ರಿಂಕು ಶರ್ಮಾ ಹತ್ಯೆಗೆ ಅಮಿತ್ ಶಾ ಹೊಣೆ: ಎಎಪಿ ಆರೋಪ
ನವದೆಹಲಿ, ಫೆಬ್ರವರಿ 13: ದೆಹಲಿ ಮಂಗೊಲ್ಪುರಿ ಪ್ರದೇಶದಲ್ಲಿ ಶುಕ್ರವಾರ ನಡೆದ 25 ವರ್ಷದ ಬಿಜೆಪಿ ಕಾರ್ಯಕರ್ತನ ರಿಂಕು ಶರ್ಮಾ ಹತ್ಯೆಗೆ ಗೃಹ ಸಚಿವ ಅಮಿತ್ ಶಾ ಅವರೇ ಜವಾಬ್ದಾರರು ಎಂದು ಆಮ್ ಆದ್ಮಿ ಪಕ್ಷ ಶನಿವಾರ ಆರೋಪಿಸಿದೆ.
'ದೆಹಲಿಯಲ್ಲಿ ಕೊಲೆ ಪ್ರಕರಣಗಳು ಈಗ ಸಾಮಾನ್ಯವಾಗಿಬಿಟ್ಟಿದೆ. ಈ ಕೊಲೆಗಳಿಗೆ ಗೃಹ ಸಚಿವರು ಹೊಣೆಗಾರರು. ಬಿಜೆಪಿ ಸರ್ಕಾರದ ಆಡಳಿತದಲ್ಲಿ ಹಿಂದೂಗಳು ಸುರಕ್ಷಿತರಾಗಿಲ್ಲ' ಎಂದು ಎಎಪಿ ವಕ್ತಾರ ಸೌರಭ್ ಭಾರದ್ವಾಜ್ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ದೆಹಲಿಯಲ್ಲಿನ ಅಹಿತಕರ ಘಟನೆಗಳಿಗೆ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

'ದೆಹಲಿಯಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ತೀರಾ ಹದಗೆಟ್ಟಿದೆ. ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕೇಂದ್ರ ಗೃಹ ಸಚಿವಾಲಯ ವಿಫಲವಾಗಿರುವುದನ್ನು ಇಂತಹ ಅನೇಕ ಘಟನೆಗಳು ತೋರಿಸುತ್ತವೆ. ಇಂತಹ ಕ್ರೂರ ಕೊಲೆಗಳನ್ನು ನಾವು ಖಂಡಿಸುತ್ತೇವೆ ಮತ್ತು ದೆಹಲಿಯಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ನಂಬಿಕೆಯನ್ನು ಜನರಲ್ಲಿ ಮರಳಿ ತರುವಂತೆ ಮಾಡಲು ಸೂಕ್ತ ಕ್ರಮಗಳನ್ನು ತುರ್ತಾಗಿ ತೆಗೆದುಕೊಳ್ಳಲು ಆಗ್ರಹಿಸುತ್ತೇವೆ' ಎಂದರು.
ಬರ್ಥಡೇ ಪಾರ್ಟಿ ವೇಳೆ ವಾಗ್ದಾದ ನಡೆದಿದ್ದು, ಅಲ್ಲಿಂದ ಮನೆಗೆ ಮರಳುತ್ತಿದ್ದ ರಿಂಕು ಶರ್ಮಾ ಅವರನ್ನು ಜನರ ಗುಂಪೊಂದು ಚಾಕುವಿನಿಂದ ಇರಿದು ಕೊಲೆ ಮಾಡಿತ್ತು. ಇದು ಕೋಮು ದ್ವೇಷದ ಕಾರಣ ನಡೆದ ಕೊಲೆ ಎಂದು ಕುಟುಂಬದವರು ಆರೋಪಿಸಿದ್ದರು. ಇದನ್ನು ದೆಹಲಿ ಪೊಲೀಸರು ನಿರಾಕರಿಸಿದ್ದರು. ಐವರನ್ನು ಬಂಧಿಸಲಾಗಿದ್ದು, ಪ್ರಕರಣವನ್ನು ಕ್ರೈಂ ಬ್ರಾಂಚ್ಗೆ ವರ್ಗಾಯಿಸಲಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications