ಲೋಕಸಭೆ ಬಳಿಕ ರಾಜ್ಯ ಸಭೆಯಲ್ಲೂ ಆಧಾರ್ ಮಸೂದೆ ಮಂಡನೆ
ನವದೆಹಲಿ, ಜುಲೈ 05: ಲೋಕಸಭೆಯ ನಂತರ ರಾಜ್ಯಸಭೆಯಲ್ಲಿ ಸೋಮವಾರ ಆಧಾರ್ ಮಸೂದೆಯನ್ನು ಮಂಡಿಸಲಾಯಿತು. ಲೋಕಸಬೆಯಲ್ಲಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಆಧಾರ್ ಮಂಡನೆಯ ಕುರಿತು ಪ್ರಸ್ತಾಪಿಸಿದರು.
ಹೊಸ ಮಸೂದೆಯ ಪ್ರಕಾರ ಜನರು ಬ್ಯಾಂಕ್ ಖಾತೆ ತೆರೆಯಲು ಮತ್ತು ಸಿಮ್ ಪಡೆಯಲು ಆಧಾರ್ ಕಡ್ಡಾಯವಲ್ಲ ಎನ್ನಲಾಗಿದೆ.
ಆಧಾರ್ ನಿಂದಾಗಿ ಖಾಸಗೀತನಕ್ಕೆ ಧಕ್ಕೆಯಾಗುತ್ತದೆ ಎಂಬ ಆರೋಪ ಸುಳ್ಳು. ಇದನ್ನು ಜನರ ಉಪಯೋಗಕ್ಕಾಗಿ ಮಂಡಿಸಲಾಗುತ್ತಿದೆ. ಇದು ಜನಸ್ನೇಹಿಯಾಗಿದ್ದು, ಸ್ವಚ್ಛೆಯಿಂದ ಜನರು ಆಧಾರ್ ಹೊಂದಬಹುದು, ಸುಪ್ರೀಂ ಕೋರ್ಟ್ ನ ಆದೇಶದಂತೆ ಎಲ್ಲಾ ಸೇವೆಗಳಿಗೂ ಅದು ಕಡ್ಡಾಯವಲ್ಲ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದರು.

ಆಧಾರ್ ನ ಸಾಂವಿಧಾನಿಕ ಮಾನ್ಯತೆಯನ್ನು ಈಗಾಗಲೇ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ಆಧಾರ್ ಬಗ್ಗೆ ಜನ ಸಾಮಾನ್ಯರಲ್ಲೂ ತಕರಾರಿಲ್ಲ. ಅವರೂ ಒಪ್ಪಿಕೊಂಡಿದ್ದಾರೆ. ಸಂತೋಷವಾಗಿದ್ದಾರೆ, ಹೀಗಿರುವಾಗ ನೀವ್ಯಾಕೆ ದುಃಖಿತರಾಗಿದ್ದೀರಿ ಎಂದು ಅವರು ವಿಪಕ್ಷಗಳನ್ನು ಪ್ರಶ್ನಿಸಿದ್ದರು.
ಸಾರ್ವತ್ರಿಕ ಗುರುತಿನ ಚೀಟಿಯಾದ ಆಧಾರ್ ನಿಂದ ಖಾಸಗೀತನಕ್ಕೆ ಧಕ್ಕೆಯುಂಟಾಗುತ್ತಿದೆ ಎಂಬ ಕೂಗು ಎದ್ದಿದ್ದ ಸಮಯದಲ್ಲಿ ಕಳೆದ ಸೆಪ್ಟೆಂಬರ್ 26 ರಂದು ಸುಪ್ರೀಂ ಕೋರ್ಟ್ ನೀಡಿದ್ದ ಮಹತ್ವದ ತೀರ್ಪಿನಲ್ಲಿ ಆಧಾರ್ ನ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಹಿಡಿಯಲಾಗಿತ್ತು. ಆಧಾರ್ ಕಾರ್ಡ್ ಅನ್ನು ಎಲ್ಲಾ ಸರ್ಕಾರಿ ಯೋಜನೆಗಳಿಗೆ ಕಡ್ಡಾಯವಾಗಿ ಬಳಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಆದರೆ ಬ್ಯಾಂಕ್ ಖಾತೆ ತೆರೆಯಲಿ, ಮೊಬೈಲ್ ಸಿಮ್ ಪಡೆಯಲು ಸೇರಿದಂತೆ ಇನ್ನಿತರ ಕೆಲವು ಸೇವೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದೂ ಅದು ತೀರ್ಪು ನೀಡಿತ್ತು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications