243 ಜನರನ್ನು ಹೊತ್ತಿದ್ದ ಕೇರಳದ ಹಡಗು ನಾಪತ್ತೆ, 5 ತಿಂಗಳಿಂದ ಪತ್ತೆಯಿಲ್ಲ!
ನವದೆಹಲಿ, ಜೂನ್ 21: ಸುಮಾರು 243 ಜನರನ್ನು ಹೊತ್ತಿದ್ದ ಹಡಗೊಂದು ಈ ವರ್ಷದ ಜನವರಿ ತಿಂಗಳಿನಿಂದ ಕಾಣೆಯಾಗಿದ್ದು, ಇದುವರೆಗೂ ಈ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಕೇರಳದ ಎರ್ನಾಕುಲಂನಿಂದ 'ದೇವ ಮಾತಾ 2' ಎಂಬ ಹೆಸರಿನ ಈ ಹಡಗು ಜನವರಿ 12, 2019 ರಂದು ಹೊರಟಿತ್ತು. ಇದರಲ್ಲಿ 243 ಜನರಿದ್ದರು. ಪೆಸಿಫಿಕ್ ಸಾಗರದ ಕಡೆಗೆ ಹೊರಟಿದ್ದ ಈ ಹಡಗು ನಂತರ ಎಲ್ಲಿ ತೆರಳಿದೆ ಎಬ ಬಗ್ಗೆ ಮಾಹಿತಿ ಇದುವರೆಗೂ ಲಭ್ಯವಾಗಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಈಗಾಗಲೇ ವಿದೇಶಾಂಗ ಸಚಿವ ಜೈಶಂಕರ್ ಅವರು ಪೆಸಿಫಿಕ್ ಸಮುದ್ರದ ಬಳಿಯ ದೇಶಗಳಿಗೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಕುರಿತು ಯಾವುದೇ ಸಂಗತಿ ತಿಳಿದುಬಂದಿಲ್ಲ, ಭಾರತಕ್ಕೆ ತಿಳಿಸುವಂತೆ ಮನವಿ ಮಾಡಿದ್ದಾರೆ.

"ಹಡಗಿನ ಬಗ್ಗೆ ಕೇರಳ ರಾಜ್ಯ ಸರ್ಕಾರವನ್ನು ವಿಚಾರಿಸಿದಾಗ, ಪ್ರಯಾಣಿಕರು ಸರ್ಕಾರಕ್ಕೆ ಈ ಬಗ್ಗೆ ಮಾಹಿತಿ ನೀಡಿದ್ದು, ತಾವು ಪೆಸಿಫಿಕ್ ಸಾಗರದ ಕಡೆ ತೆರಳುತ್ತಿರುವುದಾಗಿ ತಿಳಿಸಿದ್ದರು" ಎಂದು ಕೇರಳ ಸರ್ಕಾರ ಹೇಳಿದೆ. ಆದರೆ ಪ್ರಯಾಣಿಕರು ಯಾಕಾಗಿ ತೆರಳಿದ್ದರು ಎಂಬ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications