಟ್ಟುವ ಮಗುವಿಗೆ ಆಸ್ತಿಯಲ್ಲಿ ಪಾಳು ಕೇಳುವ ಹಕ್ಕಿದೆ ಇದನ್ನು ಪೋಷಕರು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೊರ್ಟ್ ತೀರ್ಪು ನೀಡಿದೆ.
ಕೇರಳ ಹೈಕೋರ್ಟ್ 2009ರಲ್ಲಿ ನೀಡಿದ ತೀರ್ಪನ್ನು ಈ ಮೂಲಕ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಲಿವ್ ಇನ್ ಸಂಬಂಧವನ್ನು ಅಕ್ರಮ ಸಂಬಂಧ ಎಂದು ಬಗೆದಿದ್ದ ಕೇರಳ ಹೈಕೋರ್ಟ್, ಈ ಸಂಬಂಧದಲ್ಲಿ ಹುಟ್ಟಿದ್ದ ಮಗುವಿಗೆ ಪೂರ್ವಿಕರ ಆಸ್ತಿಯಲ್ಲಿ ಪಾಲು ನೀಡಲಾಗುವುದಿಲ್ಲ ಎಂದು ತೀರ್ಪು ನೀಡಿತ್ತು. ಈಗ ಇದೇ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಒಳಪಟ್ಟು ನ್ಯಾಯಾಧೀಶರಾದ ಎಸ್. ಅಬ್ದುಲ್ ನಜೀರ್ ಹಾಗೂ ವಿಕ್ರಮ್ ನಾಥ್ ಅವರನ್ನೊಳಗೊಂಡ ಪೀಠ ಈಗ ಈ ಮಹತ್ವದ ತೀರ್ಪು ಪ್ರಕಟಿಸಿ, ಕೇರಳ ಹೈಕೊರ್ಟ್ ನೀಡಿದ್ದ ತೀರ್ಪನ್ನು ರದ್ದು ಮಾಡಿದೆ.

ಓರ್ವ ಪುರುಷ ಹಾಗೂ ಮಹಿಳೆ ಒಟ್ಟಿಗೆ ಜೀವನ ನಡೆಸುತ್ತಿದ್ದರೆ ಅದನ್ನು ಮದುವೆಯೆಂದೇ ಪರಿಗಣಿಸಬೇಕು. ಕಾನೂನಿನ ಸಾಕ್ಷ್ಯಾಧಾರ ಸೆಕ್ಷನ್ 114ರಲ್ಲಿ ಈ ಬಗ್ಗೆ ಸ್ಪಷ್ಟವಾಗಿ ಹೇಳಲಾಗಿದೆ. ಪುರುಷ ಮಹಿಳೆ ಇಬ್ಬರು ಒಟ್ಟಿಗೆ ಸಹಜೀವನ ನಡೆಸುತ್ತಿದ್ದು, ವಿವಾಹವಾಗಿಲ್ಲ ಎಂದು ಕಂಡು ಬಂದರೂ ಇದಕ್ಕೆ ಮದುವೆ ಎಂದೇ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಸದರಿ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿದ್ದ ನ್ಯಾಯಾಲಯ ಕೊನೆಯ ತೀರ್ಪನ್ನು ನೀಡುವಲ್ಲಿ ಆಗಿರುವ ವಿಳಂಬವನ್ನು ಸುಪ್ರೀಂ ತಿಳಿದುಕೊಂಡಿದೆ. ಈ ಹಿನ್ನೆಲೆಯಲ್ಲಿ ಆಸ್ತಿ ವಿಚಾರವಾಗಿ ವಿತರಣಾ ಮೊಕದ್ದಮೆಗಳಲ್ಲಿ ಪ್ರಾಥಮಿಕ ತೀರ್ಪು ಹೊರಡಿಸಿದ ತಕ್ಷಣ ಅಂತಿಮ ತೀರ್ಪು ನೀಡುವ ಪ್ರಕ್ರಿಯೆಗಳನ್ನು ಆರಂಭ ಮಾಡುವಂತೆ ಭಾರತದ ಎಲ್ಲ ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
(ಒನ್ಇಂಡಿಯಾ ಸುದ್ದಿ)
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications