PM ಹಾಗೂ CM ಪರಿಹಾರ ನಿಧಿಗೆ ಅಮೀರ್ ಖಾನ್ ದೇಣಿಗೆ
ನವದೆಹಲಿ, ಏಪ್ರಿಲ್ 08: ಪ್ರಧಾನಮಂತ್ರಿ ಪರಿಹಾರ ನಿಧಿಗೆ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಾಲಿವುಡ್ ನಟ ಅಮೀರ್ ಖಾನ್ ದೇಣಿಗೆ ನೀಡಿದ್ದಾರೆ. ಕೊರೊನಾ ವೈರಸ್ ತಡೆಗೆ ಅಮೀರ್ ಖಾನ್ ಈ ರೀತಿ ನೆರವಿಗೆ ಬಂದಿದ್ದಾರೆ.
ಅಮೀರ್ ಖಾನ್ ದೇಣಿಗೆ ನೀಡಿರುವ ವಿಷಯವನ್ನು ಸಿನಿಮಾ ವಿಮರ್ಶಕ ತರಣ್ ಆದರ್ಶ್ ತಮ್ಮ ಟ್ವಿಟ್ಟರ್ ಖಾತೆಯೆ ಮೂಲಕ ತಿಳಿಸಿದ್ದಾರೆ. ಆದರೆ, ಅಲ್ಲಿ ಅಮೀರ್ ಖಾನ್ ನೀಡಿರುವ ಹಣದ ಮೊತ್ತವನ್ನು ಬಹಿರಂಗಪಡಿಸಿಲ್ಲ. ಅಮೀರ್ ಖಾನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿಲ್ಲ.
ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಪರಿಹಾರ ನಿಧಿಯ ಜೊತೆಗೆ ಸಿನಿಮಾ ಕಾರ್ಮಿಕರಿಗೂ ಅಮೀರ್ ನೆರವಾಗಿದ್ದಾರೆ. ತಮ್ಮ ಮುಂದಿನ ಸಿನಿಮಾ 'ಲಾಲ್ ಸಿಂಗ್ ಛಡ್ಡಾ' ಚಿತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಹಾಯ ಮಾಡಲಿದ್ದಾರೆ.

ಬಾಲಿವುಡ್ನ ಅನೇಕ ಸ್ಟಾರ್ಗಳು ಈಗಾಗಲೇ ಪ್ರಧಾನ ಮಂತ್ರಿ ಅಥವಾ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಆದರೆ, ಅಮೀರ್ ಖಾನ್ ಯಾಕೆ ನೆರವಿಗೆ ಬಂದಿಲ್ಲ ಎನ್ನುವ ಪ್ರಶ್ನೆ ಕೆಲವರಿಗೆ ಇತ್ತು. ಆದರೆ, ಕೊನೆಗೂ ಅಮೀರ್ ಸಹಾಯ ಹಸ್ತಾ ಚಾಚಿದ್ದಾರೆ.
#AamirKhan donates to...
— taran adarsh (@taran_adarsh) April 7, 2020
⭐ #PMCares
⭐ #Maharashtra Chief Minister Relief Fund
⭐ Extended support to the daily wage workers of his forthcoming film #LaalSinghChaddha.#COVID19Pandemic #CoronaVirus #Covid_19 #COVID19
ನಟ ಅಕ್ಷಯ್ ಕುಮಾರ್, ರಜನಿಕಾಂತ್, ಕತ್ರೀನಾ ಕೈಫ್, ಶಾರೂಖ್ ಖಾನ್, ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕ ಚೋಪ್ರಾ, ಸೈಫ್ ಅಲಿ ಖಾನ್, ಕರೀನಾ ಕಪೂರ್ ಸೇರಿದಂತೆ ಅನೇಕರು ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications