ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಗುಂಡು ಹೊಡೆದಿದ್ದಕ್ಕೆ ಎರಡು ದಿನ ರಿಮ್ಯಾಂಡ್ ರೂಮ್ ವಾಸ

|
Google Oneindia Kannada News

ನವದೆಹಲಿ, ಫೆಬ್ರವರಿ.02: ರಾಷ್ಟ್ರ ರಾಜಧಾನಿಯ ಶಾಹಿನ್ ಬಾಗ್ ನಲ್ಲಿ ಮೂರು ಸುತ್ತು ಗಾಳಿಯಲ್ಲಿ ಗುಂಡಿನ ದಾಳಿ ನಡೆಸಿದ ಆರೋಪಿ ಕಪಿಲ್ ಗುಜ್ಜರ್ ನನ್ನು ಎರಡು ದಿನಗಳ ಕಾಲ ಪೊಲೀಸ್ ರಿಮ್ಯಾಂಡ್ ರೂಮ್ ನಲ್ಲಿ ಇರಿಸುವಂತೆ ದೆಹಲಿ ಕೋರ್ಟ್ ಆದೇಶಿಸಿದೆ.

ಆರೋಪಿ ಕಪಿಲ್ ಗುಜ್ಜರ್ ನನ್ನು ಶನಿವಾರ ವಶಕ್ಕೆ ಪಡೆದಿದ್ದ ದೆಹಲಿ ಪೊಲೀಸರು ಕೋರ್ಟ್ ಎದುರು ಹಾಜರುಪಡಿಸಿದರು. ಈ ವೇಳೆ ಎರಡು ದಿನ ರಿಮ್ಯಾಂಡ್ ರೂಮ್ ನಲ್ಲಿ ಆರೋಪಿಯನ್ನು ಇರಿಸಿ ವಿಚಾರಣೆಗೆ ಒಳಪಡಿಸುವಂತೆ ಕೋರ್ಟ್ ಸೂಚನೆ ನೀಡಿದೆ.

A Man Who Fired Opened In Shaheen Bagh Sends to Police Remand Room

ಸಿಎಎ ಮತ್ತು ಶಾಹಿನ್ ಬಾಗ್ ಹೋರಾಟ: ದೆಹಲಿಯಲ್ಲಿ ಗುಂಡಿನ ಮೊರೆತಸಿಎಎ ಮತ್ತು ಶಾಹಿನ್ ಬಾಗ್ ಹೋರಾಟ: ದೆಹಲಿಯಲ್ಲಿ ಗುಂಡಿನ ಮೊರೆತ

ಫೆಬ್ರವರಿ.01ರ ಶನಿವಾರ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಶಾಹಿನ್ ಬಾಗ್ ನಲ್ಲಿ ಪ್ರತ್ಯಕ್ಷನಾದ ಆರೋಪಿ ಕಪಿಲ್ ಗುಜ್ಜರ್ ಗಾಳಿಯಲ್ಲಿ ಗುಂಡು ಹಾರಿಸಿದ್ದನು. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು.

ಹಿಂದೂ ಪರ ಘೋಷಣೆ ಕೂಗಿದ್ದ ಕಪಿಲ್ ಗುಜ್ಜರ್:

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲೇ ಆರೋಪಿ ಕಪಿಲ್ ಗುಜ್ಜರ್, ಹಿಂದೂ ಪರ ಘೋಷಣೆಯನ್ನು ಕೂಗಿದ್ದನು. ಪೊಲೀಸರು ಆತನನ್ನು ವಶಕ್ಕೆ ಪಡೆದಾಗಲೂ ಕೂಡಾ ಈ ದೇಶದಲ್ಲಿ ಹಿಂದೂಗಳದ್ದೇ ಆಟ ನಡೆಯಬೇಕು. ಇಲ್ಲಿ ಬೇರೆ ಯಾರ ಆಟವೂ ನಡೆಯುವುದಿಲ್ಲ ಎಂದು ಘೋಷಣೆ ಕೂಗಿದ್ದನು. ಹೀಗೆ ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲೂ ಸಖತ್ ಸದ್ದು ಮಾಡಿತ್ತು.

English summary
Citizenship Amendment Act: A Man Who Fired Opened In Shaheen Bagh Sends to Police Remand Room For Two Days By A Delhi Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X