ದೆಹಲಿ ಜನರಿಗೆ ಭರ್ಜರಿ ಕೊಡುಗೆ ನೀಡಿದ ಆಪ್ ಸರ್ಕಾರ
ನವದೆಹಲಿ, ಫೆ. 25 : ದೆಹಲಿ ಚುನಾವಣೆಯಲ್ಲಿ ಅಭೂತಪೂರ್ವ ಜಯಗಳಿಸಿ ಅಧಿಕಾರಪಡೆದ ಆಮ್ ಆದ್ಮಿ ಪಕ್ಷ ಜನರಿಗೆ ಭರ್ಜರಿ ಉಡುಗೊರೆ ನೀಡಿದೆ. ಪ್ರತಿ ತಿಂಗಳು 400 ಯುನಿಟ್ವರೆಗೆ ವಿದ್ಯುತ್ ಬಳಕೆ ಮಾಡಿದರೆ ಶೇ 50 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಘೋಷಿಸಿದೆ.
ಬುಧವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ಪ್ರತಿ ತಿಂಗಳು ಬಳಸುವ ವಿದ್ಯುತ್ನಲ್ಲಿ 400 ಯೂನಿಟ್ ಬಳಕೆವರೆಗೆ ಶೇ.50ರಷ್ಟು ರಿಯಾಯಿತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು. [ಚಿತ್ರಗಳಲ್ಲಿ : ಸಿಎಂ ಆದ ಅರವಿಂದ್ ಕೇಜ್ರಿವಾಲ್]

ಪ್ರತಿ ತಿಂಗಳ 400 ಯೂನಿಟ್ ಬಳಕೆವರೆಗೆ ಶೇ.50ರಷ್ಟು ರಿಯಾಯಿತಿ ನೀಡಲಾಗುತ್ತದೆ. 400 ಯೂನಿಟ್ಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದರೆ ಪೂರ್ಣದರ ವಿಧಿಸಲಾಗುತ್ತದೆ. ವಿದ್ಯುತ್ ರಿಯಾಯಿತಿಯಿಂದ ಸರ್ಕಾರಕ್ಕೆ ಪ್ರತಿ ತಿಂಗಳು 70 ಕೋಟಿ ರೂಪಾಯಿ ಬೊಕ್ಕಸಕ್ಕೆ ಹೊರೆಯಾಗಲಿದೆ ಎಂದರು. [ಆಮ್ ಆದ್ಮಿ ಪ್ರಣಾಳಿಕೆಯಲ್ಲೇನಿದೆ?]
ಉಚಿತವಾಗಿ ನೀರು : ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳಿಗೆ 20 ಸಾವಿರ ಲೀಟರ್ ನೀರು ಉಚಿತವಾಗಿ ಪೂರೈಸಲಾಗುತ್ತದೆ. ಉಚಿತವಾಗಿ ನೀರಿನ ಕೊಡುಗೆ ನೀಡಲು 20 ಕೋಟಿ ರೂ. ವೆಚ್ಚವಾಗಲಿದೆ.
#AAP govt in Delhi keeps poll promises, slashes power tariffs, offers free water upto 20,000 liter per family.#आपकीसरकार
— Aam Aadmi Party (@AamAadmiParty) February 25, 2015 ಉಚಿತ ನೀರು, ಸಬ್ಸಿಡಿ ವಿದ್ಯುತ್ ಯೋಜನೆಗಳನ್ನು ಮಾರ್ಚ್ 1ರಿಂದ ಜಾರಿಗೆ ತರಲಾಗುತ್ತದೆ. ಸರ್ಕಾರದ ಈ ಯೋಜನೆಯಿಂದ ದೆಹಲಿಯ 18 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications